ಮುಡಾ | ಸಿಎಂ ಪತ್ನಿ ಪಾರ್ವತಿ, ಬೈರತಿ ಸುರೇಶ್‌ಗೆ ಇ.ಡಿ ಸಮನ್ಸ್​; ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

Date:

ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೀಡಿದ್ದ ಇ.ಡಿ ಸಮನ್ಸ್​ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಮುಡಾ ಹಗರಣದಲ್ಲಿ ಎ2 ಆರೋಪಿಯಾಗಿರುವ ಪಾರ್ವತಿ ಸಿದ್ದರಾಮಯ್ಯ ಮತ್ತು ಮುಡಾದಿಂದ ಕಡತಗಳನ್ನು ತೆಗೆದುಕೊಂಡು ಹೋಗಿರುವ ಆರೋಪದ ಮೇಲೆ ಸಚಿವ ಬೈರತಿ ಸುರೇಶ್‌ ಅವರಿಗೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇ.ಡಿ ನೋಟಿಸ್‌ ನೀಡಿತ್ತು.

ಇ.ಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಹೈಕೋರ್ಟ್​​ನ​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಎರಡು ಅರ್ಜಿ ವಿಚಾರಣೆ ನಡೆಸಿ, ಮುಂದಿನ ವಿಚಾರಣೆವರೆಗೆ ಅಂದರೆ ಫೆಬ್ರವರಿ 10ರ ವರೆಗೆ ಇ.ಡಿ ಸಮನ್ಸ್​ಗೆ ತಡೆಯಾಜ್ಞೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಂ ಪತ್ನಿ ಪಾರ್ವತಿ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದು, “14 ಸೈಟ್ ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪವಿದೆ. ಅಪರಾಧದಿಂದ ಗಳಿಸಿದ ಹಣವಿಲ್ಲದಿದ್ದರೂ ತನಿಖೆ ನಡೆಸುತ್ತಿದೆ. ಹೀಗಾಗಿ ತನಿಖೆಗೆ ತಡೆ ನೀಡುವಂತೆ” ಕೋರ್ಟ್​ಗೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮುಡಾ ಪ್ರಕರಣ ಸಿಬಿಐ ತನಿಖೆಗೆ ಮನವಿ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಸಚಿವ ಬೈರತಿ ಸುರೇಶ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, “ಬೈರತಿ ಸುರೇಶ್ ಯಾವುದೇ ಅನುಸೂಚಿತ ಕೇಸ್‌ನ ಆರೋಪಿಯಲ್ಲ. ಆರೋಪಿಯಲ್ಲದಿದ್ದರೂ ಇ.ಡಿಯಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಇದೇ ಮಾದರಿಯ ಮತ್ತೊಂದು ಕೇಸ್‌ನಲ್ಲಿ ಸಮನ್ಸ್ ರದ್ದುಪಡಿಸಲಾಗಿದೆ. ಡಾ.ನಟೇಶ್‌ಗೆ ಇ.ಡಿ ನೀಡಿದ್ದ ಸಮನ್ಸ್‌ನ್ನು ಹೈಕೋರ್ಟ್ ರದ್ದುಪಡಿಸಿದೆ. ಹೀಗಾಗಿ ಮುಂದಿನ ವಿಚಾರಣೆವರೆಗೂ ಇ.ಡಿಯಿಂದ ರಕ್ಷಣೆ ಒದಗಿಸಬೇಕು” ಎಂದು ಮನವಿ ಮಾಡಿದರು.

ಸಿಎಂ ಪ್ರಕರಣದ ವಿಚಾರಣೆ ನಡೆಯುವಾಗ ಇದರಲ್ಲೇಕೆ ಮುಂದುವರಿಯುತ್ತೀರಾ? ಅಪರಾಧದಿಂದ ಗಳಿಸಿದ ಸಂಪತ್ತು ಈಗಿಲ್ಲವಲ್ಲ. ಇ.ಡಿ ತನಿಖೆಯಿಂದ ಹೈಕೋರ್ಟ್ ಕಾಯ್ದಿರಿಸಿರುವ ಕೇಸ್‌ಗೆ ಹಾನಿಯಾಗಬಾರದು. ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸುವಂತಿಲ್ಲವೆಂದು ಆದೇಶ ನೀಡಿದ್ದೇನೆ. ಈಗ ಇ.ಡಿ ತನಿಖೆಗೆ ಅವಕಾಶ ನೀಡುವುದು ಹೇಗೆ? ಈಗಲೇ ತನಿಖೆ ನಡೆಸಬೇಕಾದ ತುರ್ತು ಅಗತ್ಯವೇನಿದೆ” ಎಂದು ನ್ಯಾ. ಎಂ.ನಾಗಪ್ರಸನ್ನ ಪ್ರಶ್ನಿಸಿದರು.

“ವಿಚಾರಣೆಗೆ ಹಾಜರಾಗಿ ದಾಖಲೆಗಳನ್ನು ಹಾಜರುಪಡಿಸಿ ಎಂದಷ್ಟೇ ಹೇಳಿದ್ದೇವೆ. ಇದರಿಂದ ಹೈಕೋರ್ಟ್ ಮುಂದಿರುವ ಕೇಸ್‌ಗೆ ಅಡ್ಡಿಯಾಗುವುದಿಲ್ಲ” ಎಂದು ಇ.ಡಿ ಪರ ಎಎಸ್‌ಜಿ ಅರವಿಂದ್ ಕಾಮತ್ ಸ್ಪಷ್ಟಪಡಿಸಿದರು.

“ಸಿಬಿಐ ತನಿಖೆಗೆ ಒಪ್ಪಿಸುವ ಬಗ್ಗೆ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆಯ ವರದಿ ಸಲ್ಲಿಕೆ ಮುಂದೂಡಿದ್ದೇವೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅಂತಿಮ ವರದಿ ಸಲ್ಲಿಕೆ ಮುಂದೂಡಿದ್ದೇವೆ. ಇಡಿ ನಡೆಸುತ್ತಿರುವ ತನಿಖೆ ಲೋಕಾಯುಕ್ತ ಪೊಲೀಸ್ ಎಫ್‌ಐಆರ್ ಆಧರಿಸಿದೆ. ಹೀಗಾಗಿ ಇಡಿ ಸಮನ್ಸ್ ನಿಂದ ಹೈಕೋರ್ಟ್ ಕಾಯ್ದಿರಿಸುವ ಕೇಸ್ ಮೇಲೆ ಪರಿಣಾಮವಾಗಬಹುದು. ಡಾ. ನಟೇಶ್ ಪ್ರಕರಣದಲ್ಲಿ ಹೈಕೋರ್ಟ್ ಇಡಿ ಸಮನ್ಸ್ ರದ್ದುಪಡಿಸಿದೆ. ಇಡಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ ಅಷ್ಟೇ ಎಂದು ಇಡಿ ಪರ ವಕೀಲರು ಹೇಳಿದ್ದಾರೆ. ಆದ್ರೆ, ಇ.ಡಿ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ” ನ್ಯಾಯಾಧೀಶರು ತಿಳಿಸಿ ವಿಚಾರಣೆ ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...