ಸ್ವಂತ ಕ್ಷೇತ್ರ ಅಭಿವೃದ್ಧಿ ಪಡಿಸಲಾಗದ ಎನ್‌. ಎ. ಹ್ಯಾರಿಸ್‌ ಬೆಂಗಳೂರನ್ನು ಅಭಿವೃದ್ಧಿ ಪಡಿಸುತ್ತಾರೆಯೇ? ಎಎಪಿ ವಿರೋಧ

Date:

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಸ್ಥಾನಕ್ಕೆ ಶಾಂತಿನಗರ ಶಾಸಕ ಎನ್‌.ಎ. ಹ್ಯಾರಿಸ್‌ ಅವರನ್ನು ನೇಮಕ ಮಾಡಿದ್ದಕ್ಕೆ ಆಮ್‌ ಆದ್ಮಿ ಪಾರ್ಟಿ ವಿರೋಧ ವ್ಯಕ್ತಪಡಿಸಿದೆ.

“ಹಲವು ವರ್ಷಗಳಿಂದ ಪ್ರತಿನಿಧಿಸುತ್ತ ಬಂದಿರುವ ಸ್ವಂತ ಕ್ಷೇತ್ರ ಶಾಂತಿ ನಗರವನ್ನೇ ಅಭಿವೃದ್ಧಿ ಪಡಿಸಲಾಗದ ಎನ್‌.ಎ. ಹ್ಯಾರಿಸ್‌ ಅವರ ಕೈಗೆ ಇಡೀ ಬೆಂಗಳೂರು ಅಭಿವೃದ್ಧಿ ಪಡಿಸುವ ಜವಾಬ್ದಾರಿಯನ್ನು ವಹಿಸಿರುವುದು ಪ್ರಶ್ನಾರ್ಹವಾಗಿದೆ. ಬಿಡಿಎ ಅಧ್ಯಕ್ಷರಾಗಲು ಹ್ಯಾರಿಸ್‌ ಅವರಿಗಿರುವ ಅರ್ಹತೆಯೇನು?” ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್‌ ದಾಸರಿ ಪ್ರಶ್ನಿಸಿದ್ದಾರೆ.

ಬಿಡಿಎ ಅಧ್ಯಕ್ಷರಾಗಿ ಹ್ಯಾರಿಸ್‌ ನೇಮಕ ವಿಚಾರವಾಗಿ ನಗರದಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಮೋಹನ್‌ ದಾಸರಿ, “ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಜನಪ್ರತಿನಿಧಿಗಳಿಗೆ ಮಣೆ ಹಾಕುವ ಪದ್ಧತಿ ಬಿಟ್ಟು, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‍‌ ಸಿಂಗ್‌ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದಾಗ ಬೆಂಗಳೂರು ಅಭಿವೃದ್ಧಿಯತ್ತ ಸಾಗಬಹುದು ಎಂಬ ಭರವಸೆ ವ್ಯಕ್ತವಾಗಿತ್ತು. ಆದರೆ 7 ತಿಂಗಳ ಅವಧಿಯಲ್ಲೇ ಅವರಿಂದ ಅಧಿಕಾರವನ್ನು ಕಸಿದು ಪುನಃ ರಾಜಕಾರಣಿಗಳ ಹೆಗಲಿಗೆ ಏರಿಸಲಾಗುತ್ತಿದೆ. ಇಂತಹ ಬದಲಾವಣೆಗೆ ಎದುರಾದ ಒತ್ತಡವೇನು ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಹಿರಂಗಪಡಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿನ ಈಜಿಪುರ ಸ್ಲಂ ಪ್ರದೇಶವನ್ನು ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಮಾಲಿಕತ್ವದ ಮೆಹರಿಕ್ ಹೋಲ್ಡಿಂಗ್ಸ್ ಸಂಸ್ಥೆಯ ಜೊತೆಗೂಡಿ ಮಾಡಿಕೊಂಡ ಒಪ್ಪಂದ ಸಂಪೂರ್ಣ ಹಳ್ಳ ಹಿಡಿದಿದೆ. ಅಭಿವೃದ್ಧಿಪಡಿಸಿ ನೂತನ ಮನೆಗಳನ್ನು ಕಟ್ಟಿಕೊಡುತ್ತೇವೆಂಬ ನೆಪವಡ್ಡಿ ತೆರವುಗೊಳಿಸಿ ಹತ್ತು ವರ್ಷಗಳಿಗೂ ಹೆಚ್ಚು ಕಾಲ ಆಗಿದೆ. ಇದುವರೆಗೂ ಅಲ್ಲಿನ ಸಾವಿರಾರು ಕುಟುಂಬಗಳು ಬೀದಿಬದಿಯಲ್ಲಿಯೇ ವಾಸಿಸುತ್ತಿವೆ. ಇಂತಹ ಕರಾಳ ಮುಖವನ್ನು ಹೊತ್ತಿರುವ ಶಾಸಕ ಹ್ಯಾರಿಸ್, ಹೇಗೆ ಬೆಂಗಳೂರಿನ ಅಭಿವೃದ್ಧಿ  ಪಡಿಸುತ್ತಾರೆ ಎಂಬುದೇ ಯಕ್ಷಪ್ರಶ್ನೆಯಾಗಿದೆ” ಎಂದರು.

“ನಗರದ ಅತಿದೊಡ್ಡ ಕೊಳಚೆ ಪ್ರದೇಶವೆಂದರೆ ಅದು ಶಾಂತಿನಗರ ವಿಧಾನಸಭಾ ಕ್ಷೇತ್ರವಾಗಿದೆ. ಮಿತಿಯೇ ಇಲ್ಲದ ರಾಜಕಾಲುವೆ ಒತ್ತುವರಿ, ಲೆಕ್ಕವಿಲ್ಲದಷ್ಟು ಹೊಂಡ-ಗುಂಡಿಗಳು, ಮ್ಯಾನ್‌ಹೋಲ್‌ ಹಾಗೂ ಚರಂಡಿಗಳ ತ್ಯಾಜ್ಯ ನೀರೆಲ್ಲ ಮೇಲೆ ಬಂದು ಗಬ್ಬೆದ್ದ ರಸ್ತೆಗಳೇ ತುಂಬಿವೆ. ದಿನಕ್ಕೊಂದು ಬಾರ್‌, ಪಬ್‌, ಹುಕ್ಕಾಬಾರ್‌ಗಳು ಹುಟ್ಟಿಕೊಳ್ಳುವ ಈ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಅವ್ಯವಸ್ಥೆಗಳ ಕೂಪವಾಗಿವೆ. ಲೆಕ್ಕವಿಲ್ಲದಷ್ಟು ಅನಧಿಕೃತ ಕಟ್ಟಡಗಳು, ಪಬ್‌, ಹುಕ್ಕಾಬಾರ್‌ಗಳು ತಾಂಡವವಾಡುತ್ತಿವೆ. ಡ್ರಗ್‌ ಮಾಫಿಯಾಗೆ ಕಡಿವಾಣವೇ ಇಲ್ಲವಾಗಿದೆ. ಒಂದೇ ಒಂದು ಸ್ಲಮ್‌ ಅಭಿವೃದ್ಧಿ ಪಡಿಸಿರುವ ಉದಾಹರಣೆ ಇದ್ದರೆ ಹೇಳಿ?” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು-ವಿಜಯಪುರ ಮಾರ್ಗದಲ್ಲಿ ‘ಕಲ್ಯಾಣ ರಥ’ ಐಷಾರಾಮಿ ಸ್ಲೀಪರ್ ಬಸ್ ಸೇವೆ ಆರಂಭ

“ಅನಧಿಕೃತ ಕಟ್ಟಡ, ಬಾರ್‌, ಪಬ್‌, ಹುಕ್ಕಾಬಾರ್‌ಗಳಿಗೆ ಹ್ಯಾರಿಸ್‌ ಕುಟುಂಬದವರೇ ಪಾಲುದಾರರು ಎಂಬ ಆರೋಪಗಳಿವೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ತಪ್ಪಾದ ಆಸ್ತಿ ವಿವರಗಳನ್ನು ಸಲ್ಲಿಸಿದ್ದಾರೆ ಎಂಬ ಆರೋಪವೂ ಇದೆ. ಅವರ ಮಗ ಮೊಹಮ್ಮದ್‌ ಹ್ಯಾರಿಸ್‌ ನಲಪಾಡ್‌ ನಡೆಸಿರುವ ರೌಡಿಸಂ, ಪುಂಡಾಟಗಳಿಗೆ ಲೆಕ್ಕವಿದೆಯೇ? ಸ್ವಂತ ಮಗನನ್ನು, ಸ್ವಂತ ಕ್ಷೇತ್ರವನ್ನು ಒಳ್ಳೆಯ ರೀತಿಯಲ್ಲಿ ಬೆಳೆಸಲಾಗದ ಹ್ಯಾರಿಸ್‌ ಅವರಿಂದ ಬೆಂಗಳೂರು ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವೇ?” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...