ತನಗೆ ಏಡ್ಸ್‌ ರಕ್ತ ಇಂಜೆಕ್ಟ್‌ ಮಾಡಲು ಸಂಚು ಹೂಡಿದ್ದ ಮುನಿರತ್ನ; ದೇಶವನ್ನೇ ತೊರೆಯಲು ನಿರ್ಧರಿಸಿದ್ದ ಆರ್ ಅಶೋಕ್

Date:

ವಿರೋಧಿಗಳ ಮೇಲೆ ಹನಿಟ್ರ್ಯಾಪ್ ಮತ್ತು ಎಚ್‌ಐವಿ ಸೋಂಕಿತ ರಕ್ತ ಇಂಜೆಕ್ಟ್‌ ಮಾಡಲು ಸಂಚು ಹೂಡಿದ್ದ ಪ್ರಕರಣದಲ್ಲಿ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಹಾಲಿ ವಿಪಕ್ಷ ನಾಯಕ ಆರ್ ಅಶೋಕ್‌ಗೆ ಎಚ್‌ಐವಿ ಸೋಂಕಿತ ರಕ್ತವನ್ನು ಇಂಜೆಕ್ಟ್‌ ಮಾಡಲು ಮುನಿರತ್ನ ಸಂಚು ಹೂಡಿದ್ದರು. ಈ ಸಂಚಿನಲ್ಲಿ ಓರ್ವ ಪೊಲೀಸ್‌ ಇನ್ಸ್‌ಪೆಕ್ಟರ್‌ ಕೂಡ ಭಾಗಿಯಾಗಿದ್ದಾರೆ ಎಂಬ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ತಮ್ಮ ವಿರುದ್ಧ ಸಂಚು ಹೂಡಿದ್ದನ್ನು ತಿಳಿದ ಆರ್‌ ಅಶೋಕ್, ದೇಶವನ್ನೇ ತೊರೆಯಲು ನಿರ್ಧರಿಸಿದ್ದರು ಎಂದು ವರದಿಯಾಗಿದೆ.

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್‌ಐಟಿ, ಹೆಬ್ಬಗೋಡಿಯಲ್ಲಿ ಎಸ್‌ಐ ಆಗಿ ಕರ್ತವ್ಯದಲ್ಲಿದ್ದ ಅಯ್ಯನರೆಡ್ಡಿ ಅವರನ್ನು ಗುರುವಾರ ಸಂಜೆ ಬಂಧಿಸಿದೆ. ಅಲ್ಲದೇ, ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದುಕೊಂಡಿದೆ.

2020ರ ಜುಲೈನಲ್ಲಿ ಆರ್‌ ಅಶೋಕ್‌ಗೆ ಏಡ್ಸ್‌ ರಕ್ತ ಇಂಜೆಕ್ಟ್‌ ಮಾಡಲು ಮುನಿರತ್ನ ಸಂಚು ರೂಪಿಸಿದ್ದರು. ತಮ್ಮ ಹುಟ್ಟುಹಬ್ಬದ ಸಮಯದಲ್ಲಿ, ತಮ್ಮ ಸಮ್ಮುಖದಲ್ಲಿಯೇ ಅಶೋಕ್‌ಗೆ ಎಚ್‌ಐವಿ ರಕ್ತ ಇಂಜೆಕ್ಟ್‌ ಮಾಡಬೇಕೆಂದು ಯುವಕರ ಮನವೊಲಿಸಲು ಮುನಿರತ್ನ ಯತ್ನಿಸಿದ್ದರು ಎಂದು ಮಾಜಿ ಕೌನ್ಸಿಲರ್, ಮುನಿರತ್ನ ಅವರ ಸಹಚರ ವೇಲು ನಾಯ್ಕರ್ ಎಸ್‌ಐಟಿ ಅಧಿಕಾರಿಗಳಿಗೆ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಯುವಕರಿಗೆ ಈ ಅಪರಾಧದಲ್ಲಿ ಸಿಕ್ಕಿಕೊಳ್ಳಬೇಡಿ ಎಂದು ಬುದ್ಧಿವಾದ ಹೇಳಿದ್ದರಿಂದ ಆ ಸಂಚು ಕೈಗೂಡಲಿಲ್ಲ ಎಂದೂ ವೇಲು ಹೇಳಿದ್ದಾರೆಂದು ಎಸ್‌ಐಟಿ ವಿವರಿಸಿದೆ. ಅಲ್ಲದೆ, ಸಂಚಿನಲ್ಲಿ ಭಾಗಿಯಾಗಿದ್ದ ಯುವಕರನ್ನು ಎಸ್‌ಐಟಿ ಪತ್ತೆ ಹಚ್ಚಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ಅವರ ಹೇಳಿಕೆ ದಾಖಲಿಸಿದೆ.

‘ಆರ್‌ ಅಶೋಕ್‌ಗೆ ಇಂಜೆಕ್ಟ್‌ ಮಾಡಲು ಎಸ್‌ಐ ಅಯ್ಯನ್ ರೆಡ್ಡಿ ಮತ್ತು ಮುನಿರತ್ನ ಮನವೊಲಿಸಲು ಪ್ರಯತ್ನಿಸಿದ್ದರು’ ಎಂದು ಆ ಯುವಕ ಒಪ್ಪಿಕೊಂಡಿದ್ದಾನೆ. ಯುವಕನ ಹೇಳಿಕೆ ಬೆನ್ನಲ್ಲೇ, ಎಸ್‌ಐ ಅಯ್ಯನ್ ರೆಡ್ಡಿಯನ್ನು ಎಸ್‌ಐಟಿ ಬಂಧಿಸಿದೆ.

ಒಕ್ಕಲಿಗ ನಾಯಕರೊಬ್ಬರ ಮೇಲೆ ಹನಿಟ್ರ್ಯಾಪ್‌ ಮತ್ತು ಎಚ್‌ಐವಿ ಸೋಂಕಿತ ರಕ್ತ ಇಂಜೆಕ್ಟ್‌ ಮಾಡಲು ಮುನಿರತ್ನ ಸಂಚು ಹೆಣೆದಿದ್ದರೆಂದು ಈ ಹಿಂದೆಯೇ ಬಹಿರಂಗವಾಗಿತ್ತು. ಬಳಿಕ, ಆರ್‌ ಅಶೋಕ್ ವಿರುದ್ಧವೇ ಈ ಸಂಚು ರೂಪಿಸಲಾಗಿತ್ತೆಂದೂ ವರದಿಯಾಗಿತ್ತು. ಈ ವರದಿಯಿಂದ ಆಘಾತಕ್ಕೊಳಗಾಗಿದ್ದ ಆರ್ ಅಶೋಕ್‌ ದೇಶವನ್ನೇ ತೊರೆಯಲು ನಿರ್ಧರಿಸಿದ್ದರು. ಈ ಎಲ್ಲಾ ಬೆಳವಣಿಗೆಯ ನಡುವೆ ಕೇಂದ್ರ ಸಚಿವ ವಿ ಸೋಮಣ್ಣ ಜೊತೆ ಮಾತನಾಡಿದ್ದ ಆರ್ ಅಶೋಕ್ ಇತ್ತೀಚೆಗೆ ಸಾರ್ವಜನಿಕ ಸ್ಥಳವೊಂದರಲ್ಲಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

“ಏಡ್ಸ್ ರೋಗಿಯ ರಕ್ತವನ್ನು ನನಗೆ ಇಂಜೆಕ್ಟ್ ಮಾಡಲು ಪ್ಲಾನ್ ಮಾಡಲಾಗಿತ್ತು ಎಂಬ ವಿಚಾರ ಕೇಳಿಯೇ ನನಗೆ ಮೂರು ದಿನ ನಿದ್ದೆ ಬಂದಿಲ್ಲ ಅಣ್ಣ. ರಕ್ತ ಕೊಟ್ಟ ಏಡ್ಸ್ ರೋಗಿ ಆ ಹೆಣ್ಣುಮಗಳು ಪೊಲೀಸರ ಮುಂದೆ ನಿಜ ಒಪ್ಪಿಕೊಂಡಿದ್ದಾಳೆ. ಇತರ ಆರೋಪಿಗಳೂ ಸಂಚಿನ ಬಗ್ಗೆ ಹೇಳಿಕೆ ನೀಡಿದ್ದಾರೆ. ಇಂತಹ ರಕ್ತ ಇಂಜೆಕ್ಟ್ ಮಾಡಿದರೆ, ಇಡೀ ವಂಶವೇ ಸರ್ವನಾಶವಾಗುತ್ತದೆ. ಇದೆಲ್ಲ ನೆನಸಿಕೊಂಡು ನನಗೆ ಭಯವಾಗುತ್ತದೆ. ಈ ದೇಶವೇ ಬೇಡ, ದೇಶ ಬಿಟ್ಟು ಹೋಗಿ ಬಿಡಬೇಕೆಂದು ನಿರ್ಧರಿಸುವ ಪರಿಸ್ಥಿತಿ ಎದುರಾಗಿತ್ತು. ಮಕ್ಕಳು ಕೂಡ ಇದೆ ಸಲಹೆ ನನಗೆ ನೀಡಿದ್ದರು” ಎಂದು ಸೋಮಣ್ಣ ಜೊತೆಗೆ ವಿಚಾರವನ್ನು ಹಂಚಿಕೊಳ್ಳುತ್ತಾ, ಆರ್‌ ಅಶೋಕ್ ಆತಂಕ ವ್ಯಕ್ತಪಡಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಆರ್ ಅಶೋಕ್ ಅವರ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...