ಮುನಿರತ್ನ ಪ್ರಕರಣ | ಕಾಂಗ್ರೆಸ್ ಸರ್ಕಾರದಿಂದ ದ್ವೇಷದ ರಾಜಕಾರಣ: ಸಿ ಟಿ ರವಿ ಆರೋಪ

Date:

ರಾಜ್ಯದ ಕಾಂಗ್ರೆಸ್ ಸರಕಾರ ಪೂರ್ವಗ್ರಹಪೀಡಿತವಾಗಿ ವರ್ತಿಸುತ್ತಿದೆ. ಚಲುವರಾಯಸ್ವಾಮಿ ಮೇಲೆ ಭ್ರಷ್ಟಾಚಾರದ ಆರೋಪ ಬಂದರೆ, ಎಫ್‍ಐಆರ್ ಕೂಡ ದಾಖಲಾಗುವುದಿಲ್ಲ. ಮುನಿರತ್ನ ಮೇಲೆ ಭ್ರಷ್ಟಾಚಾರದ ಆರೋಪ ಬಂದರೆ, ಎಫ್‍ಐಆರ್ ದಾಖಲಾಗುತ್ತದೆ ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಟೀಕಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಮುಂದೆ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ರಾಜ್ಯ ಸರಕಾರ ತೋರಿಸಬೇಕಿತ್ತು. ಚನ್ನಾರೆಡ್ಡಿ ಮೇಲೆ ಅಟ್ರಾಸಿಟಿ ಕೇಸ್ ದಾಖಲಾದರೆ ಅವರನ್ನು ಬಂಧಿಸುವುದಿಲ್ಲ. ಆದರೆ, ಮುನಿರತ್ನ ಮೇಲೆ ಅಟ್ರಾಸಿಟಿ ಕೇಸ್ ಆದರೆ ಅರೆಸ್ಟ್ ಮಾಡುತ್ತಾರೆ. ಈ ಸರಕಾರ ದ್ವೇಷದ ರಾಜಕಾರಣ ಮಾಡುವುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು” ಎಂದು ಪ್ರಶ್ನಿಸಿದರು.

“ತನಿಖೆ ಮಾಡಿ ತಪ್ಪಾಗಿದ್ದರೆ ಶಿಕ್ಷೆ ಆಗಲಿದೆ. ಆದರೆ, ಒಬ್ಬರಿಗೆ ಒಂದು ನ್ಯಾಯ, ಇನ್ನೊಬ್ಬರಿಗೆ ಮತ್ತೊಂದು ನ್ಯಾಯ ಮಾಡಲು ಇವರಿಗೆ ಅಧಿಕಾರ ಕೊಟ್ಟಿಲ್ಲ. ಸಿದ್ದರಾಮಯ್ಯನವರಿಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದ್ದರೆ ತನಿಖೆ ಎದುರಿಸಲು ಹಿಂಜರಿಯುತ್ತಿರಲಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಮತಾ ರಾಜೀನಾಮೆ – ಭಾವನಾತ್ಮಕ ರಾಜಕೀಯವೇಕೆ?

“ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಅನುಮತಿ ಕೊಟ್ಟರೆ ತನಿಖೆ ಎದುರಿಸಲು ಮುಖ್ಯಮಂತ್ರಿಗಳು ಭಯ ಪಡುತ್ತಾರೆ. ರಾಜ್ಯಪಾಲರ ವಿರುದ್ಧ ಚಳವಳಿ ಮಾಡುವ ಮಾತನಾಡಿದ್ದಾರೆ. ಸಿದ್ದರಾಮಯ್ಯನವರು ತಮ್ಮದು ಕಳಂಕರಹಿತ ಆಡಳಿತ ಎಂದು ತೀರ್ಪು ಕೊಟ್ಟುಕೊಳ್ಳುತ್ತಾರೆ. ಅವರೇ ಜಡ್ಜ್, ಅವರೇ ಲಾಯರ್” ಎಂದು ಲೇವಡಿ ಮಾಡಿದರು.

“ಮುಖ್ಯಮಂತ್ರಿಯವರೇ, ನಿಮ್ಮದು ಕಳಂಕರಹಿತ ಆಡಳಿತ ಅಲ್ಲ ಎನ್ನಲು ನಮ್ಮ ಹತ್ತಿರ ಸಾಕಷ್ಟು ಸಾಕ್ಷಿಗಳಿವೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...