ಕಾಮಗಾರಿಯಲ್ಲಿ ಮುಸ್ಲಿಂ ಮೀಸಲಾತಿ | ಸುಳ್ಳು ಹೇಳುವ ಸಿದ್ದರಾಮಯ್ಯರ ಭಂಡತನಕ್ಕೆ ಏನು ಹೇಳೋಣ: ಆರ್‌ ಅಶೋಕ್

Date:

ಎಡವಟ್ಟು ಮಾಡೋದು, ಆಮೇಲೆ ಸುಳ್ಳು ಹೇಳೋದು ಇದೇ ಸಿಎಂ ಸಿದ್ದರಾಮಯ್ಯ ಅವರ ದಿನಚರಿ! ಸ್ವಾಮಿ ಮುಖ್ಯಮಂತ್ರಿಗಳೇ, ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಸುಳ್ಳು ಹೇಳುತ್ತೀರಲ್ಲಾ, ತಮ್ಮ ಭಂಡತನಕ್ಕೆ ಏನು ಹೇಳೋಣ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

“ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ” ಮಂಗಳವಾರ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದರು.

ಸಿದ್ದರಾಮಯ್ಯ ಅವರ ಈ ಸ್ಪಷ್ಟನೆಗೆ ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿರುವ ಆರ್‌ ಅಶೋಕ್‌ ಅವರು, “ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಕೊಡಬೇಕು ಎಂದು ತಮ್ಮ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ಶಾಸಕರು ಆಗಸ್ಟ್ 24, 2024 ರಂದು ತಮಗೆ ಪತ್ರ ಬರೆಯುತ್ತಾರೆ. ತಾವು ಅದೇ ದಿನವೇ ಈ ಪತ್ರವನ್ನ ಪರಿಶೀಲಿಸಿ ಮಂಡಿಸಿ ಎಂದು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿದ್ದೀರಿ. ಈ ಸಂಬಂಧ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರಲೂ ಸಹ ತಾವು ಅನುಮೋದನೆ ನೀಡಿದ್ದೀರಿ” ಎಂದು ಪತ್ರವನ್ನು ಲಗತ್ತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾರ್ವಜನಿಕ ಸಂಯಮವೂ, ಸುದ್ದಿ ಮಾಧ್ಯಮಗಳೂ

“ಮೀಸಲಾತಿ ಬಗ್ಗೆ ಪತ್ರ ವ್ಯವಹಾರ ನಡೆದಿದ್ದರೂ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಹಸಿ ಸುಳ್ಳು ಹೇಳುತ್ತೀರಲ್ಲ, ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ, ನೈತಿಕತೆ ಅನ್ನುವುದೇ ಇಲ್ಲವೇ? ಸತ್ಯದ ಮೇಲೆ ಪ್ರಮಾಣ ವಚನ ಸ್ವೀಕರಿಸಿ, ಬಾಯಿ ಬಿಟ್ಟರೆ ಬರಿ ಸುಳ್ಳು ಹೇಳುವ ತಮ್ಮನ್ನು ಆ ತಾಯಿ ಚಾಮುಂಡೇಶ್ವರಿ ಮೆಚ್ಚುತ್ತಾಳಾ? ತಮ್ಮನ್ನು ನಂಬಿ ಮತ ಹಾಕಿ ಅಧಿಕಾರ ಕೊಟ್ಟ ಕನ್ನಡಿಗರು ಕ್ಷಮಿಸುತ್ತಾರಾ?” ಎಂದು ಕುಟುಕಿದ್ದಾರೆ.

https://twitter.com/RAshokaBJP/status/1856258327598035440
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...