ಅಧಿವೇಶನದಲ್ಲೇ ಸಂಸದ ದಾನಿಶ್ ಅಲಿಯನ್ನು ‘ಭಯೋತ್ಪಾದಕ’ ಎಂದ ಬಿಜೆಪಿ ಸಂಸದ ರಮೇಶ್ ಬಿಧುರಿ!

Date:

  • ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ವೈರಲ್; ಸೂಕ್ತ ಕ್ರಮಕ್ಕೆ ಆಗ್ರಹ
  • ಅವಹೇಳನ ಮಾಡುತ್ತಿದ್ದಾಗ ನಗುತ್ತಿದ್ದ ಬಿಜೆಪಿಯ ರವಿಶಂಕರ್ ಪ್ರಸಾದ್ ಮತ್ತು ಹರ್ಷವರ್ಧನ್

ನೂತನ ಸಂಸತ್ ಭವನದಲ್ಲಿ ಗುರುವಾರ ರಾತ್ರಿ ಮುಕ್ತಾಯಗೊಂಡ ವಿಶೇಷ ಅಧಿವೇಶನದಲ್ಲಿ ಬಿಎಸ್‌ಪಿಯ ಮುಸ್ಲಿಂ ಸಂಸದ ದಾನಿಶ್ ಅಲಿಯನ್ನು ಬಿಜೆಪಿಯ ಸಂಸದ ರಮೇಶ್ ಬಿಧುರಿ ‘ಭಯೋತ್ಪಾದಕ’ ಎಂದು ಕರೆದು, ಹೀಯಾಳಿಸಿರುವ ಆಘಾತಕಾರಿ ಬೆಳವಣಿಗೆ ನಡೆದಿದೆ.

ಬಿಜೆಪಿಯ ದೆಹಲಿ ಸಂಸದನಾಗಿರುವ ರಮೇಶ್ ಬಿಧುರಿ ಅವರು ಲೋಕಸಭೆಯಲ್ಲಿ ತಮ್ಮ ಮಾತಿನ ವೇಳೆ ಸಂಸತ್ತಿನ ಸಹೋದ್ಯೋಗಿ ಬಹುಜನ ಸಮಾಜ ಪಕ್ಷದ ದಾನಿಶ್ ಅಲಿ ಅವರನ್ನು “ಯೇ ಉಗ್ರವಾದಿ, ಯೇ ಆತಂಕ್ವಾದಿ, ಮುಲ್ಲಾ ಆತಂಕವಾದಿ, ಭರ್ವಾ (ವೇಶ್ಯಾವಾಟಿಕೆ ದಂಧೆ ನಡೆಸುವವ) ಮತ್ತು ಕತ್ವಾ (ಮುಂಜಿ ಮಾಡಿಸಿದವ)” ಎಂದು ಹಿಂದಿಯಲ್ಲಿ ಉಲ್ಲೇಖಿಸಿ, ಅವಮಾನಗೈದಿದ್ದಾರೆ. ದೂರದರ್ಶನದಲ್ಲಿ ನೇರಪ್ರಸಾರ ಮಾಡಲಾಗಿರುವ ವಿಡಿಯೋ, ಈಗ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ವೈರಲಾಗಿದೆ.

ಬಿಜೆಪಿ ಸಂಸದ ರಮೇಶ್ ಬಿಧುರಿ ಮುಸ್ಲಿಂ ವಿರೋಧಿ ನಿಂದನೆಗಳನ್ನು ಬಳಸಿರುವ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸಂಸದ ಸ್ಥಾನದಲ್ಲಿರುವ ಅರ್ಹತೆ ಈ ವ್ಯಕ್ತಿಗಿಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹೇಳಿಕೆಯ ವೇಳೆ ಅಧ್ಯಕ್ಷ ಪೀಠದಲ್ಲಿ ಕಾಂಗ್ರೆಸ್ ಮುಖಂಡ ಕೆ. ಸುರೇಶ್ ಸಂಸದರಿಗೆ ಕುಳಿತುಕೊಳ್ಳುವಂತೆ ಹೇಳುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದೆ. ಚಂದ್ರಯಾನ-3 ಚರ್ಚೆಯ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ.

bjp and bsp mp

ಬಿಜೆಪಿ ಸಂಸದ ರಮೇಶ್ ಬಿಧುರಿ, ಬಿಎಸ್‌ಪಿ ಸಂಸದ ದಾನಿಶ್ ಅಲಿ

ಅಲ್ಲದೇ, ಸಂಸದ ದಾನಿಶ್ ಅಲಿಯನ್ನು ಸಂಸದ ರಮೇಶ್ ಬಿಧುರಿ ನಿಂದಿಸುವಾಗ ಬಿಜೆಪಿಯ ಸಂಸದರಾದ ರವಿಶಂಕರ್ ಪ್ರಸಾದ್ ಮತ್ತು ಹರ್ಷವರ್ಧನ್ ನಗುತ್ತಿರುವುದು ಕೂಡ ವಿಡಿಯೋದಲ್ಲಿ ದಾಖಲಾಗಿದೆ.

ಬಿಎಸ್‌ಪಿಯ ದಾನಿಶ್ ಅಲಿ ಲೋಕಸಭೆಯಲ್ಲಿ ಉತ್ತರ ಪ್ರದೇಶದ ಅಮ್ರೋಹಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರೆ, ರಮೇಶ್ ಬಿಧುರಿ ದಕ್ಷಿಣ ದೆಹಲಿಯನ್ನು ಪ್ರತಿನಿಧಿಸುತ್ತಿದ್ದಾರೆ.

ವಿಡಿಯೋ ವೈರಲಾದ ಬಳಿಕ ಮಾಹಿತಿ ನೀಡಿರುವ ಅಧ್ಯಕ್ಷ ಪೀಠದಲ್ಲಿದ್ದ ಕೆ. ಸುರೇಶ್, ಬಿಧುರಿ ಅವರ ಹೇಳಿಕೆಗಳನ್ನು ದಾಖಲೆಗಳಿಂದ ತೆಗೆದು ಹಾಕಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ಬೆಳವಣಿಗೆಯನ್ನು ಟ್ವೀಟ್ ಮೂಲಕ ಖಂಡಿಸಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಹಾಗೂ ಕಾಂಗ್ರೆಸ್, ಮುಸ್ಲಿಂ ಸಂಸದನನ್ನು ನಿಂದನೆಗೈದಿರುವ ಬಿಜೆಪಿ ಸಂಸದನ ವಿರುದ್ಧ ಪ್ರಧಾನಿ ಮೋದಿಯವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಸಂಸತ್ತಿನಲ್ಲಿ ಬಿಧುರಿ ಅವರ ದ್ವೇಷದ ಭಾಷಣದ ಹೊರತಾಗಿಯೂ ಬಿಜೆಪಿ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವ ಮತ್ತು ಲೋಕಸಭೆಯ ಉಪ ನಾಯಕ ರಾಜನಾಥ್ ಸಿಂಗ್ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, “ಸದಸ್ಯರು ಮಾಡಿದ ಟೀಕೆಗಳಿಂದ ಪ್ರತಿಪಕ್ಷಗಳಿಗೆ ನೋವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...