ಮುಡಾ ಅಕ್ರಮ | ಬಿಜೆಪಿ ನಾಟಕ ಎಷ್ಟು ದಿನ ನಡೆಯುತ್ತೋ ನಡೆಯಲಿ: ಶಿವಲಿಂಗೇಗೌಡ

Date:

ಮುಡಾ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಯಾವುದೇ ತಪ್ಪು ಆಗಿಲ್ಲ. ಇದೊಂದು ಬಿಜೆಪಿ ನಾಟಕ ಅಷ್ಟೇ. ಎಷ್ಟು ದಿನ ನಾಟಕ ನಡೆಯುತ್ತದೆ ಎಂದು ನೋಡೋಣ ಎಂದು ಶಾಸಕ ಶಿವಲಿಂಗೇಗೌಡ ಸವಾಲು ಹಾಕಿದರು.

ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, “ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡುತ್ತೇವೆ. ಬಿಜೆಪಿ, ಜೆಡಿಎಸ್ ನವರು ಸಿಎಂ ಕುಟುಂಬದ ಹೆಸರು ಇರುವುದಕ್ಕೆ ಇದನ್ನು ಇಷ್ಟು ದೊಡ್ಡದು ಮಾಡುತ್ತಿದ್ದಾರೆ. ಹಾಗಾದರೆ ಸಿಎಂ ಕುಟುಂಬದ ಜಮೀನು 3 ಎಕರೆ 16 ಗುಂಟೆ ವಾಪಸ್ ಕೊಡಲು ಆಗುತ್ತಾ” ಎಂದು ಪ್ರಶ್ನಿಸಿದರು.

“ಸಿಎಂ ಅವರ ವ್ಯಕ್ತಿತ್ವ ಹಾಳು ಮಾಡಲು ಬಿಜೆಪಿ ಕುತಂತ್ರ ಮಾಡುತ್ತಿದೆ. ಅವತ್ತು ಸೈಟ್ ಕೊಟ್ಟು, ಈಗ ಸದನದಲ್ಲಿ ಬಂದು ಚರ್ಚೆ ಮಾಡಿದ್ರೆ ಹೇಗೆ? ಸಭೆಯಲ್ಲಿ ಸ್ಪೀಕರ್ ರೂಲಿಂಗ್ ವಿರುದ್ಧ ಹೋಗಲು ಆಗುತ್ತಾ?” ಎಂದು ಕೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರದ್ದು ತಪ್ಪಾಗಿದ್ರೆ ನಾವೇ ಶರಣಾಗುತ್ತೇವೆ. ಸುಮ್ಮನೆ ಸಿದ್ದರಾಮಯ್ಯ ಘನತೆ ಹಾಳು ಮಾಡಬೇಡಿ. ರಾಜ್ಯದ ಜನ ಇದನ್ನು ನಂಬುವುದಿಲ್ಲ. ಸಿದ್ದರಾಮಯ್ಯ ವ್ಯಕ್ತಿತ್ವ ರಾಜ್ಯಕ್ಕೆ ಗೊತ್ತಿದೆ” ಎಂದರು.

“ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸ್ತೇವೆ ಎಂಬ ಆಸೆ ಇದ್ರೆ ಬಿಜೆಪಿ ಬಿಟ್ಟುಬಿಡಲಿ. ಅವರಿಗೆ ಸೈಟ್ ಕೊಟ್ಟವರು ಅವರೇ. ಈಗ ಕೂಗಾಡುತ್ತಿರುವವರು ಅವರೇ” ಎಂದು ಶಿವಲಿಂಗೇಗೌಡ ಬಿಜೆಪಿ ವಿರುದ್ಧ  ಕಿಡಿಕಾರಿದರು.

ಮುಡಾ ಹಗರಣದ ಬಗ್ಗೆ ನ್ಯಾಯಾಂಗ ತನಿಖೆ

“ಮುಡಾ ಪ್ರಕರಣವನ್ನು ರಾಜ್ಯ ಸರಕಾರ ಜು.14ರಂದೇ ನ್ಯಾಯಾಂಗ ತನಿಖೆಗೆ ಒಪ್ಪಿಸಿದೆ. ತನಿಖೆಯ ಚೌಕಟ್ಟು ಕೂಡ ನಿಗದಿಯಾಗಿದೆ. ಹೀಗಾಗಿ, ನ್ಯಾಯಿಕ ಸ್ವರೂಪದ ಈ ಪ್ರಕರಣದ ಬಗ್ಗೆ ಚರ್ಚೆಗೆ ಅವಕಾಶವಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...