ಪ್ರಧಾನಿ ಕಾರ್ಯಕ್ರಮದಲ್ಲಿ ನನ್ನ ಭಾಷಣ ಕೈಬಿಡಲಾಗಿದೆ: ರಾಜಸ್ಥಾನ ಸಿಎಂ ಆರೋಪ

Date:

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜಸ್ಥಾನದ ಸಿಕಾರ್‌ ಜಿಲ್ಲೆಗೆ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು, ಮುಖ್ಯಮಂತ್ರಿಯವರ ಭಾಷಣವನ್ನು ಕೈಬಿಟ್ಟಿರುವುದಕ್ಕೆ ಅಶೋಕ್‌ ಗೆಹ್ಲೋಟ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಯವರ ಭಾಷಣವನ್ನು ಪ್ರಧಾನಿ ಕಾರ್ಯಾಲಯವು ರದ್ದುಗೊಳಿಸಿದ್ದರಿಂದ ನಾನು ಅವರನ್ನು ಟ್ವಿಟರ್‌ನಲ್ಲಿ ಮಾತ್ರ ಸ್ವಾಗತಿಸಬಹುದು ಎಂದು ಅಶೋಕ್‌ ಗೆಹ್ಲೋಟ್‌ ಪೋಸ್ಟ್ ಮಾಡಿದ್ದಾರೆ.

“ಇಂದು ನೀವು ರಾಜಸ್ಥಾನಕ್ಕೆ ಭೇಟಿ ನೀಡುತ್ತಿದ್ದೀರಿ. ನಿಮ್ಮ ಪ್ರಧಾನಮಂತ್ರಿ ಕಚೇರಿಯು ಕಾರ್ಯಕ್ರಮದಲ್ಲಿನ ನನ್ನ ಪೂರ್ವ ನಿಗದಿತ 3 ನಿಮಿಷಗಳ ಭಾಷಣವನ್ನು ತೆಗೆದುಹಾಕಿದೆ. ಆದ್ದರಿಂದ ನಾನು ನಿಮ್ಮನ್ನು ಭಾಷಣದ ಮೂಲಕ ಸ್ವಾಗತಿಸಲು ಸಾಧ್ಯವಾಗುವುದಿಲ್ಲ. ಆದ ಕಾರಣ ನಾನು ಈ ಟ್ವೀಟ್ ಮೂಲಕ ರಾಜಸ್ಥಾನಕ್ಕೆ ನಿಮ್ಮನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ” ಎಂದು ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಟ್ವೀಟ್‌ ಮೂಲಕವೇ ಕಾರ್ಯಕ್ರಮದ ನನ್ನ ಭಾಷಣದಲ್ಲಿ ಹೇಳಬೇಕಾದ ನನ್ನ ಬೇಡಿಕೆಗಳನ್ನು ನಿಮ್ಮ ಮುಂದಿಡುತ್ತಿದ್ದೇನೆ. 6 ತಿಂಗಳಲ್ಲಿ 7 ಬಾರಿ ರಾಜಸ್ಥಾನ ಭೇಟಿಯನ್ನು ಪೂರ್ಣಗೊಳಿಸಿದ್ದೀರಿ. ನಿಮ್ಮ ಭೇಟಿಯಲ್ಲಿ ನಮ್ಮ ಬೇಡಿಕೆಗಳನ್ನು ಪೂರ್ಣಗೊಳಿಸುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಮುಖ್ಯಮಂತ್ರಿ ಬರೆದಿದ್ದಾರೆ.

ಪ್ರಧಾನಿ ಕಾರ್ಯಾಲಯವು ಸ್ವಲ್ಪ ಸಮಯದ ನಂತರ ಗೆಹ್ಲೋಟ್ ಅವರ ಆರೋಪವನ್ನು ತಳ್ಳಿಹಾಕಿದೆ. “ಶಿಷ್ಟಾಚಾರದ ಪ್ರಕಾರ ನಿಮ್ಮನ್ನು ಆಹ್ವಾನಿಸಲಾಗಿದೆ ಮತ್ತು ಭಾಷಣಕ್ಕೆ ಸಮಯವನ್ನೂ ಕೂಡ ನೀಡಲಾಗಿತ್ತು. ಆದರೆ ಅದಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ನಿಮ್ಮ ಕಚೇರಿಯೇ ಹೇಳಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಹಳೆಯ ಭೇಟಿಗಳ ಸಂದರ್ಭದಲ್ಲಿ ನಿಮ್ಮನ್ನು ಪ್ರತಿ ಬಾರಿ ಆಹ್ವಾನಿಸಲಾಗುತ್ತಿತ್ತು, ನೀವು ಪ್ರತಿ ಬಾರಿಯೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೀರಿ. ಈ ಕಾರ್ಯಕ್ರಮದಲ್ಲೂ ಭಾಗವಹಿಸಲು ಅಶೋಕ್‌ ಗೆಹ್ಲೋಟ್‌ ಅವರಿಗೆ ಹೃತ್ಪೂರ್ವಕ ಸ್ವಾಗತವಿದೆ” ಎಂದು ಟ್ವೀಟ್‌ನಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಅಮೆರಿಕದಲ್ಲಿ ಊಟಕ್ಕಾಗಿ ಪರದಾಡುತ್ತಿರುವ ಭಾರತೀಯ ಮಹಿಳೆ; ಕರೆತರುವಂತೆ ತಾಯಿ ಮನವಿ

ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನಕ್ಕೆ ಇದು ಪ್ರಧಾನಿ ಮೋದಿಯವರ ಏಳನೇ ಭೇಟಿಯಾಗಿದ್ದು, ಈ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಹೊಸ ಸರ್ಕಾರ ಅಧಿಕಾರಕ್ಕೆ ಬರಲಿದೆ.

ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಅಮಾನುಷ ಮಣಿಪುರದ ವಿಡಿಯೋದ ಬಗ್ಗೆ ಪ್ರಧಾನಿ ಮಾತನಾಡುವಾಗ ರಾಜಸ್ಥಾನ ಉಲ್ಲೇಖಿಸಿದ್ದಕ್ಕಾಗಿ ಅಶೋಕ್‌ ಗೆಹ್ಲೋಟ್‌ ಪ್ರಧಾನಿ ಮೋದಿಯನ್ನು ಟೀಕಿಸಿದ್ದರು.

ಪ್ರಧಾನಿಯವರು ಈ ವರ್ಷ ಹಲವಾರು ಬಾರಿ ರಾಜಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಿಕಾರ್‌ ಜಿಲ್ಲೆಯ ಎಂಟು ವಿಧಾನಸಭಾ ಸ್ಥಾನಗಳಲ್ಲಿ ಒಬ್ಬನೇ ಒಬ್ಬ ಬಿಜೆಪಿ ಶಾಸಕನಿಲ್ಲ. ಕಾಂಗ್ರೆಸ್ ಏಳು ಶಾಸಕರನ್ನು ಹೊಂದಿದೆ ಮತ್ತು ಮತ್ತೊಬ್ಬರು ಪಕ್ಷೇತರ ಸದಸ್ಯರಾಗಿದ್ದಾರೆ. ಬಿಜೆಪಿ ತನ್ನ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದೆ.

ಸಿಕಾರ್‌ನ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೊದಲು ಪ್ರಧಾನಿ ಮೋದಿ ಸರ್ಕಾರಿ ಸಮಾರಂಭದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...