ಮುಡಾ | ಸಿಎಂ ಪತ್ನಿ ಪಾರ್ವತಿ & ಸಚಿವ ಬೈರತಿ ಸುರೇಶ್‌ಗೆ ಇ.ಡಿ ನೋಟಿಸ್, ಹೈಕೋರ್ಟ್‌ಗೆ ಇಬ್ಬರಿಂದಲೂ ಅರ್ಜಿ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ನೋಟಿಸ್​​ ಜಾರಿ ಮಾಡಿದೆ.

ಮುಡಾ ಹಗರಣದಲ್ಲಿ ಎ2 ಆರೋಪಿಯಾಗಿರುವ ಪಾರ್ವತಿ ಸಿದ್ದರಾಮಯ್ಯ ಮತ್ತು ಮುಡಾದಿಂದ ಕಡತಗಳನ್ನು ತೆಗೆದುಕೊಂಡು ಹೋಗಿರುವ ಆರೋಪದ ಮೇಲೆ ಸಚಿವ ಬೈರತಿ ಸುರೇಶ್‌ ಅವರಿಗೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇ.ಡಿ ನೋಟಿಸ್‌ನಲ್ಲಿ ತಿಳಿಸಿದೆ.

ಇ.ಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಹೈಕೋರ್ಟ್​​ನ​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಅವರು ಪೀಠಕ್ಕೆ ಮನವಿ ಮಾಡಿದರು. ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...