ರಾಜ್ಯ ಮಟ್ಟದ ಎಲ್ಲಾ ಸಂಘಟನೆಗಳನ್ನು ವಿಸರ್ಜಿಸಿದ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ

Date:

ನವೀನ್ ಪಟ್ನಾಯಕ್ ಬಿಜು ಜನತಾದಳ (ಬಿಜೆಡಿ) ತನ್ನ ಎಲ್ಲಾ ರಾಜ್ಯ ಮಟ್ಟದ ಸಂಘಟನೆಗಳನ್ನು ವಿಸರ್ಜಿಸಿದೆ. ಬಿಜೆಡಿ ಮುಂಬರುವ ಸಾಂಸ್ಥಿಕ ಚುನಾವಣೆಗೆ ಮುಂಚಿತವಾಗಿ ಈ ಕ್ರಮ ಕೈಗೊಂಡಿದೆ.

“ಬಿಜು ಜನತಾದಳದ ಎಲ್ಲಾ ರಾಜ್ಯ ಮಟ್ಟದ ಸಂಘಟನೆಗಳಾದ ಬಿಜು ಮಹಿಳಾ ಜನತಾದಳ, ಬಿಜು ಯುವ ಜನತಾದಳ, ಬಿಜು ಛತ್ರ ಜನತಾದಳ, ಬಿಜು ಶ್ರಮಿಕ ಸಮುದಾಯ, ಕಾನೂನು ಸಂಘಟನೆ, ಅಪ್ರವಾಸಿ ಸಂಘಟನೆಯನ್ನು ಮುಂದಿನ ಸಾಂಸ್ಥಿಕ ಚುನಾವಣೆಯ ದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ” ಎಂದು ಬಿಜೆಡಿ ಭಾನುವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.

ಇದನ್ನು ಓದಿದ್ದೀರಾ? ಬಿಹಾರ, ಆಂಧ್ರ, ಒಡಿಶಾಗೆ ವಿಶೇಷ ಸ್ಥಾನಮಾನಕ್ಕೆ ಜೆಡಿಯು, ವೈಎಸ್ಆರ್‌ಸಿಪಿ, ಬಿಜೆಡಿ ಬೇಡಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಡಿ ಈ ಹಿಂದೆ ಸತತ ಮೂರನೇ ಬಾರಿಗೆ ಸಾಂಸ್ಥಿಕ ಚುನಾವಣೆಗೆ ರಾಜ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ನಾಯಕ ಮತ್ತು ಶಾಸಕ ಪ್ರತಾಪ್ ಕೇಶರಿ ದೇಬ್ ಅವರನ್ನು ನೇಮಿಸಿತ್ತು.

“ಬಿಜು ಜನತಾದಳದ ಸಂವಿಧಾನದ ಆರ್ಟಿಕಲ್-XXIII (2) ರ ಪ್ರಕಾರ, ಬಿಜು ಜನತಾದಳದ ಸಾಂಸ್ಥಿಕ ಚುನಾವಣೆಯನ್ನು ಸುಗಮವಾಗಿ ನಡೆಸಲು ಶಾಸಕರಾದ ಪ್ರತಾಪ್ ಕೇಶರಿ ದೇಬ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಚುನಾವಣಾ ಅಧಿಕಾರಿಯಾಗಿ ನೇಮಿಸಲಾಗಿದೆ” ಎಂದು ಬಿಜೆಡಿ ವರಿಷ್ಠ ನವೀನ್ ಪಟ್ನಾಯಕ್ ಸೋಮವಾರ ಆದೇಶದಲ್ಲಿ ತಿಳಿಸಿದ್ದರು.

ಇದಾದ ಬಳಿಕ ಹಿರಿಯ ಬಿಜೆಡಿ ನಾಯಕ ದೇಬ್ ಸತತ ಮೂರನೇ ಬಾರಿಗೆ ರಾಜ್ಯ ಚುನಾವಣಾ ಅಧಿಕಾರಿಯಾಗಿ ತಮ್ಮನ್ನು ನೇಮಿಸಿದ್ದಕ್ಕಾಗಿ ಪಟ್ನಾಯಕ್ ಅವರಿಗೆ ಧನ್ಯವಾದ ಅರ್ಪಿಸಿದರು. ಹಾಗೆಯೇ ವಿವಿಧ ಪಕ್ಷದ ಸಾಂಸ್ಥಿಕ ಸಂಸ್ಥೆಗಳಿಗೆ ಚುನಾವಣೆಗಳನ್ನು ನಾಲ್ಕು ಹಂತಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಒಡಿಶಾ ವಿಧಾನಸಭೆ ಚುನಾವಣೆ | ಬಿಜೆಪಿ ಮುನ್ನಡೆ; ಆಡಳಿತಾರೂಢ ಬಿಜೆಡಿಗೆ ಭಾರೀ ಹಿನ್ನಡೆ

ಮೊದಲು ತಳಮಟ್ಟದಲ್ಲಿ, ನಂತರ ಬ್ಲಾಕ್ ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಮತ್ತು ನಂತರ ರಾಜ್ಯ ಮಟ್ಟದಲ್ಲಿ ಚುನಾವಣೆಗಳನ್ನು ನಡೆಸಲಾಗುವುದು ಎಂದು ದೇಬ್ ಹೇಳಿದರು.

ಶೀಘ್ರದಲ್ಲೇ ಚುನಾವಣಾ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುವುದು ಮತ್ತು ಸಾಂಸ್ಥಿಕ ಚುನಾವಣೆಗಳು ಪ್ರಾರಂಭವಾಗುವ ಮೊದಲು ಚುನಾವಣಾ ಮತ್ತು ಮೇಲ್ವಿಚಾರಣಾ ಅಧಿಕಾರಿಗಳನ್ನು ನೇಮಿಸಲಾಗುವುದು. ಸಂಘಟನಾ ಚುನಾವಣೆಯ ಸಂಪೂರ್ಣ ಪ್ರಕ್ರಿಯೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

2027ರಲ್ಲಿ ಒಡಿಶಾದಲ್ಲಿ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಜೆಡಿಯು ತನ್ನ ಸಂಘಟನೆಯನ್ನು ತಳಮಟ್ಟದಿಂದ ರಾಜ್ಯ ಮಟ್ಟದವರೆಗೆ ಬಲಪಡಿಸುವ ಪ್ರಯತ್ನದಲ್ಲಿ ತೊಡಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...