ಮೈಸೂರು | ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ

Date:

ಆರ್​ಟಿಐ ಕಾರ್ಯಕರ್ತ ಗಂಗರಾಜು ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ಭೂ ಅಕ್ರಮದ
ಗಂಭೀರ ಆರೋಪ ಮಾಡಿದ್ದಾರೆ.

“ಮೈಸೂರು ಮುಡಾ ಪ್ರಕರಣ ತನಿಖಾ ಹಂತದಲ್ಲಿದ್ದು, ಇ.ಡಿ ದಾಳಿ ನಡೆಸಿ ಕಡತಗಳನ್ನು ವಶಕ್ಕೆ ಪಡೆದು ಮಾಹಿತಿ ಕಲೆ ಹಾಕುತ್ತಿರುವ ಸಮಯದಲ್ಲಿ ಮೂಡಾಗೆ ಬಿಟ್ಟುಕೊಟ್ಟ ರಸ್ತೆ ಜಾಗ ಹಾಗೂ ಪೈಪ್‌ಲೈನ್ ಜಾಗವನ್ನು ತಮ್ಮ ಹೆಸರಿಗೆ ನೋಂದಣಿ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮುಡಾಗೆ ಸೇರಿದೆ ಎನ್ನಲಾದ 7 ಗುಂಟೆ ಜಾಗವನ್ನು 2023ರ ಸೆಪ್ಟೆಂಬರ್‌ 29ರಂದು ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದು, ಮೈಸೂರು ನಗರದ ಕೆಆರ್​​ಎಸ್ ರಸ್ತೆಯಲ್ಲಿನ ಸರ್ವೇ ನಂಬರ್ 454ರ ಜಾಗ ನೋಂದಾಯಿಸಿಕೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದರಿ ಜಾಗದಲ್ಲಿ ಗಣೇಶ್ ದೀಕ್ಷಿತ್ ಎಂಬುವವರಿಗೆ ಸೇರಿದ 4 ಎಕರೆ 11 ಗುಂಟೆ ಜಾಗವಿದ್ದು, ಅದರಲ್ಲಿ 20 ಗುಂಟೆ ಜಾಗವನ್ನು ಸಿಎಂ ಪತ್ನಿ ಪಾರ್ವತಿಯವರು 20 ಗುಂಟೆ ಜಾಗಕ್ಕೆ 1.85 ಕೋಟಿ ರೂಪಾಯಿ ಕೊಟ್ಟು ಖರೀದಿಸಿದ್ದರು. 20 ಗುಂಟೆ ಅಂದರೆ 21,771,99 ಚದರಡಿ ಜಾಗವನ್ನು ನೋಂದಣಿ ಮಾಡಿಸಿಕೊಂಡಿದ್ದರು. ಅದರಲ್ಲಿ 8998 ಚದರಡಿ ಜಾಗವನ್ನು ಗಣೇಶ್ ದೀಕ್ಷಿತ್, ರಸ್ತೆ ಮತ್ತು ಪೈಪ್‌ಲೈನ್‌ಗಾಗಿ ಮುಡಾಗೆ ಬಿಟ್ಟುಕೊಟ್ಟಿದ್ದರು. ಆದರೆ ಮುಡಾಗೆ ಬಿಟ್ಟಿದ್ದ ರಸ್ತೆ ಮತ್ತು ಪೈಪ್‌ಲೈನ್​​ ಜಾಗವನ್ನೂ ಕೂಡ ತಮ್ಮ ಹೆಸರಿಗೆ ಸೇರಿಸಿಕೊಂಡು ಪಾರ್ವತಿ ನೋಂದಣಿ ಮಾಡಿಸಿಕೊಂಡಿದ್ದಾರೆ” ಎಂದು ಆರ್​ಟಿಐ ಕಾರ್ಯಕರ್ತ ಗಂಗರಾಜು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಅ.20ರಂದು ದೇಶದ ಮೊದಲ ರೈತರ ಶಾಲೆಗೆ ಶಂಕುಸ್ಥಾಪನೆ

ಆರ್​ಟಿಐ ಕಾರ್ಯಕರ್ತ ಗಂಗರಾಜು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಆರ್‌ಟಿಐ ಅಡಿ ದಾಖಲೆ ಕೋರಿ ಮಾಹಿತಿ ಸಲ್ಲಿಸಿದ್ದೆ. ಇದರ ಮಾಹಿತಿ ಪ್ರಕಾರ ಮುಡಾದಲ್ಲಿ ಪಾರ್ವತಿಯವರು ದಿನಾಂಕ 2024ರ ಆಗಸ್ಟ್‌ 30 ಹಾಗೂ 31ರಂದು ಮತ್ತೆ ರಿಜಿಸ್ಟರ್ ತಿದ್ದುಪಡಿ ಮಾಡಿಸಿದ್ದಾರೆ” ಎಂದು ಹೇಳಿದ್ದಾರೆ.

“ಮುಡಾದ ಜಾಗವಾದ ರಸ್ತೆ ಹಾಗೂ ಪೈಪ್‌ಲೈನ್ ಜಾಗ ಹೊರತುಪಡಿಸಿ ಇನ್ನುಳಿದ 12,782 ಚದರಡಿ ಜಾಗಕ್ಕೆ ಮರು ನೋಂದಣಿ ಮಾಡಿಸಿಕೊಂಡಿದ್ದಾರೆ” ಎಂದು ಗಂಗರಾಜು ಹೇಳಿಕೆ ನೀಡಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...