ಮುಡಾ ಹಗರಣ | ಭಂಡತನ ಬಿಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ: ಬಿ ವೈ ವಿಜಯೇಂದ್ರ ಆಗ್ರಹ

Date:

ಮೈಸೂರು ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿಗಳು ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡುವ ಮುಂಚಿತವಾಗಿ ಸಿಬಿಐ ತನಿಖೆಗೆ ಪ್ರಕರಣವನ್ನು ಹಸ್ತಾಂತರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಮುಡಾ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಸ್ನೇಹಮಯಿ ಕೃಷ್ಣ ಅವರು ಬಯಲಿಗೆ ಎಳೆದಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಇದರ ವಿರುದ್ಧ ಸದನದ ಒಳಗಡೆ ಹಾಗೂ ಸದನದ ಹೊರಗಡೆ ಹೋರಾಟ ಮಾಡುತ್ತ ಬಂದಿದ್ದೇವೆ. ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದ್ದೆವು” ಎಂದು ವಿವರಿಸಿದರು.

“ಮುಡಾ ಹಗರಣವು ನಿನ್ನೆ ಮಹತ್ವದ ತಿರುವು ಪಡೆದುಕೊಂಡಿದೆ. ಜಾರಿ ನಿರ್ದೇಶನಾಲಯವು (ಇಡಿ) 300 ಕೋಟಿಗೂ ಹೆಚ್ಚು ಬೆಲೆಬಾಳುವ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳು ತಮ್ಮ ಕುಟುಂಬಕ್ಕೆ ಅಕ್ರಮವಾಗಿ 14 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಹಗರಣದಿಂದ ಮುಡಾಕ್ಕೆ ಕೋಟಿಗಟ್ಟಲೆ ನಷ್ಟವಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ಬಡವರಿಗೆ ಮಂಜೂರಾಗಬೇಕಿದ್ದ ನಿವೇಶನಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು, ದಲ್ಲಾಳಿಗಳಿಗೆ ನೀಡಿದ್ದು ಸ್ಪಷ್ಟವಾಗಿದೆ. ಇದರಿಂದ ಸರಕಾರ ಮತ್ತು ಮುಡಾಕ್ಕೆ ಸಾವಿರಾರು ಕೋಟಿ ನಷ್ಟವಾದುದು ಮತ್ತೊಮ್ಮೆ ಋಜುವಾತಾಗಿದೆ. ಪ್ರಕರಣವನ್ನು ಬಯಲಿಗೆ ಎಳೆದ ಸ್ನೇಹಮಯಿ ಕೃಷ್ಣ ಅವರ ಧ್ವನಿ ಹತ್ತಿಕ್ಕುವ ಕೆಲಸವನ್ನು ರಾಜ್ಯ ಸರಕಾರ ಮಾಡಿತ್ತು” ಎಂದು ಆಕ್ಷೇಪಿಸಿದರು.

ಈ ಸುದ್ದಿ ಓದಿದ್ದೀರಾ? ಗದ್ದುಗೆ ಗುದ್ದಾಟ | ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಉಳಿಯುತ್ತಾ?

“ಸ್ನೇಹಮಯಿ ಕೃಷ್ಣ ಅವರ ಮೇಲೆ ಆರೋಪ ಹೊರಿಸಿ ಅವರನ್ನು ಬಂಧಿಸುವ ಹಂತಕ್ಕೂ ರಾಜ್ಯ ಸರಕಾರ ಹೋಗಿತ್ತು. ಇ.ಡಿ. ಕೈಗೊಂಡ ಕ್ರಮಗಳಿಂದ ಸಿದ್ದರಾಮಯ್ಯನವರು ಮತ್ತೊಮ್ಮೆ ಅಪರಾಧಿ ಸ್ಥಾನದಲ್ಲಿ ನಿಂತಿದ್ದಾರೆ. ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಕೊಟ್ಟ ರಾಜ್ಯಪಾಲರ ಮೇಲೂ ಅಪವಾದ ಹೊರಿಸುವ ಕೆಲಸವನ್ನು ಸಿದ್ದರಾಮಯ್ಯನವರ ನೇತೃತ್ವದ ಸರಕಾರದ ಸಚಿವರು ಮಾಡಿದ್ದರು. ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ಕೊಟ್ಟದ್ದೇ ಅಪರಾಧ ಎಂಬಂತೆ ಬಿಂಬಿಸಲು ಯತ್ನಿಸಿದ್ದರು. ನಂತರ ರಾಜ್ಯ ಹೈಕೋರ್ಟ್, ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ಕೊಟ್ಟದ್ದು ಸರಿಯಾಗಿದೆ. ಮೇಲ್ನೋಟಕ್ಕೆ ಮುಡಾ ಹಗರಣದಲ್ಲಿ ತಪ್ಪು, ಅವ್ಯವಹಾರ ನಡೆದಿದೆ ಎಂದಿತ್ತು. ಅಲ್ಲದೆ, ಸಿಎಂ ಕುಟುಂಬಕ್ಕೆ ಅಕ್ರಮವಾಗಿ 14 ನಿವೇಶನ ಕೊಟ್ಟಿದ್ದಾರೆ ಎಂಬುದು ಮೇಲ್ನೋಟಕ್ಕೇ ಋಜುವಾತಾದಾದುದನ್ನು ಹೈಕೋರ್ಟ್ ಮತ್ತೊಮ್ಮೆ ಹೇಳಿತ್ತು” ಎಂದು ವಿವರಿಸಿದರು.

“ನಮಗೆ ಸಿದ್ದರಾಮಯ್ಯನವರ ಬಗ್ಗೆ ದ್ವೇಷ ಇಲ್ಲ; ಆದರೆ, ಅಪರಾಧ ಆದ ಸಂದರ್ಭದಲ್ಲಿ, ತಪ್ಪಾಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಈಗಾಗಲೇ ರಾಜೀನಾಮೆ ಕೊಡಬೇಕಾಗಿತ್ತು. ಮುಖ್ಯಮಂತ್ರಿಗಳು ಸ್ವಯಂಪ್ರೇರಿತರಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕಿತ್ತು. ಸಿದ್ದರಾಮಯ್ಯನವರು ಹಗರಣವನ್ನು ದೀರ್ಘ ಕಾಲ ಎಳೆದುಕೊಂಡು ಬಂದಿದ್ದಾರೆ” ಎಂದು ಆಕ್ಷೇಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...