ಮುಖ್ತಾರ್ ಅನ್ಸಾರಿಗೆ ಜೈಲಿನಲ್ಲಿ ‘ಸ್ಲೋ ಪಾಯ್ಸನ್’ ನೀಡಲಾಗಿದೆ; ಪುತ್ರ ಉಮರ್ ಅನ್ಸಾರಿ ಆರೋಪ

Date:

ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ಸಂಜೆ ಜೈಲಿನಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ಜೈಲಿನಲ್ಲಿ ‘ಸ್ಲೋ ಪಾಯ್ಸನ್’ ನೀಡಲಾಗಿದೆ ಎಂದು ಮುಖ್ತಾರ್ ಪುತ್ರ ಉಮರ್ ಅನ್ಸಾರಿ ಶುಕ್ರವಾರ ಮುಂಜಾನೆ ಆರೋಪಿಸಿದ್ದಾರೆ.

ಗುರುವಾರ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮುಖ್ತಾರ್‌ ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಹೃದಯ ಸ್ತಂಭನದಿಂದ ಅವರು ಮೃತಪಟ್ಟಿದ್ದಾರೆ. ಅವರಿಗೆ ‘ಸ್ಲೋ ಪಾಯ್ಸನ್’ ನೀಡಲಾಗಿದೆ ಎಂದು ಅವರ ಪುತ್ರ ಆರೋಪಿಸಿದ್ದಾರೆ. ಆದರೆ, ಆರೋಪವನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ.

ಮುಖ್ತಾರ್ ಅವರು ‘ಮೌ ಸದರ್‌’ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದರು. ಅವರು 2005ರಿಂದ ಉತ್ತರ ಪ್ರದೇಶ ಮತ್ತು ಪಂಜಾಬ್‌ ಜೈಲಿನಲ್ಲಿದ್ದರು. ಅವರ ವಿರುದ್ಧ 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಪ್ರದೇಶದ ವಿವಿಧ ನ್ಯಾಯಾಲಯಗಳು ಎಂಟು ಪ್ರಕರಣಗಳಲ್ಲಿ ಮುಖ್ತಾರ್‌ ಅವರಿಗೆ ಶಿಕ್ಷೆ ವಿಧಿಸಿದ್ದವು. 2022ರ ಸೆಪ್ಟೆಂಬರ್‌ನಿಂದ ಅವರನ್ನು ಬಂದಾ ಜೈಲಿನಲ್ಲಿ ಇರಿಸಲಾಗಿತ್ತು. ಅಲ್ಲದೆ, ಕಳೆದ ವರ್ಷ ಉತ್ತರ ಪ್ರದೇಶ ಪೊಲೀಸರು ನೀಡಿದ್ದ 66 ದರೋಡೆಕೋರರ ಪಟ್ಟಿಯಲ್ಲಿ ಮುಖ್ತಾರ್ ಹೆಸರಿತ್ತು.

“ನನ್ನ ತಂದೆ ‘ಸ್ಲೋ ಪಾಯ್ಸನ್’ಗೆ ಒಳಗಾಗುತ್ತಿರುವುದಾಗಿ ನಮಗೆ ಹೇಳಿದ್ದರು. ಈಗ ಇಡೀ ದೇಶಕ್ಕೆ ಅದರ ಬಗ್ಗೆ ತಿಳಿದಿದೆ” ಎಂದು ಉಮರ್ ಅನ್ಸಾರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಖ್ತಾರ್ ಅನ್ಸಾರಿ ಅವರ ಸಹೋದರ ಮತ್ತು ಘಾಜಿಪುರ ಸಂಸದ ಅಫ್ಜಲ್ ಅನ್ಸಾರಿ ಕೂಡ, ‘ಜೈಲಿನಲ್ಲಿ ಮುಖ್ತಾರ್ ‘ಸ್ಲೋ ಪಾಯ್ಸನಿಂಗ್‌’ಗೆ ಒಳಗಾಗುತ್ತಿದ್ದಾರೆ’ ಎಂದು ಮಂಗಳವಾರ ಆರೋಪಿಸಿದ್ದರು.

ಮರಣೋತ್ತರ ಪರೀಕ್ಷೆ ಯಾವಾಗ ನಡೆಯಲಿದೆ ಎಂಬ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ರಾತ್ರಿಯೇ ‘ಪೋಸ್ಟ್‌ಮಾರ್ಟಂ’ ಮಾಡಿ ಬೆಳಗ್ಗೆ ಮೃತದೇಹವನ್ನು ನಮಗೆ ಹಸ್ತಾಂತರಿಸಬಹುದೆಂಬ ನಿರೀಕ್ಷೆಯಲ್ಲಿದ್ದೆವು. ಆದರೆ, ಯಾಕೆ ವಿಳಂಬವಾಗುತ್ತಿದೆ ಎಂದು ನಮಗೆ ಅರ್ಥವಾಗುತ್ತಿಲ್ಲ” ಎಂದು ಮುಖ್ತಾರ್ ಅವರ ಹಿರಿಯ ಸಹೋದರ ಸಿಬ್ಗತುಲ್ಲಾ ಅನ್ಸಾರಿ ಹೇಳಿದ್ದಾರೆ.

‘ಸ್ಲೋ ಪಾಯ್ಸನ್’ ಬಗ್ಗೆ ಮಾತನಾಡಿರುವ ಸಿಬ್ಗತುಲ್ಲಾ ಅನ್ಸಾರಿ, “ಮುಕ್ತರ್ ಅನ್ಸಾರಿ ಅವರು ತಮ್ಮ ವಕೀಲರ ಮೂಲಕ ಈ ವಿಷಯದ ಬಗ್ಗೆ ಲಿಖಿತವಾಗಿ ನ್ಯಾಯಾಲಯಕ್ಕೆ ತಿಳಿಸಿದ್ದರು” ಎಂದು ಹೇಳಿದರು.

ಉತ್ತರ ಪ್ರದೇಶದಲ್ಲಿ ‘ಕ್ರಿಮಿನಲ್ ಪ್ರೊಸೀಜರ್ ಕೋಡ್‌’ನ (CrPC) ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ದೊಡ್ಡ ಸಭೆಗಳನ್ನು ನಡೆಸದಂತೆ ನಿರ್ಬಂಧಿಸಲಾಗಿದೆ. ಬಂದಾ, ಮೌ, ಗಾಜಿಪುರ ಮತ್ತು ವಾರಣಾಸಿ ಜಿಲ್ಲೆಗಳಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...