ಎನ್‌ಡಿಎ ಶ್ವೇತಪತ್ರ | ಹತ್ತು ವರ್ಷಗಳ ಆರ್ಥಿಕ ಸಂಕಷ್ಟಕ್ಕೆ ‘ಯುಪಿಎ’ ರಕ್ಷಣಾ ಕವಚದ ಹೊದಿಕೆ

Date:

ಎನ್‌ಡಿಎ ಸರ್ಕಾರದ ಆರ್ಥಿಕ ಸಂಕಷ್ಟಗಳು ಸುಭದ್ರ ಭವಿಷ್ಯಕ್ಕೆ ಕಠಿಣ ನಿರ್ಧಾರಗಳ ತಳಹದಿ ಎಂದು ಗುರುವಾರ ಬಿಡುಗಡೆ ಮಾಡಲಾದ ಅರ್ಥವ್ಯವಸ್ಥೆಯ ಶ್ವೇತಪತ್ರ ವ್ಯಾಖ್ಯಾನಿಸಿದೆ

ಸಂಸತ್ತಿನಲ್ಲಿ ಶ್ವೇತಪತ್ರ ಬಿಡುಗಡೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡಿದ್ದಾರೆ. ಯುಪಿಎ ಸರ್ಕಾರ ಬಿಟ್ಟು ಹೋಗಿದ್ದ ಸವಾಲುಗಳನ್ನು ಎನ್‌ಡಿಎ ಸರ್ಕಾರ ಯಶಸ್ವಿಯಾಗಿ ನಿಭಾಯಿಸಿ ಅರ್ಥವ್ಯವಸ್ಥೆಯನ್ನು ಅತ್ಯುತ್ತಮ ಪ್ರಗತಿಯ ಹಾದಿಯಲ್ಲಿ ತಂದಿದೆ ಎಂದು ಗುರುವಾರ (ಫೆಬ್ರವರಿ 8) ಹೊರಡಿಸಿದ ಅರ್ಥವ್ಯವಸ್ಥೆಯ ಶ್ವೇತಪತ್ರ ಹೇಳಿದೆ.

ಕಳೆದ ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ತೆಗೆದುಕೊಂಡ ಆರ್ಥಿಕ ನಿರ್ಧಾರಗಳು ಹಲವಾರು ಅರ್ಥಶಾಸ್ತ್ರಜ್ಞರಿಂದ ಟೀಕೆಗೆ ಒಳಗಾಗಿದ್ದವು. ಆದರೆ ಈ ನಿರ್ಧಾರಗಳನ್ನು ಶ್ವೇತಪತ್ರದಲ್ಲಿ ಆರ್ಥಿಕ ಸುಧಾರಣೆಗಾಗಿ ತೆಗೆದುಕೊಂಡ ಕಠಿಣ ನಿರ್ಧಾರಗಳು ಎಂದು ಬಿಜೆಪಿ ಸಮರ್ಥಿಸಿಕೊಂಡಿದೆ.

”ಯುಪಿಎ ಅವಧಿಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವಲ್ಲಿ ಆಡಳಿತ ವ್ಯವಸ್ಥೆ ವಿಫಲವಾಗಿತ್ತು. ಆದರೆ ಕಳೆದ ಹತ್ತು ವರ್ಷಗಳಲ್ಲಿ ಎನ್‌ಡಿಎ ಸರ್ಕಾರ ಕಠಿಣ ನಿರ್ಧಾರಗಳನ್ನು ಕೈಗೊಂಡು ಯಶಸ್ವಿಯಾಗಿ ಈ ಸವಾಲುಗಳನ್ನು ನಿಭಾಯಿಸಿದೆ” ಎಂದು ಅರ್ಥವ್ಯವಸ್ಥೆಯ ಮೇಲಿನ ಶ್ವೇತಪತ್ರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹತ್ತು ವರ್ಷಗಳಲ್ಲಿ ನೋಟು ಅಮಾನ್ಯೀಕರಣದಿಂದ ದೇಶದ ಅರ್ಥವ್ಯವಸ್ಥೆ ಎದುರಿಸಿರುವ ಸಂಕಷ್ಟ, ಜಿಎಸ್‌ಟಿ ಅನುಷ್ಠಾನದ ವಿಚಾರದಲ್ಲಿ ಎದುರಿಸಿದ ಟೀಕೆಗಳಿಗೂ ಕಠಿಣ ನಿರ್ಧಾರವೆಂದು ವ್ಯಾಖ್ಯಾನಿಸಿ, ಯುಪಿಎ ಅವಧಿಯ ಭ್ರಷ್ಟಾಚಾರ ಮತ್ತು ಅಸಂಘಟಿತ ವಲಯದ ಅರ್ಥವ್ಯವಸ್ಥೆಯ ಗೋಜಲುಗಳನ್ನೇ ತನ್ನ ರಕ್ಷಣಾಕವಚವಾಗಿಸಿ ಶ್ವೇತಪತ್ರದಲ್ಲಿ ಬರೆಯಲಾಗಿದೆ. 

ಇದನ್ನೂ ಓದಿ: ಶ್ವೇತಪತ್ರಕ್ಕೆ ಕಾಳಪತ್ರ | ಹತ್ತು ವರ್ಷದಲ್ಲಿ 411 ಶಾಸಕರ ಖರೀದಿ ಬಿಜೆಪಿಯ ಸಾಧನೆ: ಖರ್ಗೆ

”ಮೋದಿ ಸರ್ಕಾರ ಅಧಿಕಾರವಹಿಸಿಕೊಂಡಾಗ ಅರ್ಥವ್ಯವಸ್ಥೆ ದುರ್ಬಲವಾಗಿತ್ತು ಮತ್ತು ಕೆಟ್ಟ ಸ್ವರೂಪದಲ್ಲಿತ್ತು. ಆರ್ಥಿಕ ದುರುಪಯೋಗ, ಹಣಕಾಸು ಅಶಿಸ್ತು ಹಾಗೂ ವ್ಯಾಪಕ ಭ್ರಷ್ಟಾಚಾರ ತಾಂಡವವಾಡುತ್ತಿತ್ತು. ಬಿಕ್ಕಟ್ಟಿನ ಸ್ಥಿತಿಯಲ್ಲಿ ಅಧಿಕಾರವಹಿಸಿಕೊಂಡ ಬಿಜೆಪಿ ಸರ್ಕಾರ ವ್ಯವಸ್ಥೆಯನ್ನು ಹಂತ ಹಂತವಾಗಿ ಸುಧಾರಿಸಿದೆ. ಯುಪಿಎ ಸರ್ಕಾರ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಬದಲಾಗಿ ಕಪ್ಪುಹಣದ ಅರ್ಥವ್ಯವಸ್ಥೆಯನ್ನು ಪ್ರೋತ್ಸಾಹಿಸಿತ್ತು. ರಾಜಕೀಯ ಮತ್ತು ನೀತಿಯ ಸ್ಥಿರತೆಯೊಂದಿಗೆ ಮೋದಿ ಸರ್ಕಾರ ಗರಿಷ್ಠ ಆರ್ಥಿಕ ಸುಧಾರಣೆಗಾಗಿ ಕೆಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ” ಎಂದು ಶ್ವೇತಪತ್ರದಲ್ಲಿ ಹತ್ತು ವರ್ಷಗಳ ಬಿಜೆಪಿ ಅವಧಿಯ ಆರ್ಥಿಕ ನಿರ್ಧಾರಗಳು ಮತ್ತು ಅದರ ಫಲಿತಾಂಶವನ್ನು ಮೋದಿ ಸರ್ಕಾರ ಸಮರ್ಥಿಸಿಕೊಂಡಿದೆ.

ಪ್ರಸ್ತುತ ಸನ್ನಿವೇಶದಲ್ಲಿ ದೇಶ ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳತ್ತ ಹೆಚ್ಚು ಗಮನ ನೀಡದ ಎನ್‌ಡಿಎ ಸರ್ಕಾರದ ಶ್ವೇತಪತ್ರ, ಭವಿಷ್ಯದಲ್ಲಿ ಸುಧಾರಿತ ಅರ್ಥವ್ಯವಸ್ಥೆಯಾಗಿ ರೂಪುಗೊಳ್ಳಲು ತಳಹದಿಯಾಗಿ ಕಳೆದ ಹತ್ತು ವರ್ಷಗಳನ್ನು ಬಣ್ಣಿಸಿಕೊಂಡಿದೆ.

ಸುಧಾರಿತ ಅರ್ಥವ್ಯವಸ್ಥೆಗೆ ಎನ್‌ಡಿಎ ಸರ್ಕಾರ ಶಂಕುಸ್ಥಾಪನೆ ಮಾಡಿದೆ. ಹತ್ತು ವರ್ಷಗಳ ಸಾಧನೆ ತೃಪ್ತಿ ತಂದಿದೆ. ಆದರೆ ಇನ್ನೂ ಬಹುದೂರ ಸಾಗಬೇಕಿದೆ ಮತ್ತು 2047ರ ಅವಧಿಗೆ ದೇಶವನ್ನು ಅಭಿವೃದ್ಧಿ ಹೊಂದಿದ ದೇಶಗಳ ಸ್ಥಾನದಲ್ಲಿ ನಿಲ್ಲಿಸುತ್ತೇವೆ. ಇದು ನಮ್ಮ ಕರ್ತವ್ಯಕಾಲ ಎಂದು ಶ್ವೇತಪತ್ರದಲ್ಲಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...