ಚುನಾವಣಾ ಕಾರ್ಯಯೋಜನೆ ಚರ್ಚೆಗೆ ಮಹಾರಾಷ್ಟ್ರದ ಅಘಾಡಿ ಮೈತ್ರಿ ಕೂಟ ಸಭೆ

Date:

  • ಶರದ್ ಪವರ್ ಮನೆಯಲ್ಲಿ ಅಘಾಡಿ ಮೈತ್ರಿ ಕೂಟ ಸಭೆ
  • ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚರ್ಚೆ

ಕರ್ನಾಟಕದಲ್ಲಿ ಕಾಂಗ್ರೆಸ್ ಯಶಸ್ಸಿನ ನಂತರ ಮಹಾರಾಷ್ಟ್ರದ ಮಹಾ ಅಘಾಡಿ ಮೈತ್ರಿ ಕೂಟ (ಎಂವಿಎ) ಹೊಸ ಹುರುಪಿನಲ್ಲಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಿಗೆ ಕಾರ್ಯಯೋಜನೆ ಸಿದ್ಧಪಡಿಸಲು ಮುಂದಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅತ್ಯುತ್ತಮ ಪ್ರದರ್ಶನದಿಂದ ಉತ್ತೇಜನಗೊಂಡಿರುವ ಎಂವಿಎ, ಭಾನುವಾರ ಸಭೆ ಸೇರಿ ಚರ್ಚಿಸಿದೆ. ಸಭೆಯಲ್ಲಿ ಮುಂಬರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಿಗೆ ‘ಗೆಲುವಿನ ಕಾರ್ಯಯೋಜನೆ’ ರೂಪಿಸಲಾಗಿದೆ.

ಎನ್‌ಸಿಪಿ ರಾಷ್ಟ್ರಾಧ್ಯಕ್ಷ ಶರದ್ ಪವಾರ್ ಮನೆಯಲ್ಲಿ ನಡೆದ ಸಭೆಯಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಶಿವಸೇನೆ ವಕ್ತಾರರಾದ ಸಂಜಯ್ ರೌತ್, ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ, ಮಹಾರಾಷ್ಟ್ರದ ವಿಪಕ್ಷ ನಾಯಕ ಅಜಿತ್ ಪವಾರ್, ಬಾಳಾಸಾಹೇಬ್ ಥೋರಟ್ ಮೊದಲಾದವರು ಭಾಗವಹಿಸಿದ್ದಾರೆ. ಎನ್‌ಸಿಪಿ ಮುಖಂಡರಾದ ರಾಜ್ಯ ಎನ್‌ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್, ಸಂಸದೆ ಸುಪ್ರಿಯಾ ಸುಲೆ, ಜಿತೇಂದ್ರ ಅವದ್ ಅವರೂ ಸಭೆಯಲ್ಲಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಾ ಅಘಾಡಿ ಮೈತ್ರಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕರ್ನಾಟಕದಲ್ಲಿ ಶೇ 40ರಷ್ಟು ಭ್ರಷ್ಟಾಚಾರವಿದ್ದರೆ, ಮಹಾರಾಷ್ಟ್ರದಲ್ಲಿ ಶೇ 100 ಭ್ರಷ್ಟಾಚಾರವಿದೆ. ಈ ಸರ್ಕಾರವನ್ನು ಸೋಲಿಸುತ್ತೇವೆ” ಎಂದು ಸಭೆಯ ನಂತರ ಸಂಜಯ್ ರೌತ್ ಹೇಳಿದ್ದಾರೆ.

“ಕರ್ನಾಟಕದಂತೆ ಮಹಾರಾಷ್ಟ್ರದ ಜನರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ತಮ್ಮ ವಿರೋಧ ತೋರಿಸಲಿದ್ದಾರೆ” ಎಂದು ನಾನಾ ಪಟೋಲೆ ಹೇಳಿದ್ದಾರೆ.

“ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ತನ್ನೆಲ್ಲಾ ಸಾಮರ್ಥ್ಯವನ್ನು ಒರೆಗೆ ಹಚ್ಚಿದರೂ ಮತ್ತು ವಂಚನೆಗೆ ಪ್ರಯತ್ನಿಸಿದರೂ ಅದನ್ನು ಸುಲಭವಾಗಿ ಸೋಲಿಸಬಹುದು” ಎನ್ನುವುದು ಸಾಬೀತಾಗಿದೆ ಎಂದು ಸಂಜಯ್ ರೌತ್‌ ಸಭೆಗೆ ಮೊದಲು ಹೇಳಿದ್ದರು.

ಇತ್ತೀಚೆಗೆ ಕಸ್ಬಾ ಪೇಠ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಂವಿಎ ಜೊತೆಗೂಡಿ ಹೋರಾಡಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿರುವುದನ್ನು ಅವರು ನೆನಪಿಸಿದ್ದಾರೆ. “ಕಸ್ಬಾ ಪೇಠ್‌ನಲ್ಲಿ ಮೂರು ದಶಕಗಳ ನಂತರ ಬಿಜೆಪಿಗೆ ಸೋಲಾಗಿದೆ. ನಾವು ಜೊತೆಗೂಡಿ ಚುನಾವಣೆ ಎದುರಿಸಿದಲ್ಲಿ ಶಿಂಧೆ ಶಿವಸೇನೆ ನಮಗೆ ಸಮನಾಗಿ ನಿಲ್ಲಲಾಗದು. ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಿದ್ದೇವೆ” ಎಂದು ಅವರು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ?: ಸಿಎಂ ಆಯ್ಕೆ | ಮೂವರು ವೀಕ್ಷಕರ ನೇಮಿಸಿದ ಎಐಸಿಸಿ

“ಸಭೆಯಲ್ಲಿ ಮುಂಬರುವ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಹೇಗೆ ಎದುರಿಸುವುದು ಎಂಬ ಬಗ್ಗೆ ಚರ್ಚಿಸಲಾಗುವುದು. ಕರ್ನಾಟಕದ ಚುನಾವಣೆಯಲ್ಲಿ ಬಿಜೆಪಿಯನ್ನು ಹೇಗೆ ಸುಲಭವಾಗಿ ಸೋಲಿಸಬಹುದು ಎನ್ನುವುದು ಸಾಬೀತಾಗಿದೆ. ನಾವೆಲ್ಲರೂ ಜೊತೆಗೂಡಿ ಕೆಲಸ ಮಾಡಿದರೆ ಗರಿಷ್ಠ ಲೋಕಸಭಾ ಸ್ಥಾನಗಳನ್ನು ಗೆಲ್ಲಬಹುದು ಮತ್ತು ವಿಧಾನಸಭಾ ಚುನಾವಣೆಯನ್ನೂ ದೊಡ್ಡ ಪ್ರಮಾಣದಲ್ಲಿ ಗೆಲ್ಲಬಹುದು” ಎಂದು ರೌತ್ ಹೇಳಿದ್ದಾರೆ.

ಎನ್‌ಸಿಪಿ ಮತ್ತು ಪಕ್ಷದ ಇತರ ಮಿತ್ರರ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಮತ್ತು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದನ್ನು ಕಡಿಮೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದೂ ಅವರು ಹೇಳಿದ್ದಾರೆ. “ಮಾಧ್ಯಮಗಳ ಮುಂದೆ ನೀಡುವ ಹೇಳಿಕೆ ಮೈತ್ರಿಗೆ ತೊಡಕಾಗದಂತೆ ಮಾತುಕತೆ ಮೂಲಕ ಬಿಕ್ಕಟ್ಟು ಶಮನ ಮಾಡಲು ನಿರ್ಧರಿಸಲಿದ್ದೇವೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...