ಬಿಹಾರ ಚುನಾವಣೆ | ನೀತಿ ಸಂಹಿತೆ ಉಲ್ಲಂಘಿಸಿದ ಎನ್‌ಡಿಎ ಸರ್ಕಾರ: ಆಯೋಗಕ್ಕೆ ಆರ್‌ಜೆಡಿ ಪತ್ರ

Date:

ಅಕ್ಟೋಬರ್ 17, 24 ಮತ್ತು 31ರಂದು ‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ ಅಡಿಯಲ್ಲಿ ಮಹಿಳೆಯರಿಗೆ ಹಣ ವರ್ಗಾವಣೆ ಮಾಡುವ ಮೂಲಕ ಬಿಹಾರದ ಎನ್‌ಡಿಎ ಸರ್ಕಾರ ಬಿಹಾರ ಚುನಾವಣೆಗೂ ಮುನ್ನ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಆರ್‌ಜೆಡಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಈ ಬಗ್ಗೆ ಹಿರಿಯ ಆರ್‌ಜೆಡಿ ಸಂಸದ ಮನೋಜ್ ಕೆ ಝಾ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಹಣ ಬಿಡುಗಡೆ ಮಾಡಿರುವುದು ಅಕ್ಟೋಬರ್ 6ರಂದು ಜಾರಿಗೆ ಬಂದ ನೀತಿ ಸಂಹಿತೆಯ ಸ್ಪಷ್ಟ ಮತ್ತು ಉದ್ದೇಶಪೂರ್ವಕ ಉಲ್ಲಂಘನೆಯಾಗಿದೆ. ಬಿಹಾರ ಚುನಾವಣೆಯ ಎರಡನೇ ಹಂತದ ಮತದಾನಕ್ಕೂ ನಾಲ್ಕು ದಿನಗಳ ಮೊದಲು ನವೆಂಬರ್ 7ರಂದು ಮತ್ತೆ ಹಣ ಬಿಡುಗಡೆ ಮಾಡಲಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಚುನಾವಣೆ 2023 | ಕಣದಲ್ಲಿದ್ದಾರೆ ಕ್ರಿಮಿನಲ್ ಕೇಸುಗಳ ನೂರಾರು ಆಪಾದಿತರು           

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಅವಧಿಯಲ್ಲಿ ಯಾವುದೇ ಯೋಜನೆಯ ಹಣವನ್ನು ವಿತರಿಸುವುದು, ಸಂಹಿತೆಯ ಉಲ್ಲಂಘಟನೆಯಾಗಿದೆ. ವಿಶೇಷವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ನೀತಿ ಸಂಹಿತೆ ಜಾರಿಯಾದ ಮತ್ತು ಮತದಾನಕ್ಕೆ ಕೆಲವೇ ವಾರಗಳು ಇರುವಾಗ ನಗದು ವರ್ಗಾವಣೆ ಮಾಡಿರುವುದು ಮತದಾರರ ಮೇಲೆ ಪ್ರಭಾವ ಬೀರುವ ಉದ್ದೇಶ ಹೊಂದಿದೆ” ಎಂದು ಪತ್ರದಲ್ಲಿ ದೂರಲಾಗಿದೆ.

ಇನ್ನು ಈ ಬಗ್ಗೆ ತಕ್ಷಣ ಮತ್ತು ಬಲವಾದ ಕ್ರಮ ಕೈಗೊಳ್ಳುವಂತೆಯೂ ಮನೋಜ್ ಕೆ ಝಾ ಒತ್ತಾಯಿಸಿದ್ದಾರೆ. ಈ ಪ್ರಕರಣದಲ್ಲಿ ತ್ವರಿತವಾಗಿ ಕ್ರಮಕೈಗೊಳ್ಳುವುದು ಚುನಾವಣೆ ವೇಳೆ ಯಾವುದೇ ಬೆಲೆ ತೆತ್ತಾದರೂ ಸಾಂವಿಧಾನಿಕ ಆದೇಶವನ್ನು ಎತ್ತಿ ಹಿಡಿಯಲಾಗುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ನೀಡಿದಂತಾಗುತ್ತದೆ” ಎಂದು ತಿಳಿಸಿದ್ದಾರೆ.

ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ಮುಖ್ಯಮಂತ್ರಿ ‘ಮಹಿಳಾ ರೋಜ್‌ಗಾರ್ ಯೋಜನೆ’ಯನ್ನು ಪ್ರಾರಂಭಿಸಿದ್ದು, ಮಹಿಳೆಯರು ಸ್ವಂತ ಉದ್ಯಮ ಆರಂಭಿಸಲು ಹತ್ತು ಸಾವಿರ ರೂಪಾಯಿ ಆರಂಭಿಕ ಆರ್ಥಿಕ ಅನುದಾನವನ್ನು ನೀಡುತ್ತದೆ. ಸದ್ಯ ಚುನಾವಣಾ ನೀತಿ ಸಂಹಿತೆ ಇರುವ ಕಾರಣ ಸರ್ಕಾರ ಯಾವುದೇ ಹೊಸ ಯೋಜನೆಗಳ ಹಣ ಬಿಡುಗಡೆ ಮಾಡುವಂತಿಲ್ಲ. ಮಹಿಳಾ ರೋಜ್‌ಗಾರ್ ಯೋಜನೆಯೂ ಹೊಸ ಯೋಜನೆಯಾಗಿದ್ದು, ಸೆಪ್ಟೆಂಬರ್‌ನಲ್ಲಿ ಆರಂಭಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...