ನನ್ನ ಅಸಮಾಧಾನ ಶಿವಮೊಗ್ಗ, ತುಮಕೂರು ಸೇರಿ ನಾಲ್ಕು ಕ್ಷೇತ್ರಗಳ ಮೇಲೂ ಪರಿಣಾಮ ಬೀರುತ್ತೆ: ಮಾಧುಸ್ವಾಮಿ

Date:

ಪಕ್ಷದಲ್ಲಿನ ನನ್ನ ಅಸಮಾಧಾನ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ನಾಯಕ ಜೆಸಿ ಮಾಧುಸ್ವಾಮಿ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ತಪ್ಪಿರುವುದರಿಂದ ತೀವ್ರ ಅಸಮಾಧಾನಗೊಂಡಿರುವ ಅವರು ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದರು.

ತುಮಕೂರಿನಲ್ಲಿ ನನಗೆ ಅನ್ಯಾಯ ಆಗಿದೆ. ಲಿಂಗಾಯತ ಸಮುದಾಯಕ್ಕೆ ಟಿಕೆಟ್ ಕೊಡಿ ಅಂತಾ ನಾನು ಕೇಳಿಲ್ಲ. ಲಿಂಗಾಯತರಿಗೆ ಟಿಕೆಟ್ ಕೊಟ್ಟರೆ ಸ್ಥಳೀಯರಿಗೆ ಕೊಡಿ, ಅದನ್ನ ತಪ್ಪಿಸಬೇಡಿ ಅಂತಾ ಕೇಳಿದ್ದೇವೆ. ಐದಾರು ಜಿಲ್ಲೆಯಲ್ಲಿ ನಮ್ಮ ಸಮುದಾಯದವರು ವೋಟ್ ಹಾಕಬೇಕಿದೆ. ನಂಗೆ ಎಂಪಿ ನಿಲ್ಲು ಅಂದೋರು ಯಡಿಯೂರಪ್ಪನವರೇ. ಎರಡು ಮೂರು ಸಾರಿ ನಾನು ಬೇಡ ಅಂದಾಗ ನಿಲ್ಲು ಎಂದವರು ಯಡಿಯೂರಪ್ಪ. ಇದು ಬಹಿರಂಗ ಆಗಬೇಕು ಅಷ್ಟೇ” ಎಂದು ಮಾಧುಸ್ವಾಮಿ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ದುಡ್ಡಲ್ಲಿ ರಾಜಕಾರಣ ಮಾಡಿದವರಲ್ಲ. ಮಧ್ಯಮ ವರ್ಗದ ಕುಟುಂಬದಿಂದ ಬಂದವರು. ಕಾರ್ಯಕರ್ತರ ಜೊತೆ ಮಾತನಾಡುತ್ತೇನೆ. ಅವರ ಬಳಿಯೂ ಎಲ್ಲ ವಿಚಾರ ಮಾತನಾಡುತ್ತೇನೆ. ಅವರು ಏನು ಹೇಳುತ್ತಾರೆ ಅದಕ್ಕೆ ನಾನು ಬದ್ಧನಗಿರುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಬಿಜೆಪಿ-ಜೆಡಿಎಸ್ ನಡುವಿನ ಬಿರುಕಲ್ಲ, ಬಿಕ್ಕಟ್ಟಲ್ಲ, ಆಟ

ಸೋಮಣ್ಣ ಮೇಲೆ ಅಸಮಾಧಾನವಿಲ್ಲ

ವೈಯಕ್ತಿವಾಗಿ ವಿ ಸೋಮಣ್ಣ ಮೇಲೆ ಅಸಮಾಧಾನವಿಲ್ಲ. ತುಮಕೂರಿನಲ್ಲಿ ಬೆಳೆದವನಾಗಿ ಹೊರಗಿನವರಿಗೆ ಟಿಕೆಟ್ ಕೊಡುವುದಕ್ಕೆ ನನ್ನ ಒಪ್ಪಿಗೆ ಇಲ್ಲ. ನನಗೆ ಕೊಡಬೇಕು ಅಂತಲ್ಲ, ಜಿಲ್ಲೆಯ ಯಾರಿಗೆ ಕೊಟ್ಟರೂ ತೊಂದರೆ ಇರಲಿಲ್ಲ.ಅವರು ರಾಜ್ಯಸಭೆಗೆ ಹೋಗುತ್ತಾರೆ ಎಂದಾಗ ನಾನು ಸಂತೋಷಪಟ್ಟಿದ್ದೆ. ಆದರೆ, ಅವರು ಜಾತಿ ಇದೆ ಎಂಬ ಕಾರಣಕ್ಕೆ ಎಲ್ಲಾ ಕಡೆ ಹೋಗುತ್ತಿದ್ದರೆ ಸ್ಥಳೀಯರ ಸ್ಥಿತಿ ಏನು” ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಸೇರುವ ಬಗ್ಗೆ ಸ್ಪಷ್ಟನೆ

“ನಾನು ಕಾಂಗ್ರೆಸ್ ಸೇರಲಿದ್ದೇನೆ ಎಂದು ಎಲ್ಲೋ ಪತ್ರಿಕೆಯಲ್ಲಿ ವರದಿ ಮಾಡಿದ್ದಾರೆ. ಕಾಂಗ್ರೆಸ್ ನ ಬಿ ಫಾರಂ ಮಾಧುಸ್ವಾಮಿಗೆ ಸಿಗುತ್ತದೆ ಎಂದು ಉಲ್ಲೇಖಿಸಿದ್ದಾರೆ. ಬಿ ಫಾರಂ ಬದಲಾಯಿಸಿ ಕಾಂಗ್ರೆಸ್ ಪಕ್ಷದವರು ಕರೆದರೂ ಚುನಾವಣೆಯಲ್ಲಿ ಸ್ಪರ್ಧಿಸಲಾರೆ. ಬಿಜೆಪಿಯವರು ಕರೆದರೂ ಚುನಾವಣೆಗೆ ನಿಲ್ಲುವುದಿಲ್ಲ. ಯಾರೋ ನೋಡಿ ಬಂದ ಹೆಣ್ಣನ್ನು ನಾನೇಕೆ ಮದುವೆಯಾಗಲಿ” ಎಂದು ಮಾಧುಸ್ವಾಮಿ ಮಾರ್ಮಿಕವಾಗಿ ಹೇಳಿದರು.

“ನಾನು ಯಾರಿಗೂ ಕಾಂಗ್ರೆಸ್​​ಗೆ ಸೇರುತ್ತೇನೆ, ಬಂದೇ ಬರುತ್ತೇನೆ ಎಂದು ಹೇಳಿಲ್ಲ. ಮನೆಗೆ ಬಂದವರ ಬಳಿ ಸೌಜನ್ಯವಾಗಿ ಮಾತನಾಡಿದ್ದೇನೆ. ಹಾಗಂತ ಬರಲ್ಲ ಎಂದೂ ಎಲ್ಲೂ ಹೇಳಲ್ಲ. ಬಿಜೆಪಿಯಿಂದ ಅಶೋಕ್ ಬಂದಿದ್ದು ನಿಜ. ಜಯರಾಮ್​​ರನ್ನು ಕರೆದುಕೊಂಡು ಗೋಪಾಲಯ್ಯ ಅವರೆಲ್ಲ ಬಂದು ಹೋದರು. ನನಗೆ ಅಸಮಾಧಾನ ಇರುವುದು ಯಡಿಯೂರಪ್ಪನವರ ಮೇಲೆ. ಯಡಿಯೂರಪ್ಪನವರೇ ಉತ್ತರ ಕೊಡಬೇಕು ಎಂದು ಹೇಳಿ ಕಳಿಸಿರುವೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...