ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಸಚಿವ ಝಮೀರ್ ಅಹಮದ್ ಖಾನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಜಯನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ಧಿಗಾರರ ಜತೆ ಮಾತನಾಡಿದ ಅವರು, ವಿಜಯನಗರದ ಜತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಝಮೀರ್ ಅಹಮದ್ ಖಾನ್ ಅವರಿಗೆ ನೀಡಲಾಗುವುದು ಎಂದು ಹೇಳಿದರು.
ಇದನ್ನು ಓದಿದ್ದೀರಾ? ಮಂಡ್ಯದಲ್ಲಿ ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನ: ಶಿವರಾಜ್ ತಂಗಡಗಿ
ಈ ಕುರಿತು ಅಧಿಕೃತ ಆದೇಶ ನಾಳೆ ಹೊರಡಿಸಲಾಗುವುದು. ತಕ್ಷಣದಿಂದಲೇ ಹೊಣೆಗಾರಿಕೆ ತೆಗೆದುಕೊಳ್ಳುವಂತೆ ಝಮೀರ್ ಅಹಮದ್ ಖಾನ್ ಅವರಿಗೂ ನಿರ್ದೇಶನ ನೀಡಿದರು. ನಾಗೇಂದ್ರ ರಾಜೀನಾಮೆಯಿಂದ ಬಳ್ಳಾರಿ ಜಿಲ್ಲಾ ಉಸ್ತುವಾರಿ ತೆರವಾಗಿತ್ತು.





