ಹೋಳಿ ಕಾರ್ಯಕ್ರಮದಲ್ಲಿ ವ್ಯಕ್ತಿಯನ್ನು ಒದ್ದ ಪುರಸಭೆ ಮುಖ್ಯಸ್ಥ; ಇದು ‘ಆಶೀರ್ವಾದ’ ಎಂದ ಬಿಜೆಪಿ ನಾಯಕರು!

Date:

ಹೋಳಿ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರನ್ನು ಪುರಸಭೆಯ ಮುಖ್ಯಸ್ಥರು ಒದ್ದಿರುವ ಘಟನೆ ಮಧ್ಯಪ್ರದೇಶದ ನರಸಿಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಿಜೆಪಿ ನಾಯಕರು ಇದು ‘ಆಶೀರ್ವಾದ’ ಎಂದು ಹೇಳುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತೆಂಡುಖೇಡ ಪುರಸಭೆಯ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ವಿಷ್ಣು ಶರ್ಮಾ ಹೋಳಿ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೊಬ್ಬರಿಗೆ ಒದ್ದಿದ್ದಾರೆ. ಶರ್ಮಾ ಮುಖಕ್ಕೆ ವ್ಯಕ್ತಿಯೋರ್ವ ಬಣ್ಣ ಹಾಕಿದ್ದು, ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಈ ವೇಳೆ ಬಿಜೆಪಿ ನಾಯಕ ಶರ್ಮಾ ಆ ವ್ಯಕ್ತಿಯ ಭುಜಕ್ಕೆ ಒದ್ದಿದ್ದಾರೆ.

ಇದನ್ನು ಓದಿದ್ದೀರಾ? ಮುಂಬಡ್ತಿ ಸೇರಿ ಇತರೆ ಬೇಡಿಕೆ ಈಡೇರಿಸಲು ಆಗ್ರಹ; ಹೋಳಿ ಆಚರಣೆ ಬಹಿಷ್ಕರಿಸಿದ ರಾಜಸ್ಥಾನ ಪೊಲೀಸರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಈ ವಿಡಿಯೋವನ್ನು ಶರ್ಮಾ ಬೆಂಬಲಿಗರು, ಬಿಜೆಪಿ ನಾಯಕರು ಹಂಚಿಕೊಂಡಿದ್ದಾರೆ. ಶರ್ಮಾ ಒದ್ದಿರುವುದನ್ನು ‘ಆಶೀರ್ವಾದ’ ಎಂದು ಬಣ್ಣಿಸಿದ್ದಾರೆ. ಶರ್ಮಾ ಅವರನ್ನು ಹಾಡಿಹೊಗಳಿದ್ದಾರೆ.

ಇನ್ನು ಬಿಜೆಪಿ ನಾಯಕ ಶರ್ಮಾ ಜನರಿಗೆ ಒದ್ದಿರುವುದು ಇದೇ ಮೊದಲೇನಲ್ಲ. ಕೆಲವು ದಿನಗಳ ಹಿಂದೆ, ಮತ್ತೊಂದು ವಿಡಿಯೋ ವೈರಲ್ ಆಗಿತ್ತು. ಮಾರುಕಟ್ಟೆಯಲ್ಲಿ ಅದೇ ವ್ಯಕ್ತಿಯನ್ನು ಶರ್ಮಾ ಒದ್ದಿದ್ದರು. ಕಾಂಗ್ರೆಸ್ ನಾಯಕರು, ನೆಟ್ಟಿಗರು ಶರ್ಮಾ ವರ್ತನೆಯನ್ನು ಖಂಡಿಸಿದ್ದರು.

ಇದನ್ನು ಓದಿದ್ದೀರಾ? ಬೆಂಗಳೂರು | ಲಾಲ್‌ಬಾಗ್‌ನಲ್ಲಿ ಹೋಳಿ; ಎರಡು ಗುಂಪುಗಳ ನಡುವೆ ಮಾರಾಮಾರಿ

ಇನ್ನು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಬಿಜೆಪಿ ಯುವ ಘಟಕದ ಸ್ಥಳೀಯ ನಾಯಕ ಉದಿತ್ ಶರ್ಮಾ, “ರಜ್ಜನ್ ಎಂಬ ಅದೇ ವ್ಯಕ್ತಿಯನ್ನು ಮತ್ತೆ ಒದೆಯಲು ಕರೆಯಲಾಯಿತು” ಎಂದು ಹೇಳಿಕೊಂಡಿದ್ದಾರೆ. ಈ ನಡುವೆ ಈ ಹಿಂದೆ ಶರ್ಮಾ ಒದ್ದಿರುವುದನ್ನು ಆಶೀರ್ವಾದ ಎಂದು ಬಿಂಬಿಸಲು ಈಗ ಮತ್ತೆ ವಿಡಿಯೋ ಮಾಡಿ ಬಿಜೆಪಿಗರು ಹಂಚುತ್ತಿದ್ದಾರೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ.

ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಸ್ನೇಹಿ ಪಾಠಕ್, “ನಾನು ವಿಡಿಯೋ ನೋಡಿದ್ದೇನೆ. ಶರ್ಮಾ ಅವರೊಂದಿಗೆ ಮಾತನಾಡುತ್ತೇವೆ, ಅವರ ವಿವರಣೆ ಪಡೆಯುತ್ತೇವೆ. ಈ ವಿಡಿಯೋ ನಿಜವಾಗಿದ್ದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು” ಎಂದು ಎನ್‌ಡಿಟಿವಿಗೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...