ಬೆಳಗಾವಿ ಮಾಹಿತಿ ಆಯೋಗದ ಆಯುಕ್ತರ ಹುದ್ದೆ 2 ವರ್ಷದಿಂದ ಖಾಲಿ: ತಕ್ಷಣ ನೇಮಕಕ್ಕೆ ಆಗ್ರಹ

Date:

ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದಲ್ಲಿ ಎರಡು ವರ್ಷಕ್ಕೂ ಹೆಚ್ಚು ಕಾಲದಿಂದ ಖಾಲಿ ಇರುವ ಮಾಹಿತಿ ಆಯುಕ್ತರ ಹುದ್ದೆಗೆ ಆಯುಕ್ತರನ್ನು ತಕ್ಷಣ ಭರ್ತಿ ಮಾಡಬೇಕು ಮತ್ತು ಸ್ಥಗಿತಗೊಂಡಿರುವ ಪೀಠದ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ.

ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿರುವ ನೈಜ ಹೋರಾಟಗಾರರ ವೇದಿಕೆಯು, ‘2005ರಲ್ಲಿ ಭಾರತ ಸರ್ಕಾರದ ಆಡಳಿತ ಚುಕ್ಕಾಣಿಯನ್ನು ಹಿಡಿದಿದ್ದ ಯುಪಿಎ ಒಕ್ಕೂಟದ ಕಾಂಗ್ರೆಸ್ ಪಕ್ಷದ ಅಂದಿನ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ರವರು ದೇಶದಲ್ಲಿ ಪಾರದರ್ಶಕವಾದ ಆಡಳಿತ ನಡೆಸಲು ಬದ್ಧರಾಗಿ ಮಾಹಿತಿ ಹಕ್ಕು ಅಧಿನಿಯಮ 2005 ಜಾರಿಗೊಳಿಸಿ ಒಂದು ಇತಿಹಾಸವನ್ನು ಸೃಷ್ಟಿ ಮಾಡಿದ್ದರು. ಈ ನಿಟ್ಟಿನಲ್ಲಿ ದೇಶದಾದ್ಯಂತ ಮಾಹಿತಿ ಆಯೋಗವನ್ನು ರಚಿಸಿ ಮಾಹಿತಿ ಅಧಿನಿಯಮ 2005ರ ಪ್ರಕಾರ ಆಡಳಿತದ ಎಲ್ಲಾ ಮಾಹಿತಿಯು ನಾಗರಿಕರಿಗೆ ದೊರಕುವಂತೆ ಮಾಡಿತು’ ಎಂದು ಉಲ್ಲೇಖಿಸಿದ್ದಾರೆ.

Suvarna vidhan soudha 1

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ಕರ್ನಾಟಕ ಸರ್ಕಾರವು ಬೆಂಗಳೂರಿನಿಂದ ಅನತಿ ದೂರದಲ್ಲಿರುವ ಬೆಳಗಾವಿ ಜಿಲ್ಲೆ ಹಾಗೂ ಮುಂಬೈ ಕರ್ನಾಟಕ ವ್ಯಾಪ್ತಿಯಲ್ಲಿರುವ ಏಳು ಜಿಲ್ಲೆಗಳ ನಾಗರಿಕರಿಗೆ ಸುಲಭವಾಗಿ ಮಾಹಿತಿ ದೊರಕುವಂತೆ ಅಲ್ಲಿ ಮಾಹಿತಿ ಆಯೋಗದ ಪೀಠವನ್ನು ರಚನೆ ಮಾಡಿ ಆಯುಕ್ತರನ್ನು ನೇಮಕ ಮಾಡಿತ್ತು. ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾಹಿತಿ ಆಯುಕ್ತರು ರಾಜೀನಾಮೆ ನೀಡಿದ ಕಾರಣ ಖಾಲಿಯಾದ ಸದರಿ ಹುದ್ದೆಯು ಸುಮಾರು ಎರಡು-ಮೂರು ವರ್ಷಗಳಿಂದ ಭರ್ತಿ ಮಾಡದೆ, ಮಾಹಿತಿ ಆಯುಕ್ತರ ನೇಮಕಾತಿ ಮಾಡದೆ ಸರ್ಕಾರವು ತನ್ನ ಜವಾಬ್ದಾರಿಯಿಂದ ಹಿಂದೆ ಸರಿದಿರುವುದು ದುರದೃಷ್ಟಕರ ಸಂಗತಿ. ಬೆಳಗಾವಿ ಜಿಲ್ಲೆ ಸೇರಿದಂತೆ ಸುಮಾರು ಏಳು ಜಿಲ್ಲೆಗಳ ನಾಗರಿಕರು ಸಲ್ಲಿಸಿದ ಮೇಲ್ಮನವಿ ಸಂಖ್ಯೆ ಹದಿನೈದು ಸಾವಿರ ಗಡಿ ದಾಟಿ ಇತ್ಯರ್ಥಕ್ಕಾಗಿ ಕಾದು ಕುಳಿತಿದೆ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಬರೆದ ಮನವಿಯಲ್ಲಿ ನೈಜ ಹೋರಾಟಗಾರರ ವೇದಿಕೆ ಮಾಹಿತಿ ನೀಡಿದೆ.

WhatsApp Image 2023 11 08 at 12.58.12 PM

ನೈಜ ಹೋರಾಟಗಾರರ ವೇದಿಕೆ

ಆದುದರಿಂದ, ಮಾಹಿತಿ ಆಯೋಗದ ಬೆಳಗಾವಿ ಪೀಠಕ್ಕೆ ತಕ್ಷಣ ಆಯುಕ್ತರನ್ನು ನೇಮಿಸಿ ಮಾಹಿತಿ ಆಯೋಗದ ಪೀಠವು ಪುನರಾರಂಭಗೊಳಿಸಿ ಇತ್ಯರ್ಥಕ್ಕೆ ಕಾಯುತ್ತಿರುವ 15 ಸಾವಿರಕ್ಕೂ ಹೆಚ್ಚು ಮೇಲ್ಮನವಿಗಳ ಇತ್ಯರ್ಥಕ್ಕೆ ಸರ್ಕಾರವು ಮುಂದಾಗಬೇಕು. ಸೂಕ್ತ ಕಾನೂನು ಕ್ರಮಗಳ ಪ್ರಕ್ರಿಯೆಗೆ ಚಾಲನೆ ನೀಡಿ, ನನೆಗುದಿಗೆ ಬಿದ್ದಿರುವ ಬೆಳಗಾವಿ ಮಾಹಿತಿ ಆಯೋಗದ ಪೀಠಕ್ಕೆ ಆಯುಕ್ತರನ್ನು ನೇಮಿಸಿ, ಮರು ಚಾಲನೆ ನೀಡಬೇಕೆಂದು ನೈಜ ಹೋರಾಟಗಾರರ ವೇದಿಕೆ ಸರ್ಕಾರವನ್ನು ಒತ್ತಾಯಿಸಿದೆ.

ನೈಜ ಹೋರಾಟಗಾರರ ವೇದಿಕೆಯ ಪರವಾಗಿ ಹೆಚ್ ಎಂ. ವೆಂಕಟೇಶ್, ಹಂದ್ರಾಳ್ ನಾಗಭೂಷಣ್, ಲೋಕೇಶ್ ಬಿ ಎಸ್, ಜಗದೀಶ್ ಟಿ, ಕುಣಿಗಲ್ ನರಸಿಂಹಮೂರ್ತಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...