ʼ500 ಕೋಟಿ ರೂ. ಕೊಟ್ಟರೆ ಸಿಎಂ ಹುದ್ದೆʼ ಹೇಳಿಕೆ; ಕಾಂಗ್ರೆಸ್‌ನಿಂದ ನವಜೋತ್ ಕೌರ್ ‘ಕಿಕ್‌ಔಟ್‌’

Date:

‘500 ಕೋಟಿ ರೂ.ಗಳ ಸೂಟ್‌ ಕೇಸ್‌ ಕೊಡುವ ವ್ಯಕ್ತಿ ಮುಖ್ಯಮಂತ್ರಿ ಆಗುತ್ತಾರೆ’ ಎಂದು ಹೇಳಿಕೆ ನೀಡಿ, ಕಾಂಗ್ರೆಸ್‌ನಲ್ಲಿ ವಿವಾದ ಸೃಷ್ಟಿಸಿದ್ದ ಮಾಜಿ ಕ್ರಿಕೆಟಿಗ ನವಜೋತ್‌ ಸಿಂಗ್ ಸಿಂಧು ಅವರ ಪತ್ನಿ ನವಜೋತ್ ಕೌರ್ ಅವರನ್ನು ಕಾಂಗ್ರೆಸ್‌ನಿಂದ ಹೊರಹಾಕಲಾಗಿದೆ. ಪಕ್ಷವನ್ನು ಅವರನ್ನು ಅಮಾನತುಗೊಳಿಸಿದೆ.

ಮಾಜಿ ಶಾಸಕಿ ಕೌರ್ ಅವರು ಇತ್ತೀಚೆಗೆ, ಪಂಜಾಬ್ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಭೇಟಿ ಮಾಡಿದ್ದರು. ಆ ಸಂದರ್ಭದಲ್ಲಿ, ‘ನವಜೋತ್ ಸಿಂಗ್ ಸಿಧು ಅವರು ಸಕ್ರಿಯ ರಾಜಕಾರಣಕ್ಕೆ ಯಾಕೆ ಮರಳಿ ಬಂದಿಲ್ಲ’ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಕೌರ್, “ಮುಂದಿನ ಪಂಜಾಜ್ ಚುನಾವಣೆಯಲ್ಲಿ (2027) ನನ್ನ ಪತಿಯನ್ನು ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ ಮಾತ್ರವೇ, ಅವರು ರಾಜಕಾರಣಕ್ಕೆ ಮರಳುತ್ತಾರೆ” ಎಂದು ಹೇಳಿದ್ದರು. ಇದೇ ಸಂದರ್ಭದಲ್ಲಿ, ಮುಖ್ಯಮಂತ್ರಿ ಹುದ್ದೆಯನ್ನು ಖರೀದಿಸಲು ನಮ್ಮಲ್ಲಿ 500 ಕೋಟಿ ರೂ. ಹಣವಿಲ್ಲ ಎಂದೂ ಹೇಳಿದ್ದರು.

ಅವರ ಈ ಹೇಳಕೆಯು ಕಾಂಗ್ರೆಸ್‌ ವಿರುದ್ಧ ನೇರ ಆರೋಪವೆಂದು ಹೇಳಲಾಗಿತ್ತು. ಇದು ಕಾಂಗ್ರೆಸ್‌ಅನ್ನು ಮುಜುಗರಕ್ಕೆ ಈಡುಮಾಡಿತ್ತು. ಮಾತ್ರವಲ್ಲದೆ, ಕಾಂಗ್ರೆಸ್ ವಿರುದ್ಧ ಬಿಜೆಪಿ ಮತ್ತು ಎಎಪಿ ವಾಗ್ದಾಳಿ ನಡೆಸಲು ಅಸ್ತ್ರವಾಗಿ ದೊರೆತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿ ಟ್ವೀಟ್‌ ಮಾಡಿರುವ ಕೌರ್, “ನನ್ನ ಅನಿಸಿಕೆಗಳಿಗೆ ಹೊಸ ತಿರುವು ನೀಡಲಾಗಿದೆ. ನಮ್ಮಿಂದ ಕಾಂಗ್ರೆಸ್ ಪಕ್ಷ ಈವರೆಗೆ ಏನನ್ನೂ ಕೇಳಿಲ್ಲ. ನನ್ನ ಪತಿ ನವಜೋತ್ ಸಿಂಗ್ ಅವರು ಯಾವುದೇ ಪಕ್ಷದಿಂದ ಮುಖ್ಯಮಂತ್ರಿಯಾಗಬಲ್ಲರೇ ಎಂಬ ಪ್ರಶ್ನೆಗೆ ಉತ್ತರಿಸುವಾಗ, ಮುಖ್ಯಮಂತ್ರಿ ಹುದ್ದೆಯನ್ನು ಪಡೆಯಲು ನಮ್ಮ ಬಳಿ ಹಣವಿಲ್ಲ ಎಂದಿದ್ದೆ. ನನ್ನ ಹೇಳಿಕೆಗೆ ನಾನಾ ಆಯಾಮಗಳನ್ನು ನೀಡಲಾಗಿದೆ. ಅದನ್ನು ನೋಡಿ ನಾನು ಆಘಾತಗೊಂಡಿದ್ದೇನೆ” ಎಂದು ಹೇಳಿದ್ದಾರೆ.

ಅವರ ಹೇಳಿಕೆ ವ್ಯಾಪಕ ಚರ್ಚೆಗೆ ಗುರಿಯಾದ ಬೆನ್ನಲ್ಲೇ, ಸಿಧು ದಂಪತಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ, ಕೌರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...