ನರೇಗಾ ಯೋಜನೆ | 150 ಮಾನವ ದಿನಗಳಿಗೆ ಏರಿಕೆಗೆ ಸ್ಪಂದಿಸದ ಕೇಂದ್ರ ಸರ್ಕಾರ: ಸಚಿವ ಪ್ರಿಯಾಂಕ್‌ ಖರ್ಗೆ

Date:

ಗ್ರಾಮೀಣ ಜನರ ಜೀವನವನ್ನು ನಿರ್ಮಾಣ ಮಾಡುತ್ತಿರುವ ಉದ್ಯೋಗ ಖಾತ್ರಿ ಯೋಜನೆ‌ ನರೇಗಾ ಕಾರ್ಯಕ್ರಮದಲ್ಲಿ 100 ಮಾನವ ದಿನಗಳನ್ನು 150 ಮಾನವ ದಿನಗಳಿಗೆ ಏರಿಸಲು ಎಷ್ಟೇ ಮನವಿ ಮಾಡಿದರೂ ಕೇಂದ್ರ ಸರ್ಕಾರದಿಂದ ಸ್ಪಂದನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಬೇಸರ ವ್ಯಕ್ತಪಡಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಬೆಂಗಳೂರಿನಲ್ಲಿ ಬುಧವಾರ ಏರ್ಪಡಿಸಿದ್ದ ನರೇಗಾ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ, ಯೋಜನೆಯನ್ನು ಅತ್ಯುತ್ತಮವಾಗಿ ಅನುಷ್ಠಾನ ಮಾಡಿದ ಮೂರು ಹಂತದ ಪಂಚಾಯತಿಗಳು ಹಾಗೂ ಅನುಷ್ಠಾನ ಇಲಾಖೆಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದರು.

“ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ದೂರದೃಷ್ಟಿ ಹಾಗೂ ಸಂಕಲ್ಪವನ್ನಿರಿಸಿಕೊಂಡು 2005ರಲ್ಲಿ ಅಂದಿನ ಪ್ರಧಾನಮಂತ್ರಿಗಳಾಗಿದ್ದ ಮನಮೋಹನ್‌ ಸಿಂಗ್‌ ಅವರು ನರೇಗಾ ಕಾರ್ಯಕ್ರಮವನ್ನು ಜಾರಿಗೆ ತಂದರು. ಈ ಕಾರ್ಯಕ್ರಮ ಇಂದು ಗ್ರಾಮೀಣ ಜನರ ಜೀವನೋಪಾಯವಾಗಿ ಉಳಿಯದೇ ಜೀವನ ನಿರ್ಮಾಣ ಮಾಡುವ ಕಾರ್ಯಕ್ರಮವಾಗಿದೆ. ರಾಜ್ಯದಲ್ಲಿ ಶೇ.54ರಷ್ಟು ಮಹಿಳೆಯರು ಉದ್ಯೋಗ ಖಾತ್ರಿ ಯೋಜನೆಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಯೋಜನೆಯಡಿ ಸರ್ಕಾರ ಮಹಿಳೆಯರು ಹಾಗೂ ಪುರುಷರಿಗೆ ತಾರತಮ್ಯವಿಲ್ಲದೆ ವೇತನ ನೀಡುತ್ತಿವುದರೊಂದಿಗೆ ಬಸವಣ್ಣನವರ ಸರ್ವರಿಗೂ ಸಮಪಾಲು, ಸಮಬಾಳು ತತ್ವವನ್ನು ಪಾಲಿಸುತ್ತಿದೆ. ನರೇಗಾ ಯೋಜನೆ ಗ್ರಾಮೀಣ ಕುಟುಂಬಗಳಲ್ಲಿ ಆರ್ಥಿಕ ಸ್ಥಿರತೆ ತಂದು ಕೊಟ್ಟಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿದ್ರಿಸುವ ಸಚಿವರು, ಪ್ರಶ್ನಿಸದ ಸಂಸದರು- ಕರ್ನಾಟಕದ ಹಿತ ಕಾಪಾಡುವವರು ಯಾರು?

“ಸಂವಿಧಾನ ಪೀಠಿಕೆಯಲ್ಲಿರುವಂತೆ ಗ್ರಾಮಗಳಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸಮಾನತೆ ಪಾಲನೆಯಾಗುತ್ತಿದೆ. ಗ್ರಾಮ ಪಂಚಾಯತಿಗಳೇ ಸರ್ಕಾರಗಳಾಗಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಕೊಂಡಿವೆ. ನರೇಗಾ ಕಾರ್ಯಕ್ರಮಗಳಡಿ ರಾಜ್ಯದಲ್ಲಿ 17 ಲಕ್ಷ ಆಸ್ತಿಗಳನ್ನು ಸೃಷ್ಟಿ ಮಾಡಲಾಗಿದೆ. ಇವು ಗ್ರಾಮೀಣ ಭಾಗಕ್ಕೆ ಶಾಶ್ವತ ಕೊಡುಗೆಗಳಾಗಿವೆ” ಎಂದು ಶ್ಲಾಘನೆ ವ್ಯಕ್ತಪಡಿಸಿದರು.

“ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿರುವ ನರೇಗಾ ಅನುದಾನವನ್ನು ವರ್ಷ ವರ್ಷವೂ ಕಡಿತಗೊಳಿಸುತ್ತಾ ಹೋಗುತ್ತಿದೆ. ಇದು ಗ್ರಾಮೀಣ ಅಭಿವೃದ್ಧಿಗೆ ಧಕ್ಕೆ ತರಲಿದೆ. ಗ್ರಾಮ ಪಂಚಾಯತಿಗಳು ವೈಜ್ಞಾನಿಕವಾಗಿ ಹಾಗೂ ಪ್ರಜ್ಞಾವಂತಿಕೆಯಿಂದ ಕಾರ್ಯ ನಿರ್ವಹಿಸುದರೊಂದಿಗೆ ಗ್ರಾಮಗಳನ್ನು ಮತ್ತಷ್ಟು ಅಭಿವೃದ್ಧಿ ಮಾಡಲು ಮುಂದಾಗಬೇಕು” ಎಂದು ಸಲಹೆ ಮಾಡಿದರು.

ಪ್ರಿಯಾಂಕ್ ಖರ್ಗೆ 1 5

“ಗ್ರಾಮೀಣಾಬಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಕೂಸಿನ ಮನೆಗಳನ್ನು ಆರಂಭಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ದುಡಿಯುವ ಮಹಿಳೆಯರಿಗೆ ಒತ್ತಾಸೆಯಾಗಿದೆ” ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಶಿವಾಜಿನಗರ ಶಾಸಕ ರಿಜ್ವಾನ್‌ ಅರ್ಷದ್‌ ಅಧ್ಯಕ್ಷತೆ ವಹಿಸಿದ್ದರು. ಕಿಯೊನಿಕ್ಸ್‌ ಅಧ್ಯಕ್ಷ ಶರತ್‌ ಬಚ್ಚೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಉಮಾ ಮಹದೇವನ್‌ ಮತ್ತು ಅಂಜುಂ ಪರವೇಜ್‌, ನರೇಗ ಆಯುಕ್ತ ಪವನ್‌ ಕುಮಾರ್‌ ಮಾಲಪಾಟಿ, ಪಂಚಾಯತ್‌ ರಾಜ್‌ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್‌, ಗ್ರಾಮೀಣ ನೀರು ಸರಬರಾಜು ಇಲಾಖೆ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...