ವಿಜಯಪುರ | ಮೂಲ ಸೌಕರ್ಯಗಳಿಂದ ವಂಚಿತ ನಾಗಠಾಣ ಮೀಸಲು ಕ್ಷೇತ್ರ: ರಾಕೇಶ್ ಕುಮಟಗಿ

Date:

  • ಉದ್ಯೋಗ ಇಲ್ಲದ ಕಾರಣ ದೂರದ ರಾಜ್ಯಗಳಿಗೆ ಹೋಗಿ ಕೂಲಿ ಮಾಡುವ ಸನ್ನಿವೇಶ
  • ಪ್ರಸ್ತುತ ಚುನಾವಣೆಯಲ್ಲಿ ಸೂಕ್ತ ವಿದ್ಯಾವಂತ ಅಭ್ಯರ್ಥಿಯನ್ನು ಆರಿಸುವಂತೆ ಕರೆ

ಕರ್ನಾಟಕದಲ್ಲಿಯೇ ಅತೀ ದೊಡ್ಡ ಪ್ರಮಾಣದ ಮತದಾರರನ್ನು ಹೊಂದಿರುವ ನಾಗಠಾಣ ಮೀಸಲು ಕ್ಷೇತ್ರವು ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಇದುವರೆಗೂ ಈ ಕ್ಷೇತ್ರಕ್ಕೆ ಆರಿಸಿ ಬಂದಿರುವ ಯಾವೊಬ್ಬ ಶಾಸಕರು ಕ್ಷೇತ್ರದ ಅಭಿವೃದ್ಧಿ ಮಾಡಿಲ್ಲ ಎಂದು ಕರ್ನಾಟಕ ರಣಧೀರ ಪಡೆಯ ವಿಜಯಪುರ ತಾಲೂಕು ಅಧ್ಯಕ್ಷ ರಾಕೇಶ ಕುಮಟಗಿ ಆರೋಪಿಸಿದ್ದಾರೆ.

ಕ್ಷೇತ್ರದ ಸಮಸ್ಯೆ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ನಾಗಠಾಣ ಮೀಸಲು ಕ್ಷೇತ್ರದಲ್ಲಿ ನಡೆದಿರುವ ಪ್ರತಿ ಚುನಾವಣೆಯೂ ಕೇವಲ ಪ್ರತಿಷ್ಠೆಯ ಮತಕ್ಷೇತ್ರವಾಗಿದೆಯೇ ಹೊರತು ಮಹತ್ತರವಾದ ಕ್ಷೇತ್ರವಾಗಿ ರೂಪುಗೊಳ್ಳುವಂತೆ ಇಲ್ಲಿಯ ರಾಜಕಾರಣಿಗಳು ಕೆಲಸ ಮಾಡಿಲ್ಲ. ಈ ಬಾರಿಯಾದರೂ ನಾಗಠಾಣ ಮತಕ್ಷೇತ್ರಕ್ಕೆ ಒಬ್ಬ ಪ್ರಜ್ಞಾವಂತ ಜನಪ್ರತಿನಿಧಿಯನ್ನು ಆರಿಸುವ ಜವಾಬ್ದಾರಿ ಮತದಾರರ ಮೇಲಿದೆ” ಎಂದು ಹೇಳಿದ್ದಾರೆ.

“ನಾಗಠಾಣ ಮತಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ಕೃಷಿಗೆ ಒತ್ತು ನೀಡಬೇಕು. ಮುಖ್ಯವಾಗಿ ಶೈಕ್ಷಣಿಕ ಕ್ಷೇತ್ರಕ್ಕೆ ಒತ್ತು ನೀಡಬೇಕು. ನಾಗಠಾಣ ಮತಕ್ಷೇತ್ರದಲ್ಲಿ ವಿದ್ಯಾವಂತ ನಿರುದ್ಯೋಗ ಯುವಕರು ಬಹಳಷ್ಟಿದ್ದಾರೆ. ಅವರಿಗೆ ಉದ್ಯೋಗ ಒದಗಿಸುವಂತಾಗಬೇಕು. ಸದ್ಯ ಕ್ಷೇತ್ರದಲ್ಲಿ ನಿರುದ್ಯೋಗ ಯುವಕರು ಬಹಳಷ್ಟಿದ್ದು ಇವರಿಗೆ ಉದ್ಯೋಗ ಇಲ್ಲದ ಕಾರಣ ದೂರದ ರಾಜ್ಯಗಳಿಗೆ ಹೋಗಿ ಕೂಲಿ ಮಾಡಿ ಜೀವನ ನಡೆಸುವ ಸನ್ನಿವೇಶ ಎದುರಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಲ್ಲಿಯವರೆಗೆ ಈ ನಾಗಠಾಣ ಮತಕ್ಷೇತ್ರಕ್ಕೆ ಸ್ಪರ್ಧೆ ಬಯಸಿದ ಜನಪ್ರತಿನಿಧಿಗಳು ಪೊಳ್ಳು ಭರವಸೆಗಳನ್ನು ನೀಡುತ್ತಾ ಬಂದಿದ್ದಾರೆಯೇ ಹೊರತು, ಮತಕ್ಷೇತ್ರದ ಜನರ ಅಭಿವೃದ್ಧಿಗೆ ಕಡೆಗೆ ಕಿಂಚಿತ್ತು ಜವಾಬ್ದಾರಿಯುತ ಕೆಲಸವನ್ನು ಮಾಡಿಲ್ಲ” ಎಂದು ಕಿಡಿ ಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ? : ವಿಜಯಪುರ | ಪೊಲೀಸ್‌ ಪೇದೆ ಸಮಯ ಪ್ರಜ್ಞೆ; ಮೂವರು ಪ್ರಾಣಾಪಾಯದಿಂದ ಪಾರು

“ಈ ಬಾರಿಯ ಚುನಾವಣೆಯಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಹಾಗೂ ನಿರುದ್ಯೋಗ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡದೇ ಯುವಕರ ಪರವಾಗಿ ಕೆಲಸ ಮಾಡುವ ವ್ಯಕ್ತಿಯನ್ನು ಎಲ್ಲ ನಾಗಠಾಣ ಮತಕ್ಷೇತ್ರದ ಮತದಾರರು ಆರಿಸಿ ಕ್ಷೇತ್ರವು ಅಭಿವೃದ್ಧಿಗೊಳ್ಳುವಲ್ಲಿ ತಮ್ಮ ಪಾತ್ರವನ್ನು ನಿಭಾಯಿಸಬೇಕು” ಎಂದು ಸಲಹೆ ನೀಡಿದ್ದಾರೆ.

“ಮತದಾನದ ವೇಳೆಯಲ್ಲಿ ಹಣ, ಬಟ್ಟೆ, ಸಾರಾಯಿಗಳಿಗೆ ಬಲಿಯಾಗದೇ ತಮ್ಮ ಮತವನ್ನು ನಿಷ್ಠಾವಂತ ಹಾಗೂ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವ ಎಲ್ಲ ಜನಾಂಗದ ಹಾಗೂ ಜನರ ಪರವಾಗಿ ಹೋರಾಡುವ ಅವರ ಕೆಲಸಗಳನ್ನು ಮಾಡುವ ವ್ಯಕ್ತಿಯನ್ನು ಈ ಬಾರಿ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುವದರ ಮೂಲಕ ತಮ್ಮ ಮತದಾನದ ಹಕ್ಕು ಒಳ್ಳೆಯ ರೀತಿಯಿಂದ ನಿರ್ವಹಿಸಬೇಕು” ಎಂದು ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...