ರಾಷ್ಟ್ರೀಯ ಪಕ್ಷಗಳ ಸಾಲು ಸೇರಿದ ಆಪ್‌; ಆಮ್ ಆದ್ಮಿ ಪಾರ್ಟಿಗೆ ಸೀಮಿತವಾದ ಪೊರಕೆ ಚಿಹ್ನೆ

Date:

  • ಅಧಿಕೃತ ರಾಷ್ಟ್ರೀಯ ಪಕ್ಚವಾದ ಆಮ್ ಆದ್ಮಿ ಪಾರ್ಟಿ
  • ಪೊರಕೆ ಚಿಹ್ನೆ ಇನ್ನು ಆಪ್‌ನ ಅಧಿಕೃತ ಚುನಾವಣಾ ಗುರುತು

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ನಾಯಕತ್ವದ ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನ ದೊರೆತಿದೆ.

ತಮಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡುವಂತೆ ಆಪ್ ಕೇಂದ್ರ ಚುನಾವಣಾ ಆಯೋಗವನ್ನು ಕೋರಿಕೊಂಡಿತ್ತು.

ಕರ್ನಾಟಕ ಹೈಕೋರ್ಟ್‌ನಲ್ಲೂ ಈ ವಿಚಾರ ಪರಿಶೀಲನೆಗೆ ಆಪ್ ರಾಜ್ಯ ನಾಯಕರು ರಿಟ್ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಈ ಬಗ್ಗೆ ನಿರ್ಧರಿಸಲು ಚುನಾವಣೆ ಆಯೋಗಕ್ಕೆ ಗಡುವು ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆಳವಣಿಗೆಗಳ ಬೆನ್ನಲ್ಲಿ ಪಕ್ಷದ ಮನವಿ ಪರಿಶೀಲಿಸಿದ ಆಯೋಗ ಈಗ ಆಪ್‌ಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿದೆ.

ಇದೇ ವೇಳೆ ತೃಣಮೂಲ ಕಾಂಗ್ರೆಸ್,ಭಾರತೀಯ ಕಮ್ಯುನಿಸ್ಟ್ ಪಕ್ಷ, ಎನ್‌ಸಿಪಿ, ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಆಯೋಗ ವಾಪಸ್‌ ಪಡೆದಿದೆ.

ಈ ಹಿನ್ನೆಲೆಯಲ್ಲಿ ಆಪ್ ಪಕ್ಷದ ʼಪೊರಕೆʼ ಚಿಹ್ನೆ ಪಕ್ಷದ ಅಧಿಕೃತ ಗುರುತಾಗಿ ದೇಶದಾದ್ಯಂತ ನಡೆಯುವ ಚುನಾವಣೆಯಲ್ಲಿ ಬಳಕೆಯಾಗಲಿದೆ. ಒಟ್ಟಾರೆ ಲೆಕ್ಕಾಚಾರಗಳ ಪ್ರಕಾರ ಆಮ್ ಆದ್ಮಿ ಪಕ್ಷ ಈಗ ರಾಷ್ಟ್ರೀಯ ಸ್ಥಾನಮಾನ ಪಡೆದ 9ನೇ ಪಕ್ಷವಾಗಿದೆ.

ಆಪ್ ಹಿನ್ನೆಲೆ :
2012 ರಲ್ಲಿ ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ಹೊರಹೊಮ್ಮಿದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬಳಿಕ ರಾಷ್ಟ್ರೀಯ ರಾಜಕಾರಣದಲ್ಲಿ ಹೊಸ ಶಕೆ ಆರಂಭಿಸಿತ್ತು.

ಮೊದಲು ದೆಹಲಿ ಗದ್ದುಗೆ ಹಿಡಿದಿದ್ದ ಪಕ್ಷ ನಂತರ ಪಂಜಾಬ್ ನಲ್ಲೂ ಆಡಳಿತ ನಡೆಸಿ, ಗುಜರಾತ್ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಪ್ರಬಲ ಸ್ಪರ್ಧೆ ನೀಡಿತ್ತು.

ರಾಷ್ಟ್ರೀಯ ಪಕ್ಷದ ರಚನೆ ಹೇಗೆ?
ಭಾರತದ ಚುನಾವಣಾ ಆಯೋಗ ಕೆಲ ಮಾನದಂಡಗಳ ಮೇಲೆ ಚುನಾಯಿತ ಪಕ್ಷಗಳಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡುತ್ತದೆ.

ಆಯೋಗ ನೀಡುವ ಷರತ್ತಿನಲ್ಲಿ ಒಂದನ್ನು ಪೂರೈಸಿದರೂ ಪಕ್ಷಗಳಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಲಾಗುತ್ತದೆ.

ಆಯೋಗದ ಷರತ್ತಿನ ಪ್ರಕಾರ 3 ರಾಜ್ಯಗಳ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಶೇ.2 ಸ್ಥಾನ ಗೆಲ್ಲಬೇಕು.

ನಾಲ್ಕು ಲೋಕಸಭಾ ಸ್ಥಾನಗಳ ಜೊತೆಗೆ, ಪಕ್ಷವು ಲೋಕಸಭೆಯಲ್ಲಿ ಶೇ.6 ಮತಗಳನ್ನು ಅಥವಾ ಯಾವುದೇ ನಾಲ್ಕು ವಿಧಾನಸಭೆ ಚುನಾವಣೆಯಲ್ಲಿ ಶೇ.6ರಷ್ಟು ಮತಗಳನ್ನು ಗಳಿಸಬೇಕು. (ಆಪ್ ಈ ಶ್ರೇಣಿ ಮೂಲಕ ಅರ್ಹತೆ ಪಡೆದಿದೆ)

4 ಅಥವಾ ಅದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಪಕ್ಷವು ಪ್ರಾದೇಶಿಕ ಪಕ್ಷವಾಗಿ ಗುರುತಿಸಲ್ಪಡುವುದು. ಇವೇ ಆಯೋಗ ವಿಧಿಸುವ ಪ್ರಮುಖ ನಿಯಮಗಳು.

ರಾಷ್ಟ್ರೀಯ ಪಕ್ಷವಾದರೆ ಏನು ಪ್ರಯೋಜನ?
ಭಾರತದಾದ್ಯಂತ ಬೇರಾವುದೇ ರಾಜಕೀಯ ಪಕ್ಷವು ರಾಷ್ಟ್ರೀಯ ಪಕ್ಷವಾದ ಬಳಿಕ ಅದರ ಚಿಹ್ನೆಯನ್ನು ಬಳಸಿಕೊಂಡು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ

ರಾಷ್ಟ್ರೀಯ ಪಕ್ಷಗಳು ತಮ್ಮ ಪಕ್ಷದ ಕಚೇರಿ ಸ್ಥಾಪಿಸಲು ಸರಕಾರದಿಂದ ಭೂಮಿ ಅಥವಾ ಕಟ್ಟಡವನ್ನು ಪಡೆಯಬಹುದು.

ರಾಷ್ಟ್ರೀಯ ಪಕ್ಷಗಳು ಗರಿಷ್ಠ 40 ಮಂದಿ ಸ್ಟಾರ್ ಪ್ರಚಾರಕರನ್ನು ಹೊಂದಬಹುದು. ಆದರೆ, ರಾಜ್ಯ ಅಥವಾ ಪ್ರಾದೇಶಿಕ ಪಕ್ಷಗಳಿಗೆ ಈ ಅವಕಾಶ ಕೇವಲ 20ಕ್ಕೆ ಸೀಮಿತ.

ರಾಷ್ಟ್ರೀಯ ಮಾಧ್ಯಮಗಳಲ್ಲಿ ನಿರ್ದಿಷ್ಟ ಪ್ರಸಾರ ಪಡೆದು, ಪಕ್ಷದ ಸಂದೇಶಗಳನ್ನು ರವಾನಿಸಬಹುದು.

ಈ ಸುದ್ದಿ ಓದಿದ್ದೀರಾ? : ಅಮುಲ್-ನಂದಿನಿ ಬಗ್ಗೆ ಹೊಸ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿ; ಆಪ್ ಸಲಹೆ

ಪ್ರತಿ 10 ವರ್ಷಕ್ಕೊಮ್ಮೆ ಪರಿಶೀಲನೆ:
ಪ್ರತಿ 10 ವರ್ಷಕ್ಕೊಮ್ಮೆ ಚುನಾವಣಾ ಆಯೋಗ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ವಿಮರ್ಶೆಗೊಳಪಡಿಸುತ್ತದೆ. ಈ ಹಿಂದೆ ಪ್ರತಿ 5 ವರ್ಷಕ್ಕೊಮ್ಮೆ ರಾಷ್ಟ್ರೀಯ ಪಕ್ಷದ ಮಾನ್ಯತಾ ವಿಮರ್ಶೆಯನ್ನು ಆಯೋಗ ಮಾಡುತ್ತಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...