ಬಿಹಾರ ಚುನಾವಣೆ | ಸನಾತನದ ಬಗ್ಗೆ ಭಾಷಣ, ಪ್ರತಿದಿನ ಮಾಂಸದೂಟ: ಎನ್‌ಡಿಎ ವಿರುದ್ಧ ತೇಜಸ್ವಿ ವಾಗ್ದಾಳಿ

Date:

ಬಿಹಾರ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಇರುವಾಗ ರಾಜ್ಯದಲ್ಲಿ ‘ಮಟನ್ ರಾಜಕೀಯ’ ಶುರುವಾಗಿದೆ. ಆಡಳಿತರೂಢ ಜೆಡಿಯು-ಬಿಜೆಪಿ ಮತ್ತು ವಿರೋಧ ಪಕ್ಷ ಆರ್‌ಜೆಡಿ ನಡುವೆ ಮಾಂಸದೂಟದ ವಿಚಾರದಲ್ಲಿಯೇ ವಾಕ್ಸಮರ ನಡೆಯುತ್ತಿದೆ. “ಸನಾತನದ ಬಗ್ಗೆ ಧೀರ್ಘ ಭಾಷಣ ಮಾಡುವವರು, ಪ್ರತಿದಿನ ಮಾಂಸದೂಟ ಮಾಡುತ್ತಾರೆ” ಎಂದು ಎನ್‌ಡಿಎ ವಿರುದ್ಧ ಆರ್‌ಜೆಡಿ ನಾಯಕ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಪಟನಾದ ವಿಧಾನಸಭೆಯಲ್ಲಿ ನಡೆದ ಎನ್‌ಡಿಎ ಸಭೆಯ ವಿಡಿಯೋವನ್ನು ತೇಜಸ್ವಿ ಯಾದವ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದ ಸ್ಥಳದಲ್ಲಿ ‘ಮಟನ್ ರೋಗಂಜೋಷ್’ ಇರುವುದು ಕಂಡುಬಂದಿದೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಕನ್ವರ್ ಯಾತ್ರೆ: ಮಾಂಸಾಹಾರಿ ರೆಸ್ಟೋರೆಂಟ್‌ಗಳ ಮುಚ್ಚಿಸಿದ ಹಿಂದೂ ಸಂಘಟನೆ, ಆಹಾರ ಹೇರಿಕೆ ವಿರುದ್ಧ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್ ತಂದೆ, ಹಿರಿಯ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಶ್ರಾವಣ ಮಾಸದಲ್ಲಿ ಮೀನು, ಮಾಂಸದೂಟ ಮಾಡಿದ್ದರು. ಈ ಮೂಲಕ ವಿಪಕ್ಷ ನಾಯಕರುಗಳು ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಭಾಷಣದಲ್ಲಿ ಹೇಳಿದ್ದರು. ಆದರೆ ಇದೀಗ ಬಿಹಾರ ವಿಧಾನಸಭೆ ನಡೆಯುವ ವೇಳೆ ಶ್ರಾವಣ ತಿಂಗಳಾದರೂ ಎನ್‌ಡಿಎ ಶಾಸಕರು ಮಾಂಸಹಾರ ಸೇವಿಸುತ್ತಿರುವುದನ್ನು ವಿಪಕ್ಷಗಳು ಟೀಕಿಸಿದೆ.

ಈ ಹಿಂದೆ ಶ್ರಾವಣ ತಿಂಗಳಲ್ಲಿ ಮಾಂಸಹಾರ ಸೇವಿಸಿದ್ದಕ್ಕಾಗಿ ಬಿಜೆಪಿಯಿಂದ ಟೀಕೆಗೆ ಗುರಿಯಾಗಿದ್ದ ತೇಜಸ್ವಿ ಯಾದವ್ ಅವರು ಬಿಜೆಪಿಯ ಆಹಾರ ರಾಜಕೀಯವನ್ನು ಈಗ ಗುರಿಯಾಗಿಸಿಕೊಂಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದೊಂದಿಗೆ, ಬಿಜೆಪಿಯ ಮಂತ್ರಿಗಳು ಮತ್ತು ಶಾಸಕರು ಶ್ರಾವಣ ಸೋಮವಾರದಂದು ಮಟನ್ ತಿನ್ನುತ್ತಿದ್ದಾರೆ” ಎಂದು ಯಾದವ್ ವ್ಯಂಗ್ಯವಾಡಿದ್ದಾರೆ.

“ಮೋದಿ ಅವರ ಸಂಸತ್ತಿನಲ್ಲಿರುವ ಬಿಹಾರದ ಮೂರು ಸಚಿವರುಗಳು ಶ್ರಾವಣ ಮಾಸದಲ್ಲೂ ಪ್ರತಿದಿನ ಮೂರು ಕಿಲೋ ಮಟನ್ ತಿನ್ನುತ್ತಾರೆ. ಆದರೆ ತೋರ್ಪಡಿಕೆಗೆ ಸನಾತನ ಧರ್ಮದ ಬಗ್ಗೆ ಧೀರ್ಘ ಭಾಷಣ ಮಾಡುತ್ತಾರೆ. ನಮಗೆ ಆಹಾರದ ವಿಷಯದಲ್ಲಿ ಯಾವುದೇ ತಕರಾರು ಇಲ್ಲ. ಬೇಕಾದ ಆಹಾರ ಸೇವಿಸಲಿ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಎಷ್ಟು ತಾರತಮ್ಯ ಹೊಂದಿದ್ದಾರೆ ಎಂಬ ಪ್ರಶ್ನೆ” ಎಂದು ಹೇಳಿದ್ದಾರೆ.

“ಪ್ರಧಾನಿ ಮೋದಿ ಅವರಿಗೆ ಶ್ರಾವಣ ತಿಂಗಳಲ್ಲಿ ಅವರ ಪಕ್ಷದ ನಾಯಕರು ಮಟನ್ ತಿನ್ನುವುದರಿಂದ ತೊಂದರೆಯಿಲ್ಲ. ಆದರೆ ಶ್ರಾವಣದಲ್ಲಿ ಮಾಂಸಹಾರ ಸೇವಿಸದ ನಾಯಕರು ಮಾಂಸಹಾರ ಸೇವಿಸಿದರೆ ತಮ್ಮ ಆಹಾರ ಸಂಸ್ಕೃತಿಯನ್ನು ದೇಶದ ಮೇಲೆ ಹೇರಲು ಯಾವ ಸುಳ್ಳನ್ನೂ ಬಳಸಲು ಸಿದ್ಧರಿರುತ್ತಾರೆ” ಎಂದು ಟೀಕಿಸಿದ್ದಾರೆ.

ಯಾದವ್ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಮನೋಜ್ ಶರ್ಮಾ, “ಯಾದವ್ ಅವರು ಆಹಾರ ಕೌಂಟರ್ ನೋಡುತ್ತಿರಬೇಕೇ ಅಥವಾ ಬಿಹಾರದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿರಬೇಕೇ? ಬಹುಶಃ ಅಡುಗೆ ಮಾಡುವವರು ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಯ್ಕೆಗಳನ್ನು ನೀಡಿರಬಹುದು. ಅದರಲ್ಲಿ ಏನಿದೆ” ಎಂದು ಪ್ರಶ್ನಿಸಿದ್ದಾರೆ.

ಕಳೆದ ವಾರ, ಜೆಡಿಯು ನಾಯಕ ಮತ್ತು ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಯಾನೆ ಲಾಲನ್ ಸಿಂಗ್ ಮಟನ್ ಪಾರ್ಟಿ ಆಯೋಜಿಸಿದ್ದಾರೆ. ಈ ವಿಚಾರದಲ್ಲಿ ಯಾದವ್ ಎನ್‌ಡಿಎ ಮತ್ತು ಪ್ರಧಾನಿಯನ್ನು ಗುರಿಯಾಗಿಸಿಕೊಂಡಿದ್ದರು. “ನಮ್ಮನ್ನು ಅವರು ಸನಾತನ ವಿರೋಧಿಗಳು ಎಂದು ಕರೆದಿದ್ದಾರೆ. ಪ್ರಧಾನಿ ನಾಳೆ ಬಿಹಾರಕ್ಕೆ ಬರುತ್ತಿದ್ದಾರೆ ಮತ್ತು ತಮ್ಮ ಬೆಂಬಲಿಗರಿಗೆ ಮಟನ್ ಪಾರ್ಟಿ ಏರ್ಪಡಿಸಿದ ಲಾಲನ್ ಸಿಂಗ್ ಅವರಿಗೆ ಧನ್ಯವಾದ ಹೇಳಲಿದ್ದಾರೆ. ಅವರು ದಾನ ಕಾರ್ಯವನ್ನು ಮಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...