ಮುಡಾ ನಿವೇಶನ ಹಂಚಿಕೆ | ಬಿಜೆಪಿಯಿಂದ ರಾಜಕೀಯ ಪ್ರೇರಿತ ಆರೋಪ: ಸಿಎಂ ಸಿದ್ದರಾಮಯ್ಯ

Date:

ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿ-ಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ.ರೂ.ಗಳನ್ನು ಕೊಟ್ಟುಬಿಡಬೇಕಾ” ಎಂದು ಪ್ರಶ್ನಿಸಿದರು.

“ನಮ್ಮ ಜಮೀನು ಒತ್ತುವರಿ ಮಾಡಿಕೊಂಡಿರುವುದನ್ನು ಅವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ನಿವೇಶನಗಳನ್ನು 50:50 ಅನುಪಾತದಲ್ಲಿ ನೀಡಿದ್ದಾರೆ. ಅದಕ್ಕೆ ನಾವು ಒಪ್ಪಿದ್ದೇವೆ. ಇಂಥ ಕಡೆಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಅಧಿಕಾರದಲ್ಲಿತ್ತು

“ನಿವೇಶನ ನೀಡಿದಾಗ 2021ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3 ನೇ ಅಥವಾ 4 ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ರಾಜಕೀಯ ಪ್ರೇರಿತ ಆಪಾದನೆ” ಎಂದು ಹೇಳಿದರು.

ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ

ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ನಾವು ಇಂತಹ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ. ಅಕ್ಟೋಬರ್ 2023 ರಲ್ಲಿ ಸಚಿವರು 50:50 ಅನುಪಾತದಲ್ಲಿ ಜಮೀನು ಕೊಡುವುದನ್ನು ರದ್ದು ಮಾಡಿ ಎಂದು ಬರೆದಿದ್ದಾರೆ. ಬರೆಯದೇ ಹೋದರೂ ಕೂಡ 62 ಕೋಟಿ ರೂ.ಗಳನ್ನು ಕಾನೂನಿನ ಪ್ರಕಾರ ಕೊಟ್ಟುಬಿಡಲಿ. ನಮಗೆ ಕೊಟ್ಟಿರುವ 14 ನಿವೇಶನಗಳ ಬೆಲೆ ಇದಕ್ಕಿಂತಲೂ ಕಡಿಮೆ ಇದೆ. ಒಂದು ಎಕರೆಗೆ 44 ಸಾವಿರ ಚದರ ಅಡಿಯಾದರೆ ನನಗೆ ಕೊಟ್ಟಿರುವುದು 38.264 ಚದರ ಅಡಿ. ಒಂದು ಎಕರೆಗಿಂತ ಕಡಿಮೆಯಾಗಿದೆ. ಪರಿಹಾರವಾಗಿ ಕೊಟ್ಟಿರುವ ಜಮೀನಿನ ಬೆಲೆ ಎಷ್ಟಿದೆ ಎಂದು ನನಗೆ ತಿಳಿದಿಲ್ಲ. ನನಗೆ 62 ಕೋಟಿ ಕೊಟ್ಟುಬಿಡಲಿ” ಎಂದರು.

ನಗರಾಭಿವೃದ್ಧಿ ಸಚಿವರು ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತವನ್ನು ತೆಗೆದುಕೊಂಡು ಬಂದಿದ್ದಾರೆ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ ಕಡತ ತಂದಿಲ್ಲ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...