ನಕ್ಸಲ್ ನಾಯಕ ವಿಕ್ರಂ ಗೌಡ ಜನ ವಿರೋಧಿ ಕೆಲಸಗಳಲ್ಲಿ ತೊಡಗಿದ್ದ: ಸಚಿವ ಪರಮೇಶ್ವರ್

Date:

ನಕ್ಸಲ್ ನಾಯಕ ವಿಕ್ರಂ ಗೌಡನ ಚಟುವಟಿಕೆಗಳ ಮೇಲೆ ಕಳೆದ 20 ವರ್ಷಗಳಿಂದ ನಿಗಾವಹಿಸಲಾಗಿತ್ತು. ಜನ ವಿರೋಧಿ ಕೆಲಸಗಳಲ್ಲಿ ತೊಡಗಿದ್ದ ಎಂಬ ಮಾಹಿತಿ ಇದೆ. ಕಾನೂನು ಬಾಹಿರವಾಗಿ, ಅನುಮತಿ ಇಲ್ಲದೆ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ. ಈ ಹಿನ್ನೆಲೆಯಲ್ಲಿ ಎನ್‌ಕೌಂಟರ್‌ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಕ್ಸಲ್ ನಿಗ್ರಹಕ್ಕಾಗಿ ರಾಜ್ಯದಲ್ಲಿ ಮತ್ತು ಬೇರೆ‌ ಬೇರೆ ರಾಜ್ಯಗಳಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು ರಚಿಸಲಾಗಿದೆ. ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಅವರದ್ದು ನಕಲಿ‌ ಎನ್‌ಕೌಂಟರ್ ಅಲ್ಲ” ಎಂದರು.

“ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದವರಿಗೆ ಶರಣಾಗುವಂತೆ ವಿಚಾರವಾದಿಗಳು ಮನವಿ ಮಾಡಿದ್ದಾರೆ. ಸಮಾಜದಲ್ಲಿ ನ್ಯಾಯಯುತವಾಗಿ ಪ್ರತಿಭಟನೆ ಮಾಡಿ, ನಕ್ಸಲ್ ಚಟುವಟಿಕೆಗೆ ಸೇರಬೇಡಿ ಎಂದಿದ್ದಾರೆ. ನಕ್ಸಲರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನವನ್ನು ಗಂಭೀರವಾಗಿ‌ ಪರಿಗಣಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂದೆ ತುಮಕೂರಿನ ಪಾವಘಡದ ಆಂಧ್ರಪ್ರದೇಶ ಗಡಿಯಲ್ಲಿ ಪೀಪಲ್ಸ್ ವಾರ್ ಗ್ರೂಪ್ ಇತ್ತು. ಇದೇ ರೀತಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಅನುಕೂಲಸ್ಥರಿಂದ ಹಣ ಕೇಳುವುದು, ಜಮೀನುಗಳಿಗೆ ಬೇಲಿ ಹಾಕುವುದು, ಪೊಲೀಸರನ್ನು ಹತ್ಯೆ ಮಾಡಿದ್ದರು. ಎಸ್.ಎಮ್.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ನೂರಾರು ಜನ ನಕ್ಸಲರು ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ಶರಣಾಗತಿಯಾದರು. ಅದೇ ರೀತಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಗತಿಪರ ಚಿಂತಕರು ಪ್ರಯತ್ನ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಬಾರ್ಡ್ ಸಾಲ ಖೋತಾ ಮಾಡಿದ ಮೋದಿ ಸರ್ಕಾರ ರೈತಪರವೇ?

ಮಹಾರಾಷ್ಟ್ರ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಕುರಿತು ಪ್ರತಿಕ್ರಿಯಿಸಿದ ಅವರು, “ಮತಗಟ್ಟೆ ಸಮೀಕ್ಷೆಗಳು ಒಂದೇ ತರನಾಗಿ ಹೇಳಿಲ್ಲ. ಕೆಲವು ಸಮೀಕ್ಷೆಗಳು ಮಹಾ ವಿಕಾಸ್ ಅಘಾಡಿಗೆ 162 ಸೀಟುಗಳು ಬರುತ್ತವೆ ಎಂದು ಹೇಳಿದ್ದು, ಬಿಜೆಪಿಯವರಿಗೆ 128 ಸೀಟು ಬರುತ್ತವೆ ಎಂದು ತಿಳಿಸಿವೆ. ಇನ್ನು ಕೆಲ ಸಮೀಕ್ಷೆಗಳು ಬಿಜೆಪಿಯವರಿಗೆ 140 ಬರುತ್ತವೆ ಎಂದು ಹೇಳಿವೆ. ಈಗಲೇ ಯಾವುದನ್ನು ನಿಖರವಾಗಿ ಹೇಳಲು ಬರುವುದಿಲ್ಲ” ಎಂದು ಹೇಳಿದರು.

“ವಾಸ್ತವವಾಗಿ ಮಹಾರಾಷ್ಟ್ರ ಜನ, ಭ್ರಷ್ಟಚಾರದಲ್ಲಿ ತೊಡಗಿರುವ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ. ಮಹಾರಾಷ್ಟ್ರ ಸರ್ಕಾರ ಆಂಬುಲೆನ್ಸ್ ಖರೀದಿಯಲ್ಲಿ 8000 ಕೋಟಿ ರೂ. ಅಕ್ರಮ ಎಸಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಿಸಿ, ಅಂಬೇಡ್ಕರ್ ಕೇಂದ್ರ ಮಾಡುವುದಾಗಿ ಪ್ರಧಾನಿ ಮೋದಿಯವರು 2015ರಲ್ಲಿ ಅಡಿಗಲ್ಲು ಹಾಕಿದ್ದರು. ಈವರೆಗು ಪೂರ್ಣಗೊಂಡಿಲ್ಲ. ಅಂಬೇಡ್ಕರ್ ಅವರು ಮಹಾರಾಷ್ಟ್ರದಲ್ಲಿ ಜನಿಸಿದವರು. ಇಡೀ ದೇಶದ ಜನತೆ ಅವರನ್ನು ಇಷ್ಡಪಡುತ್ತಾರೆ. ಯೋಜನೆಯನ್ನು ಪೂರ್ಣಗೊಳಿಸದೆ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಜನ ಅಸಮಾದಾನ ವ್ಯಕ್ತಪಡಿಸಿದ್ದಾರೆ” ಎಂದರು‌.

“ಮಹಾರಾಷ್ಟ್ರಕ್ಕೆ ಬಂದಿದ್ದ ಕೈಗಾರಿಕೆಗಳನ್ನು ಗುಜುರಾತ್‌ಗೆ ತೆಗೆದುಕೊಂಡು ಹೋಗಿದ್ದಾರೆ‌. 25 ಸಾವಿರ ಕೋಟಿ ರೂ ಹೂಡಿಕೆಯ ಸಂಸ್ಥೆಯನ್ನು ಗುಜುರಾತ್‌‌ಗೆ ತೆಗೆದುಕೊಂಡು ಹೋಗಿದ್ದಾರೆ‌. ಇದರಿಂದ ಉದ್ಯೋಗಗಳೆಲ್ಲ ಗುಜುರಾತ್‌ಗೆ ಹೋಗಿರುವುದಕ್ಕೆ ಜನರಿಗೆ ಅಸಮಾದಾನವಿದೆ‌. ರೈತರಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುತ್ತಿಲ್ಲ. ವಿಪರೀತ ಭ್ರಷ್ಟಚಾರ ಮಾಡುತ್ತಿದ್ದಾರೆ ಎಂಬುದು ಜನರೊಂದಿಗೆ ಸಮಾಲೋಚನೆ ನಡೆಸಿದ ವೇಳೆ ಬಂದ ಮಾತುಗಳು. ಹೀಗಾಗಿ ಜನರು, ಮಹಾ ವಿಕಾಸ್ ಅಘಾಡಿ ಮೈತ್ರಿಕೂಟಕ್ಕೆ ಬಹುಮತ ನೀಡುವ ಭರವಸೆ ಇದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...