ಮುಡಾ ಹಗರಣ | ದೇವೇಗೌಡರ ಮೇಲೆ ಬಿಎಸ್‌ವೈ ಗುರುತರ ಆರೋಪ, ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸಲಿ: ರಮೇಶ್‌ ಬಾಬು

Date:

ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ 2011 ಮಾರ್ಚ್‌ 3ರಂದು ಅಂದಿನ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ತಮ್ಮ ಕುಟುಂಬಕ್ಕೆ 48 ನಿವೇಶನಗಳ ಹಂಚಿಕೆ ಮಾಡಿರುವುದನ್ನು ಪ್ರಸ್ತಾಪಿಸಿದ್ದಾರೆ. ಅವರ ಅಷ್ಟು ಆರೋಪಗಳು ವಿಧಾನ ಪರಿಷತ್ತಿನ ನಡವಳಿಕೆಗಳಲ್ಲಿ ದಾಖಲಾಗಿದ್ದು, ಈ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸುವುದೇ ಎಂದು ಮಾಜಿ ಎಂಎಲ್‌ಸಿ ರಮೇಶ್‌ ಬಾಬು ಸವಾಲು ಹಾಕಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಯಡಿಯೂರಪ್ಪ ಆರೋಪದಲ್ಲಿ ಎಚ್. ಡಿ ಕುಮಾರಸ್ವಾಮಿ ರವರಿಗೆ 300 x 200 ಅಡಿ ಅಳತೆಯ (ಸುಮಾರು 60,000 ಅಡಿ) ನಿವೇಶನ ಸಂಖ್ಯೆ.17(ಬಿ) ಹಂಚಿಕೆಯಾಗಿರುವುದಾಗಿ ಹೇಳಿದ್ದಾರೆ. ಅದೇ ರೀತಿ ಅವರ ಕುಟುಂಬದ ಸವಿತಾ Co/ ಬೀರೇಗೌಡ ಎಂಬುವರಿಗೆ 130x 110 ಅಡಿ (ಸುಮಾರು 14,300 ಅಡಿ) ಅಕ್ರಮ ಹಂಚಿಕೆಯ ಕುರಿತು ಆರೋಪ ಮಾಡಿದ್ದಾರೆ. ಇದರ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸಲಿ” ಎಂದು ಆಗ್ರಹಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಮಾತನಾಡುವಾಗ ಬಿ ಎಸ್ ಕೆ ಮೈನಿಂಗ್ ಕಂಪನಿಯಿಂದ ದೇವೇಗೌಡರ ಕುಟುಂಬದವರಿಗೆ 167 ಕೋಟಿ ಜಮಾ ಆಗಿದೆ ಎಂದು ಆರೋಪಿಸಿದ್ದಾರೆ. ಮುಂದುವರೆದು ಜಂಥ್ಯಾಂಕ್ಸ್ ಜಂತ್ ಕಲ್ ಎಂಟರ್ಪ್ರೈಸಸ್ ಗೆ 40 ವರ್ಷ ನವೀಕರಣ ಮಾಡಿ ಅದರಲ್ಲಿ ಇವರ ಕುಟುಂಬದವರು ಪಾರ್ಟ್‌ನರ್ ಇದ್ದಾರೆ ಎಂದು ಆರೋಪಿಸಿದ್ದಾರೆ. ತಾವು ಮಾಡಿದ ಆರೋಪಗಳಿಗೆ ಪೂರಕವಾಗಿ ದಾಖಲೆಗಳನ್ನು ಸಭಾಪತಿಗಳಿಗೆ ಸದನದಲ್ಲಿ ಮಂಡಿಸಿದ್ದಾರೆ” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಡಿಯೂರಪ್ಪನವರು ಸದನದಲ್ಲಿ ಮುಡಾ ಅಕ್ರಮ ನಿವೇಶನ ಹಂಚಿಕೆ ಕುರಿತು ದೇವೇಗೌಡರ ಕುಟುಂಬದ ಮೇಲೆ ಮಾಡಿರುವ ಗಂಭೀರ ಆರೋಪದ ಮೇಲೆ ತನಿಖೆಗೆ ಒತ್ತಾಯಿಸಲು ತಾಕತ್ತು ಇದೆಯೇ? ಯಡಿಯೂರಪ್ಪನವರು ದಾಖಲೆಗಳನ್ನು ಸಭಾಪತಿಗಳಿಗೆ ಮಂಡಿಸಿದರೂ ಇಲ್ಲಿಯವರೆಗೆ ಬಿಜೆಪಿ ಯಾವ ಕಾರಣಕ್ಕೆ ಮೌನವಾಯಿತು” ಎಂದು ಪ್ರಶ್ನಿಸಿದ್ದಾರೆ.

“ಅವಕಾಶವಾದದ ರಾಜಕಾರಣ ಮತ್ತು ಅನುಕೂಲ ಸಿಂಧು ರಾಜಕಾರಣಕ್ಕೆ ಶರಣಾಗಿರುವ ಬಿಜೆಪಿ ಮುಡಾ ಹಗರಣದಲ್ಲಿ ಯಾವ ಯಾವ ಬಿಜೆಪಿ ನಾಯಕರು ಎಷ್ಟು ಎಷ್ಟು ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬುದನ್ನು ಬಹಿರಂಗಗೊಳಿಸಲಿ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಮೈಸೂರಿನ ಮುಡಾ ದಲ್ಲಿ ಹೆಚ್ಚು ಹಗರಣಗಳು ನಡೆದಿರುತ್ತವೆ” ಎಂದಿದ್ದಾರೆ.

ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪರಿಹಾರ ರೂಪದಲ್ಲಿ ಭೂ ಮಾಲೀಕರಿಗೆ ನಿವೇಶನ ನೀಡಿರುವುದನ್ನು ಬಿಜೆಪಿ ರಾಜಕೀಯ ಕಾರಣಕ್ಕಾಗಿ ಆರೋಪ ಮಾಡುತ್ತಿದೆ. ಆದರೆ ಯಾವುದೇ ಭೂಮಿಯನ್ನು ಕಳೆದುಕೊಳ್ಳದೆ ತಮ್ಮ ರಾಜಕೀಯ ಪ್ರಭಾವದ ಮೂಲಕ ಒಂದೇ ಕುಟುಂಬ 48 ನಿವೇಶನಗಳನ್ನು ಪಡೆದುಕೊಂಡ ಅಕ್ರಮ ಕುರಿತು ಬಿಜೆಪಿ ಚಕಾರ ಎತ್ತುವುದಿಲ್ಲ. ಅದೇ ರೀತಿ ಒಬ್ಬನೇ ವ್ಯಕ್ತಿಗೆ ಯಾವ ಆಧಾರದ ಮೇಲೆ 60 ಸಾವಿರ ಅಡಿ ಅಳತೆಯ ನಿವೇಶನ ಮಂಜೂರಾಗಿತ್ತು? ಸದನದ ಒಳಗೆ ದಾಖಲೆಯಿಟ್ಟು ಮಾತನಾಡಿದ ಯಡಿಯೂರಪ್ಪನವರಿಗೆ ಸಾರ್ವಜನಿಕವಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ ಏಕೆ” ಎಂದು ರಮೇಶ್‌ ಬಾಬು ಕೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...