ಮೈಸೂರು ಚಲೋಗೆ ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಇದೆ: ಬಿ ವೈ ವಿಜಯೇಂದ್ರ

Date:

ಮೈಸೂರು ಚಲೋ ಪಾದಯಾತ್ರೆಯು ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಶಕ್ತಿ ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಕೆಂಗೇರಿಯಲ್ಲಿ ಶನಿವಾರ ಬಿಜೆಪಿ-ಜೆಡಿಎಸ್ ಸಮನ್ವಯದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದ ಅವರು, “ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ವಚನಭ್ರಷ್ಟವಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ” ಎಂದು ಆರೋಪಿಸಿದರು.

“ಅಹಿಂದ ವರ್ಗದವರಿಗೆ ಸಾಮಾಜಿಕ ನ್ಯಾಯ ಕೊಡುವುದಾಗಿ ಹೇಳಿದ್ದ ಸಿದ್ದರಾಮಯ್ಯನವರ ಸರ್ಕಾರ ಪರಿಶಿಷ್ಟ ಸಮುದಾಯದ ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು ಲೂಟಿ ಮಾಡಿದೆ. ಮೈಸೂರಿನ ಮುಡಾದ ಅವ್ಯವಹಾರದಡಿ ಬಡವರಿಗೆ ನಿವೇಶನಗಳನ್ನು ವಂಚಿಸಿದ್ದಾರೆ. 5 ಸಾವಿರ ಕೋಟಿಯ ಹಗರಣ ಅಲ್ಲಿ ನಡೆದಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮಾತನಾಡಿ,”ಭ್ರಷ್ಟಾಚಾರದಲ್ಲಿ ಸಿಲುಕಿದ ಸಿದ್ದರಾಮಯ್ಯನವರು ಗೌರವಯುತವಾಗಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಿರ್ಗಮಿಸಲಿ. ಈ ಪಾದಯಾತ್ರೆ ಮಧ್ಯದಲ್ಲೇ ಸಿದ್ದರಾಮಯ್ಯನವರು ರಾಜೀನಾಮೆ ಕೊಡಲಿದ್ದಾರೆ” ಎಂದರು.

“ಕುಂಟುನೆಪ ಬೇಡ. ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆವರೆಗೂ ಹೋರಾಟ ಮುಂದುವರೆಯುತ್ತದೆ” ಎಂದು ತಿಳಿಸಿದರು.

ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್‌ದಾಸ್ ಅಗರವಾಲ್ ಮಾತನಾಡಿ, “ರಾಹುಲ್ ಗಾಂಧಿಯವರ ಸೂಚನೆಯಂತೆ ಈ ಹಗರಣ ನಡೆದಿದೆ. ಹಣವನ್ನು ಹೈಕಮಾಂಡಿಗೆ ಕಳುಹಿಸಲಾಗಿದೆ. ಚುನಾವಣಾ ಭ್ರಷ್ಟಾಚಾರಕ್ಕೆ ಹಣ ಬಳಸಿದ್ದಾರೆ. ಡಿ.ಕೆ.ಶಿವಕುಮಾರ್ ಕೂಡ ಭ್ರಷ್ಟರು; ಅವರ ಅಕ್ರಮ ಹಣ ಈ ಹಿಂದೆ ಸಿಕ್ಕಿತ್ತು” ಎಂದು ಆರೋಪಿಸಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, “ಕಾಂಗ್ರೆಸ್ಸಿನ ಡಿಎನ್‌ಎಯಲ್ಲೇ ಭ್ರಷ್ಟಾಚಾರ ಹಾಸುಹೊಕ್ಕಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ದೇಶದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿತ್ತು. ಸಿದ್ದರಾಮಯ್ಯನವರೇ ಈ ಹಗರಣ ನಿಮ್ಮ ಕೈಯಿಂದಲೇ ನಡೆದಿದೆ. ಭ್ರಷ್ಟತನ ಮುಚ್ಚಿಹಾಕಲು ರಾಜ್ಯಪಾಲರನ್ನು ಬೆದರಿಸುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಕೂಡ ಇದರಲ್ಲಿ ಪಾಲುದಾರಿಕೆ ಪಡೆದಿದೆ” ಎಂದು ನೇರವಾಗಿ ದೂರಿದರು.

ಬಿಜೆಪಿ ಪಾದಯಾತ್ರೆ 2

ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, “ನಾವು ನಿಲುವಳಿ ಸೂಚನೆ ಮೂಲಕ ಮುಡಾ ಹಗರಣದ ವಿವರ ಕೇಳಿದ್ದೆವು. ಮುಡಾದಲ್ಲಿ 3ರಿಂದ 4 ಸಾವಿರ ಕೋಟಿಯ ಹಗರಣ ಆಗಿದೆ ಎಂದು ಅವರ ಪಕ್ಷದವರೇ ಹೇಳಿದ್ದಾರೆ. ವಿಪಕ್ಷದ ಹೋರಾಟದ ಹಕ್ಕನ್ನು ಮುಂದಿಟ್ಟು ನಾವು ಪಾದಯಾತ್ರೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

“ದಲಿತ ವ್ಯಕ್ತಿಯ ಜಮೀನು ನುಂಗಿದ್ದಾರೆ. ಸಿದ್ದರಾಮಯ್ಯನವರು ತಪ್ಪು ಮಾಡದೆ ಇದ್ದರೆ ಅವರ್ಯಾಕೆ ರಾಜ್ಯಪಾಲರನ್ನು ಪ್ರಶ್ನಿಸುತ್ತಿದ್ದಾರೆ. ಒಂದು ನೋಟಿಸ್‌ಗೇ ಕಾಂಗ್ರೆಸ್ಸಿಗರು ಗಡಗಡ ನಡುಗುತ್ತಿದ್ದಾರೆ. ಕಾಂಗ್ರೆಸ್ ಇವತ್ತು ಒಡೆದ ಮನೆಯಾಗಿದೆ” ಎಂದರು.

ಕೇಂದ್ರ ಸಚಿವರಾದ ವಿ.ಸೋಮಣ್ಣ, ಕು.ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ, ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್‌ನ ನಾಯಕ ಸುರೇಶ್, ಮಾಜಿ ಸಚಿವರು, ಬಿಜೆಪಿ- ಜೆಡಿಎಸ್ ಸಂಸದರು, ಎರಡೂ ಪಕ್ಷಗಳ ಶಾಸಕರು, ಮುಖಂಡರು, ಮಾಜಿ ಸಂಸದರು, ಮಾಜಿ ಶಾಸಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...