ಮುಡಾ ಅಕ್ರಮ | ಬಿಜೆಪಿ ಪ್ರತಿಭಟನೆ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ: ಬಿ ವೈ ವಿಜಯೇಂದ್ರ

Date:

ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿಗೂ ಮೀರಿದ ದೊಡ್ಡ ಹಗರಣ ಬಯಲಾಗಿದೆ. ಇದರಿಂದ ಮುಖ್ಯಮಂತ್ರಿಗಳು ಆತಂಕಗೊಂಡಿದ್ದಾರೆ. ಸಿಎಂ ಆದೇಶದ ಮೇರೆಗೆ ಪೊಲೀಸರು ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದರು.

ಮೈಸೂರಿನಲ್ಲಿ ಮುಡಾ ಎದುರು ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, “ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಮಾಡಲು ತೀರ್ಮಾನ ಮಾಡಿದ್ದೆವು. ಆದರೆ, ನಮ್ಮ ಕಾರ್ಯಕರ್ತರನ್ನು ಮತ್ತು ಮುಖಂಡರನ್ನು ಬಂಧಿಸುವ ಪ್ರಯತ್ನ ಖಂಡನೀಯ” ಎಂದರು.

“ಮಾಜಿ ಸಚಿವ ನಾಗೇಂದ್ರ ಅವರು ಇ.ಡಿ ಬಂಧನಕ್ಕೆ ಒಳಗಾಗಿದ್ದಾರೆ. ಕಾಂಗ್ರೆಸ್ಸಿನ ಪಾಪದ ಕೊಡ ತುಂಬಿದೆ. ದಲಿತರ ಹಣ ಲೂಟಿ ಮಾಡಿದ್ದೀರಿ; ಅಲ್ಲದೆ ದಲಿತರು, ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಲಪಟಾಯಿಸಿದ್ದೀರಿ. ಇದನ್ನು ಸಿಬಿಐ ತನಿಖೆಗೆ ಕೊಡಬೇಕಲ್ಲದೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ಕ್ಷಣದಲ್ಲೂ ಸರಕಾರ ಬೀಳಬಹುದು. ಸಿದ್ದರಾಮಯ್ಯರ ಸರಕಾರ ದಬ್ಬಾಳಿಕೆ ಮಾಡುತ್ತಿದೆ. ತುಘಲಕ್ ದರ್ಬಾರ್ ಮಾಡಲು ಮುಂದಾಗಿದೆ. ಬಿಜೆಪಿ, ಬಿಜೆಪಿಯ ಕಾರ್ಯಕರ್ತರು ಇದೆಲ್ಲದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ” ಎಂದರು.

“ಹೋರಾಟ ಹತ್ತಿಕ್ಕುವುದು ಅಕ್ಷಮ್ಯ ಅಪರಾಧ. ಬೆಳಗ್ಗೆ 7 ಗಂಟೆಗೇ ನಮ್ಮ ಮುಖಂಡರನ್ನು ಬಂಧಿಸಿದ್ದಾರೆ. ನೈಸ್ ರಸ್ತೆ ಬಳಿ ನಮ್ಮ ಬ್ಯಾನರ್, ಬಾವುಟಗಳನ್ನು ಕಿತ್ತು ಬಿಸಾಕಿ, ಕಾರ್ಯಕರ್ತರಿಗೆ ಕೊಡಲು ತಂದ ತಿಂಡಿಯನ್ನೂ ಒದ್ದು ಬಿಸಾಕಿದ್ದಾರೆ” ಎಂದು ಆಕ್ಷೇಪಿಸಿದರು.

“ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ವಾಲ್ಮೀಕಿ ನಿಗಮದ ಹಣವನ್ನು ದೋಚಿ ಕಾಂಗ್ರೆಸ್ ಸರಕಾರವು ಚುನಾವಣೆಗೆ ಬಳಸಿದೆ. ರಾಜ್ಯವನ್ನು ಕಾಂಗ್ರೆಸ್ ಎಟಿಎಂ ಆಗಿ ಪರಿವರ್ತನೆ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿಯವರಿಗೆ ದುಡ್ಡನ್ನು ಕರ್ನಾಟಕದಿಂದ ಕಳುಹಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಮುಖ್ಯಮಂತ್ರಿಗಳು ಮುಡಾ ಹಗರಣ ಮೂಲಕ ತಮ್ಮ ಕುಟುಂಬಕ್ಕೆ ನಿವೇಶನ ಹಂಚಿಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪುಡಾರಿಗಳಿಗೆ ನಿವೇಶನ ನೀಡಿದ 5 ಸಾವಿರ ಕೋಟಿಯ ಹಗರಣ ಇದಾಗಿದೆ. ಈ ಮೂಲಕ ಕಾಂಗ್ರೆಸ್ ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಉತ್ತರ ನೀಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...