ಉಗ್ರರ ಸಂಪರ್ಕ ಆರೋಪ: ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಚಿಂತನೆ; ಕಾಂಗ್ರೆಸ್ ಮುಖಂಡ ಸಲೀಂ ಅಹ್ಮದ್

Date:

“ವಿಜಯಪುರದ ಮುಸ್ಲಿಂ ಧಾರ್ಮಿಕ ಮುಖಂಡ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮಿಯವರನ್ನು ಭಯೋತ್ಪಾದಕರ ಬೆಂಬಲಿಗ, ಸಂಪರ್ಕವಿದೆ ಎಂದು ಆರೋಪಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲು ಮುಸ್ಲಿಂ ಸಮುದಾಯದ ಧರ್ಮ ಗುರುಗಳು ಚರ್ಚೆ ನಡೆಸಿದ್ದಾರೆ” ಎಂದು ಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾಹಿತಿ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿರುವ ಅವರು, “ಶಾಸಕ ಯತ್ನಾಳ್ಮೇ ಲೆ ಮಾನನಷ್ಟ ಮೊಕದ್ದಮೆ ಹಾಕಲು ಮುಸ್ಲಿಂ ಸಮುದಾಯದ ಧರ್ಮ ಗುರುಗಳು ಚರ್ಚೆ ನಡೆಸಿದ್ದಾರೆ. ಚರ್ಚೆಯ ಬಳಿಕ ನಿರ್ಧಾರ ಹೇಳುತ್ತೇವೆ” ಎಂದು ಸಲೀಂ ಅಹ್ಮದ್ ತಿಳಿಸಿದ್ದಾರೆ.

“ಯತ್ನಾಳ್ ಅವರು ಪ್ರಚಾರಕ್ಕಾಗಿ ಗಾಳಿಯಲ್ಲಿ ಗುಂಡು ಹೊಡೆಯಬಾರದು. ಧರ್ಮಗುರುಗಳ ಮೇಲಿನ ಆಪಾದನೆ ಸಾಬೀತು ಮಾಡಲಿ. ಈ ಬಗ್ಗೆ ತನ್ವೀರ್ ಹಾಶ್ಮಿಯವರು ಕೂಡ ಯತ್ನಾಳ್ ಅವರಿಗೆ ಸವಾಲೆಸೆದಿದ್ದಾರೆ. ಸಿಎಂ ಅವರೊಂದಿಗೆ ವೇದಿಕೆಯಲ್ಲಿ ಯಾರೊಬ್ಬರೂ ಕೂಡ ಉಗ್ರರ ಸಂಪರ್ಕವಿರುವವರಲ್ಲ. ಯತ್ನಾಳ್ ಅವರು ಕೇವಲ ರಾಜಕೀಯಕ್ಕಾಗಿ, ಪ್ರಚಾರಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಸ್ಲಿಂ ಧರ್ಮಗುರುಗಳ ಬಗ್ಗೆ ಯತ್ನಾಳ ಹಗುರವಾಗಿ ಮಾತನಾಡಿದ್ದಾರೆ. ಐಸಿಸ್ ನಂಟಿದ್ದವರು ವೇದಿಕೆಯಲ್ಲಿದ್ದರು ಎಂದು ಯತ್ನಾಳ್ ಯಾವ ಸಭೆಯ ಬಗ್ಗೆ ಹೇಳಿದ್ದಾರೋ ಅದರಲ್ಲಿ ನಾನೂ ಇದ್ದೆ. ಅಂತಹ ಯಾವುದೇ ಘಟನೆ ನಡೆದಿಲ್ಲ. ಆ ವೇದಿಕೆಯಲ್ಲಿ ಅಂಥವರು ಯಾರೂ ಕುಳಿತಿರಲಿಲ್ಲ. ಕೀಳುಮಟ್ಟದ ಹೇಳಿಕೆ ಕೊಡುವುದನ್ನು ಯತ್ನಾಳ್ ಮೊದಲು ಬಿಡಬೇಕು” ಎಂದರು.

ಇದೇ ವಿಚಾರದ ಬಗ್ಗೆ ಮಾತನಾಡಿರುವ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್, “ಯತ್ನಾಳ್ ಮೌಲ್ವಿ ಅವರ ಮೇಲೆ ಸಾಕ್ಷಿ ಸಮೇತ ಆರೋಪ ಮಾಡಬೇಕು. ಸಾಕ್ಷಿ ಇದ್ದರೆ ಮಾತ್ರ ಆರೋಪಕ್ಕೆ ಅರ್ಥ ಬರುತ್ತದೆ. ಕೇಂದ್ರ ಗೃಹ ಸಚಿವರು ಈ ವಿಚಾರದಲ್ಲಿ ಏನು ಕ್ರಮ ಕೈಗೊಳ್ಳುತ್ತಾರೋ ನೋಡೋಣ” ಎಂದರು.

ಹತಾಶೆಯಿಂದ ಯತ್ನಾಳ್‌ರಿಂದ ಸುಳ್ಳು ವಿವಾದ ಸೃಷ್ಟಿ: ಅಂಜುಮನ್‌ ಸಂಸ್ಥೆ

ಮೌಲವಿ ತನ್ವೀರ್‌ ಹಾಶ್ಮಿ ಅವರ ಮೇಲೆ ಯತ್ನಾಳ್ ಅವರ ಆರೋಪಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಅಂಜುಮನ್‌ ಸಂಸ್ಥೆ ಮಾಜಿ ಅಧ್ಯಕ್ಷ ಮಹಮ್ಮದ್‌ ಇಸ್ಮಾಯಿಲ್‌ ತಮಟಗಾರ, ಹತಾಶೆಯಿಂದ ಯತ್ನಾಳ್ ಅವರು ಈ ವಿವಾದ ಸೃಷ್ಟಿ ಮಾಡಿದ್ದಾರೆ. ಅವರ ವರ್ತನೆ ಖಂಡನೀಯ” ಎಂದು ತಿಳಿಸಿದ್ದಾರೆ.

“ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅಪಪ್ರಚಾರ ಮಾಡುವುದು, ಧಾರ್ಮಿಕ ವಿವಾದ ಸೃಷ್ಟಿಸುವುದು ಬಿಟ್ಟು ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಮಾತನಾಡಬೇಕು. ಅವರು ಜನತಾ ದಳದಲ್ಲಿ ಇದ್ದಾಗ ಮುಸ್ಲಿಮರ ಜತೆ ಓಡಾಡಿಲ್ಲವೇ? ವಿಜಯಪುರದಲ್ಲಿ ನಿಮ್ಮ ಜೊತೆ ಯಾವ ಪೀರಾ ಇದ್ದಾರೆ ಎಲ್ಲವೂ ನಮಗೆ ಗೊತ್ತಿದೆ. ಅವರು ಹತಾಶರಾಗಿದ್ದು, ಧಾರವಾಡದ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದು ಒಳ್ಳೆಯದು” ಎಂದು ಆಕ್ರೋಶ ಹೊರಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...