ಮುಂಬೈ | ಐದು ತಿಂಗಳ ಹಿಂದೆ ಪ್ರಧಾನಿ ಮೋದಿ ಉದ್ಘಾಟಿಸಿದ್ದ ಅಟಲ್ ಸೇತು ರಸ್ತೆಯಲ್ಲಿ ಬಿರುಕು!

Date:

ಈ ವರ್ಷದ ಜನವರಿ 12ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಮುಂಬೈನ ಅಟಲ್ ಬಿಹಾರಿ ವಾಜಪೇಯಿ ಸೆವ್ರಿ-ನವ ಸೇವಾ ಅಟಲ್ ಸೇತು ಅಥವಾ ಮುಂಬೈ ಟ್ರಾನ್ಸ್‌ ಹಾರ್ಬರ್ ಲಿಂಕ್‌ (ಹೆಚ್‌ಟಿಹೆಚ್‌ಎಲ್‌) ಸೇತುವೆಯ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.

ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ನಾನಾ ಪಟೋಲೆ, “ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಂಗಳುಗಳ ಹಿಂದೆಯಷ್ಟೇ ಉದ್ಘಾಟಿಸಿದ್ದ ಅಟಲ್ ಸೇತುವೆಯ ರಸ್ತೆ ಬಿರುಕು ಬಿಟ್ಟಿರುವುದು ಅತ್ಯಂತ ಕಳವಳಕಾರಿಯಾಗಿದೆ. ಹೆಚ್ಚಿನ ಸಂಖ್ಯೆಯ ಬಿರುಕುಗಳು ಪ್ರಯಾಣಿಕರಲ್ಲಿ ಭೀತಿಯ ವಾತಾವರಣವನ್ನು ಸೃಷ್ಟಿಸಿವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಹಾರದಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದಿರುವ ಘಟನೆ ತಾಜಾ ಆಗಿರುವಾಗಲೇ ಮುಂಬೈನಲ್ಲೂ ಅಂತಹ ಆಘಾತಕಾರಿ ಘಟನೆ ಬೆಳಕಿಗೆ ಬಂದಿರುವುದರಿಂದ ಸರ್ಕಾರದ ಕಾರ್ಯವೈಖರಿ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಸರ್ಕಾರದ ಭ್ರಷ್ಟಾಚಾರಗಳನ್ನು ಬಹಿರಂಗಪಡಿಸುವ ಕಾಂಗ್ರೆಸ್ ಪಕ್ಷದ ಆಂದೋಲನದ ಭಾಗವಾಗಿ ನಾನು ಸಹೋದ್ಯೋಗಿಗಳೊಂದಿಗೆ ಸೇತುವೆ ಪರಿಶೀಲಿಸಿದೆ. ಈ ವಿಷಯವು ತುಂಬಾ ಗಂಭೀರವಾಗಿದೆ. ಮಾನ್ಯ ಹೈಕೋರ್ಟ್ ಈ ಬಗ್ಗೆ ತಕ್ಷಣ ಗಮನಹರಿಸಿ ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಹೇಳಿದ್ದಾರೆ.

ಮುಂಬೈ ಟ್ರಾನ್ಸ್‌ ಹಾರ್ಬರ್ ಲಿಂಕ್‌ ಅಟಲ್ ಸೇತು ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾಗಿದ್ದು, 21.8 ಕಿಮೀ ಉದ್ದವಿದೆ. ಈ ಪೈಕಿ 16.5 ಕಿಮೀ ರಸ್ತೆ ಸಮುದ್ರದ ಮೇಲಿದೆ. ವರದಿಯೊಂದರ ಪ್ರಕಾರ, ಈ ಸೇತುವೆ ಮೇಲೆ ಪ್ರತಿದಿನ 70,000 ಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತವೆ.

ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾದ ಸೇತುವೆಯೊಂದು ಕುಸಿದುಬಿದ್ದ ಬೆನ್ನಲ್ಲೇ, ಅಟಲ್ ಸೇತುವೆಯ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಚುನಾವಣೆಗೂ ಮುನ್ನ ನಟಿ ರಶ್ಮಿಕಾ ಮಂದಣ್ಣ ಇದೇ ಅಟಲ್ ಸೇತುವೆಯನ್ನು ತೋರಿಸಿ ಮೋದಿವಯವರ ಅಭಿವೃದ್ದಿ ಎಂದು ಕೊಂಡಾಡಿದ್ದರು. ಅದು ಬಳಿಕ ವ್ಯಾಪಕ ಟ್ರೋಲ್‌ಗೂ ಕಾರಣವಾಗಿತ್ತು.

ತಗುಲಿದ ವೆಚ್ಚ ಎಷ್ಟು?

ಈ ಸೇತುವೆ ನಿರ್ಮಾಣಕ್ಕೆ ತಗುಲಿದ ವೆಚ್ಚ ಬರೋಬ್ಬರಿ 17,840 ಕೋಟಿ ರೂಪಾಯಿ. ಈ ಪೈಕಿ 15,000 ಕೋಟಿ ರೂ. ಸಾಲ ಪಡೆದುಕೊಳ್ಳಲಾಗಿದೆ. ಇದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನವೀ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೇಗದ ಸಂಪರ್ಕವನ್ನು ಒದಗಿಸುತ್ತದೆ ಮತ್ತು ಮುಂಬೈನಿಂದ ಪುಣೆ, ಗೋವಾ ಮತ್ತು ದಕ್ಷಿಣ ಭಾರತಕ್ಕೆ ಇರುವ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಎಂಟಿಎಚ್ಎಲ್‌ನಲ್ಲಿ ಕಾರು, ಲಘು ವಾಹನಗಳು, ಮಿನಿ ಬಸ್‌ಗಳು ಮತ್ತು ಬಸ್‌ಗಳ ಗರಿಷ್ಠ ವೇಗದ ಮಿತಿ ಗಂಟೆಗೆ 100 ಕಿ.ಮೀ. ಬೈಕ್‌ಗಳು ಸೇರಿದಂತೆ ದ್ವಿಚಕ್ರ ವಾಹನಗಳು, ಆಟೋರಿಕ್ಷಾಗಳು ಮತ್ತು ಟ್ರ್ಯಾಕ್ಟರ್‌ಗಳ ಪ್ರವೇಶ ನಿಷೇಧಿಸಲಾಗಿದೆ.

ಈ ಅಟಲ್‌ ಸೇತು ದೇಶದ ಅತೀ ದೊಡ್ಡ ಮತ್ತು ಜಗತ್ತಿನ 12ನೇ ಅತೀ ದೊಡ್ಡ ಸಮುದ್ರ ಸೇತುವೆ ಎನಿಸಿಕೊಂಡಿದೆ. 21.8 ಕಿ.ಮೀ ಉದ್ದದ ಈ ಸೇತುವೆಯು 16.5 ಕಿ.ಮೀ ಸಮುದ್ರದಲ್ಲಿ ಮತ್ತು 5.5 ಕಿ.ಮೀ ಭೂ ಪ್ರದೇಶದಲ್ಲಿ ಚಾಚಿಕೊಂಡಿದೆ.

ಸಮುದ್ರ ಮಾರ್ಗವು ಎರಡೂ ಬದಿಗಳಲ್ಲಿ ಮೂರು ಮತ್ತು 2 ತುರ್ತು ಪಥಗಳನ್ನು ಒಳಗೊಂಡಿದೆ. ಈ ಸೇತುವೆಯು ನವೀ ಮುಂಬೈಯ ಉಲ್ವೆ ಮತ್ತು ದಕ್ಷಿಣ ಮುಂಬೈ ನಡುವಿನ ಎರಡು ಗಂಟೆಗಳ ಪ್ರಯಾಣದ ಸಮಯವನ್ನು ಕೇವಲ 15-20 ನಿಮಿಷಗಳಿಗೆ ಇಳಿಸಲಿದೆ. ಮೊದಲ ವರ್ಷ ಏಕಮುಖ ಟೋಲ್ ದರ 250 ರೂ. ಮತ್ತು ರೌಂಡ್-ಟ್ರಿಪ್ ಟೋಲ್ ದರ 375 ರೂ. ನಿಗದಿಪಡಿಸಲಾಗಿದೆ. ಕಾರ್ಯಾಚರಣೆ ಪ್ರಾರಂಭವಾದ ಒಂದು ವರ್ಷದ ನಂತರ ದರಗಳನ್ನು ಪರಿಷ್ಕರಿಸುವ ಸಾಧ್ಯತೆ ಇದೆ. ಅದಕ್ಕೂ ಮೊದಲೇ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿರುವುದು, ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...