ಮುಡಾ ಅಕ್ರಮ | ರಾಜಭವನ ಚಲೋ ನಡೆಸಿ, ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

Date:

ಸದನದಲ್ಲಿ ಮುಡಾ ವಿಚಾರವಾಗಿ ಚರ್ಚಿಸಲು ಅವಕಾಶ ನೀಡದೆ ಇರುವುದನ್ನು ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಗುರುವಾರ ರಾಜಭವನ ಚಲೋ ನಡೆಸಿ, ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ನೀಡಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ- ಜೆಡಿಎಸ್ ಪ್ರಮುಖರು ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ಭಾಗವಹಿಸಿದ್ದರು.

ಚರ್ಚಿಸಿ ಮುಂದಿನ ಹೋರಾಟ: ವಿಜಯೇಂದ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ಸಂಬಂಧ ಮುಂದಿನ ದಿನಗಳಲ್ಲಿ ನಡೆಸಲಿರುವ ಹೋರಾಟದ ಕುರಿತು ನಾವು ಮತ್ತು ನಮ್ಮ ಎನ್‍ಡಿಎ ಭಾಗೀದಾರ ಪಕ್ಷ ಜೆಡಿಎಸ್ ಜೊತೆ ಚರ್ಚೆ ಮಾಡಿ ತೀರ್ಮಾನಿಸುತ್ತೇವೆ” ಎಂದು ಶಾಸಕ ಬಿ ವೈ ವಿಜಯೇಂದ್ರ ಪ್ರಕಟಿಸಿದರು.

ಕಲಾಪವನ್ನು ಅರ್ಧಕ್ಕೆ ಮೊಟಕುಗೊಳಿಸಿದ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಇ.ಡಿ ವಿರುದ್ಧ ಧರಣಿ ನಡೆಸಿದ್ದಲ್ಲದೆ, ಇ.ಡಿ ವಿರುದ್ಧ ಎಫ್‍ಐಆರ್ ದಾಖಲಿಸಿ ಬೆದರಿಸುವ ತಂತ್ರಗಾರಿಕೆ ಮಾಡಿದ್ದಾರೆ” ಎಂದು ಆರೋಪಿಸಿದರು.

“ವಾಲ್ಮೀಕಿ ಹಗರಣ ಎಲ್ಲಿ ತಮ್ಮ ಬುಡಕ್ಕೆ ಬರಲಿದೆಯೋ ಎಂದು ಮುಖ್ಯಮಂತ್ರಿಗಳು ಹೆದರಿಕೊಂಡಿದ್ದಾರೆ. ಮೂಡ ಹಗರಣದಲ್ಲಿ ಸಿದ್ದರಾಮಯ್ಯನವರು ಚರ್ಚೆ ನಡೆಸಿ ವಿಪಕ್ಷಕ್ಕೆ ಸವಾಲು ಹಾಕಲಿದ್ದಾರೆ ಎಂದು ನಿರೀಕ್ಷೆಯಲಿದ್ದೆವು. ಆದರೆ, ಮುಖ್ಯಮಂತ್ರಿಗಳು ಪಲಾಯನವಾದ ಮಾಡಿದ್ದಾರೆ. ಚರ್ಚೆಯಿಂದ ಓಡಿ ಹೋಗುವ ಕೆಲಸ ಮಾಡಿದ್ದಾರೆ” ಎಂದು ಟೀಕಿಸಿದರು.

“ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಹಗರಣವನ್ನು ಸಿಬಿಐ ತನಿಖೆಗೆ ಕೊಡಬೇಕು; ಮಾನ್ಯ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂಬ ಒತ್ತಾಯವನ್ನು ರಾಜ್ಯಪಾಲರ ಗಮನಕ್ಕೂ ತಂದಿದ್ದೇವೆ ಎಂದು ವಿವರಿಸಿದರು.

ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, “ಈ ಸರಕಾರವು ಬೃಹತ್ ಹಗರಣಗಳಲ್ಲಿ ಪಾಲ್ಗೊಂಡಿರುವುದು ಜಗಜ್ಜಾಹೀರಾಗಿದೆ. ಇತಿಹಾಸದಲ್ಲಿ ಯಾವುದೇ ಸದನದಲ್ಲೂ ಆಡಳಿತ ಪಕ್ಷಕ್ಕೆ ಈ ರೀತಿಯ ಅವಮಾನ ಆಗಿಲ್ಲ. ಮುಖ್ಯಮಂತ್ರಿಗಳೇ ಲೂಟಿ ಮಾಡಿದ 2 ಹಗರಣಗಳು ಚರ್ಚೆಗೆ ಬಂದಿವೆ” ಎಂದರು.

“3 ರಿಂದ 4 ಸಾವಿರ ಕೋಟಿಯ ಮೂಡ ಹಗರಣ, 187 ಕೋಟಿಯ ವಾಲ್ಮೀಕಿ ನಿಗಮದ ಹಗರಣಗಳು ನಡೆದಿವೆ. ಸಿದ್ದರಾಮಯ್ಯನವರು ಹಿಂದೆ ಡಿಸಿಎಂ ಆಗಿದ್ದಾಗ ಮೂಡ ಹಗರಣ ಆರಂಭವಾಗಿತ್ತು. ಸಿಎಂ ಪತ್ನಿಗೆ 14 ನಿವೇಶನ, ಇವರ ಬೆಂಬಲಿಗರಿಗೆ ನೂರಾರು ನಿವೇಶನ ಹಂಚಿ ಲೂಟಿ ಮಾಡಿದ್ದಾರೆ” ಎಂದು ಟೀಕಿಸಿದರು.

ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಮಾತನಾಡಿ, “ಕಾನೂನಿನಡಿ ಎಸ್.ಸಿ ಜಮೀನನ್ನು ಕೊಂಡುಕೊಳ್ಳುವುದು ತಪ್ಪು. ತಪ್ಪು ಮಾಡಿದ್ದು ಗೊತ್ತಿದ್ದ ಕಾರಣ ಸದನದಲ್ಲಿ ಉತ್ತರಿಸದೆ, ದಾಖಲೆ ಮಂಡನೆಗೆ ಅವಕಾಶ ಕೊಡದೆ, ಹೊರಗಡೆ ಉತ್ತರ ಕೊಟ್ಟಿದ್ದಾರೆ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...