ಮುಸ್ಲಿಂ ಮೀಸಲಾತಿ | ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ರವಿವರ್ಮ ಕುಮಾರ್

Date:

ಮುಸ್ಲಿಂರನ್ನು ಹಿಂದುಳಿದ ಪಟ್ಟಿಗೆ ಸೇರಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಹಿಂದುಳಿದ ಮೀಸಲಾತಿ ಮುಸ್ಲಿಂರಿಗೆ ಕೊಡಲಾಗಿದೆ ಎಂದು ಪ್ರಧಾನಿ ಮೋದಿಯವರು ಹೇಳಿಕೆ ನೀಡಿದ್ದಾರೆ. ಇದು ಮೋದಿಯ ಮಹಾ ಸುಳ್ಳು ಎಂದು ಮಾಜಿ ಅಡ್ವೋಕೆಟ್ ಜನರಲ್ ರವಿವರ್ಮ ಕುಮಾರ್‌ ಹೇಳಿದರು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಬೆಂಗಳೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಚುನಾವಣೆ ಸಂದರ್ಭದಲ್ಲಿ ಮೋದಿಯವರು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“1874ರಲ್ಲಿ ಮೀಸಲಾತಿ ಬಂತು. 1876ರಲ್ಲಿ ಜಾತಿ ಜನಗಣತಿ ನಡೆಯಿತು. ಅದರ ಆಧಾರದ ಮೇಲೆ ಮೀಸಲಾತಿ ಒಡೆಯರ್ ಮೀಸಲಾತಿ ಕೊಟ್ಟರು. 1874ರಲ್ಲಿ 10 ಹುದ್ದೆಗಳಲ್ಲಿ ಬ್ರಾಹ್ಮಣರಿಗೆ 2 ಹುದ್ದೆ/ಉಳಿದ 8 ಹುದ್ದೆ ಮುಸ್ಲಿಂ ಮತ್ತು ಇತರರಿಗೆ ಕೊಡಲಾಯಿತು. 1874ರಿಂದ ಮುಸ್ಲಿಂರಿಗೆ ಮೀಸಲಾತಿ ಇದೆ. ಈ ಸತ್ಯವನ್ನು ಮರೆಮಾಚಿ ಸುಳ್ಳು ಹೇಳಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೀಸಲಾತಿ ಬದಲಾವಣೆ ಬಗ್ಗೆ ಈ ಸರ್ಕಾರ ಎನೂ ಮಾಡಿಲ್ಲ

“ದೇವರಾಜ್ ಅರಸು ಸರ್ಕಾರ 1972ರಲ್ಲಿ ಹಾವನೂರು ಆಯೋಗ ಮಾಡಿದೆ. 1975ರಲ್ಲಿ ಆಯೋಗ ವರದಿ ಸಲ್ಲಿಕೆ ಮಾಡಿತು. ವರದಿಗೆ ವಿರೋಧ – ಪರ ಅಭಿಪ್ರಾಯ ಬಂತು. 1977ರಲ್ಲಿ ಹಾವನೂರು ಆಯೋಗದ ವರದಿ ಜಾರಿ ಮಾಡಲಾಯಿತು. ದೇವರಾಜ್ ಅರಸು ಅವರು ವರದಿ ಜಾರಿ ಮಾಡಿ‌ ಹಿಂದುಳಿದವರಿಗೆ ಮೀಸಲಾತಿ ಕೊಟ್ಟರು. ಜೊತೆಗೆ ಮುಸ್ಲಿಂರನ್ನು ಹಿಂದುಳಿದ ಜಾತಿ ಅಂತ ಮೀಸಲಾತಿ ಕೊಡಲಾಯಿತು” ಎಂದು ವಿವರಿಸಿದರು.

ಮುಸ್ಲಿಮರಿಗೆ ಕೊಟ್ಟ ಮೀಸಲಾತಿಗೆ ಸುಮಾರು 150ವರ್ಷ ಇತಿಹಾಸವಿದೆ. ಇದರ ವಿರುದ್ದ ಕೋ ಚನ್ನಬಸಪ್ಪ ಮೊಕದ್ದಮೆ ಹೂಡಿದರು. ಲಿಂಗಾಯತ ಪರ ವಾದ ಮಂಡಿಸಿದರು. ಸೋಮಶೇಖರ್ ಎಂಬುವರು ವಾದಿಯಾಗಿದ್ದರು. ಸೋಮಶೇಖರ್ ಕೇಸ್ ಅಂತ ಕರೆಯಲಾಗ್ತಿದೆ. 1979ರಲ್ಲಿ ಹೈಕೋರ್ಟ್ ಮುಸ್ಲಿಂ ಮೀಸಲಾತಿ ಪರ ತೀರ್ಪು ಕೊಟ್ಟಿತು. ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಯಿತು. ಸುಪ್ರೀಂ ಕೋರ್ಟ್ ಸಹ ಮುಸ್ಲಿಂ ಮೀಸಲಾತಿ ಎತ್ತಿಹಿಡಿಯಿತು” ಎಂದರು.

“ಮೋದಿಯವರು ಸುಳ್ಳು ಹೇಳುತ್ತಿದ್ದಾರೆ. ಇದು ಈಗಿನ ಮೀಸಲಾತಿ ಅಲ್ಲ. ಇದು 150 ವರ್ಷಗಳಿಂದ ಕೊಡಲಾಗಿದೆ. ಮುಸ್ಲಿಂರಿಗೆ ಶೇ.4 ಮೀಸಲಾತಿ ರಾಮಕೃಷ್ಣ ಹೆಗಡೆ ಸರ್ಕಾರ ಮಾಡಿದ್ದು. ಲಿಂಗಾಯತರಿಗೆ ಹಿಂದುಳಿದ 3ಬಿ ಅನ್ವಯ ಮೀಸಲಾತಿ ಕೊಡಲಾಯಿತು. 2ಬಿ ಅನ್ವಯ ಮುಸ್ಲಿಂರಿಗೆ ಮೀಸಲಾತಿ ನೀಡಲಾಯಿತು. ಇದು ಕಾಂಗ್ರೆಸ್ ಸರ್ಕಾರ ಮಾಡಿದ್ದಲ್ಲ” ಎಂದರು.

“ದೇವೆಗೌಡರು ತಮ್ಮ ಸರ್ಕಾರದಲ್ಲಿ ಈ ಆದೇಶ ಮಾಡಿದ್ದು. ಕುಮಾರಸ್ವಾಮಿ, ಯಡಿಯೂರಪ್ಪ, ಸದಾನಂದಗೌಡ, ಶೆಟ್ಟರ್ ಸರ್ಕಾರ ಈ ಮೀಸಲಾತಿಯನ್ನು ಮುಂದುವರಿಸಲಾಗಿದೆ. ಧರ್ಮದ ಆಧಾರಿತ ಮುಸ್ಲಿಂ ಮೀಸಲಾತಿ ಕೊಟ್ಟಿಲ್ಲ, ಇದು ಸುಳ್ಳು” ಎಂದರು.

ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹಂಸರಾಜ್ ಗಂಗಾರಾಮ್ ಅಹೀರ್ ಬಿಜೆಪಿ ಬಾಲಬುಡುಕ. ಚುನಾವಣೆಯಲ್ಲಿ ಸೋತವನು ಅವನು. ಆತನಿಗೆ ಕಾಂಗ್ರೆಸ್ ಮೇಲೆ ಸಿಟ್ಟಿದೆ. ಈಗ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಆಗಿದ್ದಾರೆ. 1993ರಲ್ಲಿ ಆಯೋಗ ಅಸ್ತಿತ್ವಕ್ಕೆ ಬಂದಿದೆ.
ಯಾವತ್ತೂ ರಾಷ್ಟ್ರೀಯ ಆಯೋಗ ಕರ್ನಾಟಕ ಮೀಸಲಾತಿ ಬಗ್ಗೆ ಚಕಾರ ಎತ್ತಿಲ್ಲ” ಎಂದು ಕಿಡಿಕಾರಿದರು.

“ಮುಸ್ಲಿಂರಿಗೆ ಕೊಟ್ಟ ಮೀಸಲಾತಿಯನ್ನು ಬೊಮ್ಮಾಯಿ ಸರ್ಕಾರ ಕಿತ್ತು ಹಾಕಿತ್ತು. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಯಿತು. ಈ ಪ್ರಕರಣದ ವಿಚಾರದಲ್ಲಿ ಬೊಮ್ಮಾಯಿ ಸರ್ಕಾರ, ಮೀಸಲಾತಿ ಆದೇಶ ಜಾರಿ ಮಾಡಲ್ಲ ಅಂತ ಹೇಳಿತು. ಅದು ಇನ್ನೂ ಕೋರ್ಟ್‌ನಲ್ಲಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...