ರಾಮ ಮಾಂಸಾಹಾರಿಯಾಗಿದ್ದ: ಮಹಾರಾಷ್ಟ್ರದಲ್ಲಿ ವಿವಾದ ಸೃಷ್ಟಿಸಿದ ಎನ್‌ಸಿಪಿ ಶಾಸಕನ ಹೇಳಿಕೆ

Date:

ಜ.22ರಂದು ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರ ಲೋಕಾರ್ಪಣೆಯ ಕಾರ್ಯಕ್ರಮವು ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ನಾಯಕರ ಹೇಳಿಕೆ, ಬೆಳವಣಿಗೆಗಳು ಒಂದೊಂದು ರಾಜ್ಯಗಳಲ್ಲಿ ಒಂದೊಂದು ವಿವಾದಗಳು ಉಂಟಾಗುತ್ತಿದೆ.

ಕರ್ನಾಟಕದಲ್ಲಿ ಸದ್ಯ ಬಿಜೆಪಿ ಹೇಳುತ್ತಿರುವ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನವು ವಿವಾದವಾಗಿದ್ದರೆ, ನೆರೆಯ ಮಹಾರಾಷ್ಟ್ರದಲ್ಲಿ ಎನ್‌ಸಿಪಿ ನಾಯಕನೋರ್ವ ನೀಡಿರುವ ‘ರಾಮ ಮಾಂಸಾಹಾರಿ’ ಹೇಳಿಕೆಯು ವಿವಾದ ಸೃಷ್ಟಿಸಿದೆ.

ಎನ್​ಸಿಪಿ ಶರದ್ ಪವಾರ್ ಬಣದ ಶಾಸಕ ಮತ್ತು ಮಾಜಿ ಸಚಿವ ಜಿತೇಂದ್ರ ಆವ್ಹಾದ್​, ಶ್ರೀರಾಮನನ್ನು ಮಾಂಸಾಹಾರಿ ಎಂದು ಕರೆಯುವ ಮೂಲಕ ವಿವಾದ ಹುಟ್ಟು ಹಾಕಿದ್ದಾರೆ. ಇದಕ್ಕೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಜಿತೇಂದ್ರ ಅವರ ಈ ಹೇಳಿಕೆಗೆ ಸಂಬಂಧಿಸಿದಂತೆ ಅಜಿತ್ ಪವಾರ್ ಬಣದ ಎನ್‌ಸಿಪಿ ಕೂಡ ಮುಂಬೈನಲ್ಲಿ ಪ್ರತಿಭಟನೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಮ ನಮ್ಮವನು, ಬಹುಜನರಿಗೆ ಸೇರಿದವನು. ರಾಮ ಬೇಟೆಯಾಡಿ ಪ್ರಾಣಿಗಳನ್ನು ತಿನ್ನುತ್ತಿದ್ದ. ನಾವು ರಾಮನನ್ನು ಆದರ್ಶ ಎಂದು ಪರಿಗಣಿಸಿ ಕುರಿ ಮಾಂಸ ತಿನ್ನುತ್ತೇವೆ. ಇದು ರಾಮನ ಆದರ್ಶ. 14 ವರ್ಷಗಳ ಕಾಲ ಕಾಡಿನಲ್ಲಿ ವಾಸಿಸುವ ವ್ಯಕ್ತಿಯು ಸಸ್ಯಾಹಾರವನ್ನು ಹುಡುಕಲು ಎಲ್ಲಿಗೆ ಹೋಗುತ್ತಾನೆ” ಎಂದು ಅವರು ಹೇಳಿದರು.

“ರಾಮ ಕ್ಷತ್ರಿಯ, ಕ್ಷತ್ರಿಯರು ಎಂದೂ ಮಾಂಸಾಹಾರಿಗಳು, ರಾಮ ಕೂಡ ಮಾಂಸಾಹಾರಿಯಾಗಿದ್ದ. ಬಿಜೆಪಿ ಮತ್ತು ಆರ್‍‌ಎಸ್‌ಎಸ್‌ನವರು ಭಾರತವನ್ನು ಸಸ್ಯಾಹಾರಿ ದೇಶವನ್ನಾಗಿಸಲು ಹೊರಟಿದ್ದಾರಾ? ಈ ದೇಶದ 80 ಶೇ. ಜನರು ಮಾಂಸಾಹಾರಿಗಳು. ಅವರಲ್ಲಿ ರಾಮಭಕ್ತರೂ ಕೂಡ ಇಲ್ಲವೇ. ಇದರಲ್ಲಿ ವಿವಾದ ಏನಿದೆ?” ಎಂದು ಮಹಾರಾಷ್ಟ್ರದ ಶಿರಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ತೆರಳುತ್ತಿದ್ದ ವೇಳೆ ಜಿತೇಂದ್ರ ಆವ್ಹಾದ್ ಪ್ರಶ್ನಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಲವು ಬಿಜೆಪಿ ಮುಖಂಡು, “ಜಿತೇಂದ್ರ ಆವ್ಹಾದ್​ ನೀಡಿರುವ ಹೇಳಿಕೆಯು ಹಾಸ್ಯಾಸ್ಪದ. ಶ್ರೀರಾಮ ಕಾಡಿನಲ್ಲಿ ಏನು ತಿನ್ನುತ್ತಿದ್ದರು ಎಂಬುದನ್ನು ನೋಡಲು ಹೋಗಿದ್ದರೇ? ಜ.22ರಂದು ರಾಮ ಮಂದಿರದ ಅದ್ಧೂರಿ ಉದ್ಘಾಟನೆ ನಡೆಯುತ್ತಿರುವುದರಿಂದ ಇಂಡಿಯಾ ಮೈತ್ರಿಕೂಟದ ಜನರಿಗೆ ಹೊಟ್ಟೆ ನೋವು ಅಷ್ಟೆ, ಇಷ್ಟು ದೊಡ್ಡ ಹೇಳಿಕೆ ನೀಡಿದ ನಂತರವೂ ರಾಹುಲ್ ಗಾಂಧಿ ಮತ್ತು ಉದ್ಧವ್ ಠಾಕ್ರೆ ಏಕೆ ಮೌನವಾಗಿದ್ದಾರೆ? ಸನಾತನ ಧರ್ಮವನ್ನು ಅವಹೇಳನ ಮಾಡಿದ್ದಾರೆ” ಎಂದು ಕಿಡಿಕಾರುತ್ತಿದ್ದಾರೆ.

ಕ್ಷಮೆಯಾಚನೆ

“ಸಂಶೋಧನೆ ಇಲ್ಲದೆ ಮಾತನಾಡಿಲ್ಲ. ಈ ಬಗ್ಗೆ ಮೂಲ ರಾಮಾಯಣದಲ್ಲೇ ಉಲ್ಲೇಖವಿದೆ. ಆದರೆ ನನ್ನ ಹೇಳಿಕೆಯಿಂದ ಭಾವನೆಗೆ ಧಕ್ಕೆಯಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ” ಎಂದು ಹೇಳಿಕೆಯು ವಿವಾದ ಉಂಟು ಮಾಡಿದ ನಂತರ ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ತಿಳಿಸುವ ಮೂಲಕ ಕ್ಷಮೆಯಾಚಿಸಿದ್ದಾರೆ. ಅಲ್ಲದೇ, ರಾಮಾಯಣದ ಕೆಲವೊಂದು ಅಧ್ಯಾಯಗಳನ್ನು ಮಾಧ್ಯಮಗಳಿಗೆ ತೋರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...