ಹೋಳಿಯಂದು ಮುಸ್ಲಿಮರು ಮನೆಯೊಳಗಿರಿ: ಬಿಹಾರ ಬಿಜೆಪಿ ಶಾಸಕರ ಹೇಳಿಕೆಗೆ ತೇಜಸ್ವಿ ತಿರುಗೇಟು

Date:

“ಈ ವರ್ಷ ಪವಿತ್ರ ರಂಜಾನ್ ಮಾಸದ ಶುಕ್ರವಾರವೇ ಹೋಳಿ ಬರುತ್ತದೆ. ಈ ದಿನದಂದು ಮುಸ್ಲಿಮರು ಒಳಗೆಯೇ ಇರಿ. ಹಿಂದೂಗಳು ತಮ್ಮ ಹಬ್ಬವನ್ನು ಯಾವುದೇ ಅಡೆತಡೆಗಳಿಲ್ಲದೆ ಆಚರಿಸಲು ಬಿಡಿ ಎಂದು ಬಿಹಾರದ ಬಿಜೆಪಿ ಶಾಸಕರೊಬ್ಬರು ಸೋಮವಾರ ಮುಸ್ಲಿಮರಿಗೆ ತಿಳಿಸಿದ್ದಾರೆ. ಸದ್ಯ ಬಿಹಾರದ ಶಾಸಕನ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಮಧುಬನಿ ಜಿಲ್ಲೆಯ ಬಿಸ್ಫಿ ವಿಧಾನಸಭಾ ಕ್ಷೇತ್ರದ ಶಾಸಕ ಹರಿಭೂಷಣ್ ಠಾಕೂರ್ ಬಚೌಲ್ ಅವರು ವಿಧಾನ ಸಭಾ ಆವರಣದಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದರು. “ಒಂದು ವರ್ಷದಲ್ಲಿ 52 ಜುಮ್ಮಾಗಳು (ಶುಕ್ರವಾರಗಳು) ಇರುತ್ತವೆ. ಅವುಗಳಲ್ಲಿ ಒಂದು ಹೋಳಿಯ ದಿನದಂದೇ ಬಂದಿದೆ. ಆದ್ದರಿಂದ, ಮುಸ್ಲಿಮರು ಶುಕ್ರವಾರದಂದು ಹಿಂದೂಗಳು ಹಬ್ಬವನ್ನು ಆಚರಿಸಲು ಬಿಡಬೇಕು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಬೆಳಗಾವಿ | ಹೋಳಿ ಮತ್ತು ರಂಜಾನ್ ಹಬ್ಬ ಶಾಂತಿಯುತವಾಗಿ ಆಚರಿಸಲು ಜಿಲ್ಲಾಧಿಕಾರಿಗಳ ಕರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶುಕ್ರವಾರ ಹಿಂದೂಗಳು ಮುಸ್ಲಿಮರ ಮೇಲೆ ಬಣ್ಣ ಹಾಕಿದರೆ ಮುಸ್ಲಿಮರು ಬೇಸರಪಡಬಾರದು. ಬಣ್ಣ ಹಾಕುವುದರಿಂದ ಅಷ್ಟೊಂದು ಸಮಸ್ಯೆ ಇದ್ದರೆ, ನೀವು ಮನೆಯಲ್ಲಿಯೇ ಇರಿ. ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಇದು ಅತ್ಯಗತ್ಯ” ಎಂದಿದ್ದಾರೆ.

ಮುಸ್ಲಿಮರು ಉಪವಾಸ ಆಚರಿಸುತ್ತಿದ್ದಾರೆ. ಶುಕ್ರವಾರ ವಿಶೇಷ ಪ್ರಾರ್ಥನೆ ಇರುತ್ತದೆ ಅಲ್ಲವೇ? ಎಂಬ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕರು, “ಮುಸ್ಲಿಮರು ಯಾವಾಗಲೂ ಎರಡು ನೀತಿಗಳನ್ನು ಹೊಂದಿದ್ದಾರೆ. ಅಬಿರ್-ಗುಲಾಲ್ (ಬಣ್ಣದ ಪುಡಿ) ಮಾರಾಟ ಮಾಡಲು ಮುಸ್ಲಿಮರು ಅಂಗಡಿ ತೆರೆಯುತ್ತಾರೆ. ಈ ಮೂಲಕ ಹಣ ಗಳಿಸಿ ಸಂತೋಷಪಡುತ್ತಾರೆ. ಆದರೆ ಅದೇ ಬಣ್ಣ ತಮ್ಮ ಬಟ್ಟೆಗಳಿಗೆ ಬಿದ್ದರೆ ದೋಜಖ್‌ಗೆ (ನರಕ) ಹೋಗುವ ಭಯ ಅವರಲ್ಲಿ ಶುರುವಾಗುತ್ತದೆ” ಎಂದು ವಾಗ್ದಾಳಿ ನಡೆಸಿದರು.

ಇನ್ನು ಬಿಜೆಪಿ ಶಾಸಕರ ಹೇಳಿಕೆಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ತಿರುಗೇಟು ನೀಡಿದ್ದಾರೆ. “ಅಂತಹ ಹೇಳಿಕೆಗಳನ್ನು ನೀಡಲು ಅವರು ಯಾರು? ಅವರು ಅಂತಹ ವಿಷಯಗಳನ್ನು ಹೇಗೆ ನೀಡುತ್ತಾರೆ” ಎಂದು ಪ್ರಶ್ನಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಗುರಿಯಾಗಿಸಿಕೊಂಡ ಅವರು, “ಮುಖ್ಯಮಂತ್ರಿ ಎಲ್ಲಿದ್ದಾರೆ? ಅವರಿಗೆ ಬಚೋಲ್ ಅವರನ್ನು ಶಿಕ್ಷಿಸಲು ಧೈರ್ಯವಿದೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ | ‘ಗೃಹಲಕ್ಷ್ಮಿ’ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿಗೆ ಸಿಎಂ ಸನ್ಮಾನ

“ಇದು ‘ರಾಮ್ ಮತ್ತು ರಹೀಮ್’ ಅವರನ್ನು ನಂಬುವ ದೇಶ. ಇದು ಬಿಹಾರ – ಇಲ್ಲಿ, ಐದು ಅಥವಾ ಆರು ಹಿಂದೂಗಳು ಒಬ್ಬ ಮುಸ್ಲಿಂ ಸಹೋದರನನ್ನು ರಕ್ಷಿಸಲು ನಿಲ್ಲುತ್ತಾರೆ” ಎಂದು ತೇಜಸ್ವಿ ಹೇಳಿದ್ದಾರೆ. “ಹಬ್ಬಗಳ ವಿಷಯದಲ್ಲಿ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಯಾವುದೇ ಸಮಸ್ಯೆ ಇಲ್ಲ” ಎಂದು ಆರ್‌ಜೆಡಿ ಶಾಸಕ ಮತ್ತು ಮಾಜಿ ಸಚಿವ ಇಸ್ರೇಲ್ ಮನ್ಸೂರಿ ಹೇಳಿದ್ದಾರೆ.

ಬಿಜೆಪಿಗರು ನಿರಂತರವಾಗಿ ಹಿಂದೂಗಳ ನಡುವೆ ಮುಸ್ಲಿಮರು ವಿರುದ್ಧ ವಿಷಬೀಜ ಬಿತ್ತಿದ್ದರೆ, ಇತ್ತರೆ ಎಸ್‌ಡಿಪಿಐ ಮುಸ್ಲಿಮರನ್ನು ಹಿಂದೂಗಳ ವಿರುದ್ಧ ಪರೋಕ್ಷವಾಗಿ ಎತ್ತಿಕಟ್ಟುತ್ತಿದೆ. ಇವೆರಡೂ ರಾಜಕೀಯಗಳ ನಡುವೆ ಸಿಲುಕಿರುವುದು ಬಡ ಯುವಕರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...