ಮುಡಾ ಅಕ್ರಮ | ಮೈಸೂರು ಡಿಸಿ ವರ್ಗಾವಣೆ ಮಾಡಿದ್ದು ಏಕೆ ಸಿದ್ದರಾಮಯ್ಯನವರೇ: ಪ್ರಲ್ಹಾದ್‌ ಜೋಶಿ ಪ್ರಶ್ನೆ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ ಅಕ್ರಮ) ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲವೆಂದರೆ ಮೈಸೂರು ಡಿಸಿ ವರ್ಗಾವಣೆ ಮಾಡಿದ್ದು ಏಕೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಮುಡಾ ಹಗರಣದಲ್ಲಿ ಬಹಳ ದೊಡ್ಡ ಪ್ರಮಾಣದ ಭ್ರಷ್ಟಾಚಾರ ಆಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ” ಎಂದರು.

“ಮುಡಾ ಹಗರಣದಲ್ಲಿ 4 ಸಾವಿರ ಕೋಟಿ ಅಕ್ರಮ ಎಸಗಿರುವ ಆರೋಪ ಕೇಳಿಬಂದಿದೆ. ಬಿಜೆಪಿ ಕಾಲದಲ್ಲಿ ಕೊಟ್ಟಿದ್ದು ಎನ್ನುತ್ತಾರೆ. ಈ ಎಲ್ಲ ಅವ್ಯವಹಾರ ಆಗಿದ್ದು 2013 ರಿಂದ 2018 ರವರೆಗೆ. 2017ರಲ್ಲಿ ಈ ನಿರ್ಣಯಗಳಾಗಿವೆ. ಸಿದ್ದರಾಮಯ್ಯ ಗಮನದಲ್ಲಿ ಇದ್ದೇ ಆಗಿರುವ ಬಹುದೊಡ್ಡ ಹಗರಣ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವ್ಯವಹಾರ ನಡೆಯುತ್ತಿದೆ ಎಂದು ಡಿಸಿ ಪತ್ರ ಬರೆದಿದ್ದರು. ಕಳೆದ ಒಂದು ವರ್ಷದಲ್ಲಿ 15 ಕ್ಕೂ ಹೆಚ್ಚು ಪತ್ರ ಬರೆದಿದ್ದಾರೆ. ಅದರಲ್ಲಿ ಸಿದ್ದರಾಮಯ್ಯ ಹಾಗೂ ಮಗ ಜಮೀನು ವಶಪಡಿಸಿಕೊಂಡಿದ್ದಾರೆ ಎಂದಿದ್ದಾರೆ” ಎಂದರು.

“ಬಿಜೆಪಿಯದ್ದು 40 ಪರ್ಸೆಂಟ್ ಸರ್ಕಾರ ಎಂದರು. ಅದಕ್ಕೆ ಯಾವ ದಾಖಲೆಯೂ ಇಲ್ಲ. ಕೋರ್ಟ್ ಮಾನಹಾನಿ ಕೇಸ್ ಹಾಕಲಾಗಿತ್ತು. ಅದಕ್ಕೆ ವಾರೆಂಟ್ ತಗೆದುಕೊಂಡಿದ್ದಾರೆ. ಇದೀಗ ಎರಡು ಹಗರಣಗಳಲ್ಲಿ ಮುಖ್ಯಮಂತ್ರಿಯದ್ದೇ ಪಾತ್ರ ಇದೆ” ಎಂದು ದೂರಿದರು.

“ಸಿದ್ದರಾಮಯ್ಯ ಅವರು ಸ್ವಂತಕ್ಕೆ ಲಾಭ ಮಾಡಿಕೊಳ್ಳಲು ಮಾಡಿರುವ ಬಹುದೊಡ್ಡ ಹಗರಣ. ಇದರ ತನಿಖೆ ಸಿಬಿಐ ಕಡೆಯಿಂದ ನಡೆಯಬೇಕು. ಸಿದ್ದರಾಮಯ್ಯ ಏನೂ ಮಾಡಿಲ್ಲ ಎಂದಾದರೆ ಸಿಬಿಐ ತನಿಖೆಗೆ ಕೊಡಲಿ” ಎಂದು ಒತ್ತಾಯಿಸಿದರು.

“ಸಿದ್ದರಾಮಯ್ಯ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೆದಿಲ್ಲ. ಬೋಗಸ್ ಗ್ಯಾರಂಟಿ ಹೆಸರಲ್ಲಿ ಯಾವ ಕೆಲಸಗಳೂ ನಡೆಯುತ್ತಿಲ್ಲ. ದಿವಾಳಿ ಸರ್ಕಾರದಲ್ಲಿ ಲೂಟಿ ಮಾಡುವ ಕೆಲಸ ನಡೆಯುತ್ತಿದೆ. ಬಣವೆಗೆ ಬೆಂಕಿ ಹಚ್ಚಿ ಸಿಗರೇಟ್ ಹೇಗೆ ಹಚ್ಕೋಬೇಕು ಎಂಬುದನ್ನು ಇವರಿಂದ ನೋಡಿ ಕಲಿಯಬೇಕು. ದಲಿತರ ಹಣ ಗ್ಯಾರಂಟಿಗೆ ಉಪಯೋಗ ಮಾಡಿಕೊಂಡಿದ್ದಾರೆ” ಎಂದು ಜೋಶಿ ಹರಿಹಾಯ್ದರು.

“ಒಂದು ಕಡೆ ವಾಲ್ಮೀಕಿ ಹಗರಣ, ಮತ್ತೊಂದು ಕಡೆ ಮುಡಾ ಹಗರಣ. ವಾಲ್ಮೀಕಿ ಹಗರಣ ಮುಚ್ಚಿ ಹಾಕಲು ಎಸ್​​ಐಟಿಯವರು ಕೆಲವರನ್ನು ಬಂಧಿಸಿದ್ದಾರೆ. ಅವರಿಗೆ ಅವಕಾಶ ಕೊಟ್ಟು ನೋಟಿಸ್ ಕೊಟ್ಟಿದ್ದಾರೆ. ನಾಗೇಂದ್ರ ಅವರಿಗೆ ಶುಕ್ರವಾರ ನೋಟಿಸ್ ಕೊಟ್ಟಿದ್ದಾರೆ. ಎಲ್ಲವನ್ನೂ ಮುಚ್ಚಿ ಹಾಕಲು ಷಡ್ಯಂತ್ರ ನಡೆದಿದೆ. ಸಿದ್ದರಾಮಯ್ಯ ಸರ್ಕಾರ ಒಂದು ಕಡುಭ್ರಷ್ಟ ಸರ್ಕಾರ” ಎಂದು ಜೋಶಿ ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...