ಸಿಎಂ ಸಿದ್ದರಾಮಯ್ಯರನ್ನು ‘ಸಿದ್ದ’ ಎಂದು ಉಲ್ಲೇಖಿಸಿದ ಎನ್‌ಡಿಟಿವಿ; ಭವ್ಯಾ ನರಸಿಂಹಮೂರ್ತಿ ತರಾಟೆ

Date:

ಮುಡಾ ಅಕ್ರಮ ಪ್ರಕರಣದ ಕುರಿತು ಎನ್‌ಡಿಟಿವಿ ನಡೆಸಿದ ಚರ್ಚಾ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ‘ಸಿದ್ದ’ ಎಂದು ಅರ್ಧ ಹೆಸರಿನಲ್ಲಿ ಉಲ್ಲೇಖಿಸಿದೆ. ಒಂದು ರಾಜ್ಯದ ಮುಖ್ಯಮಂತ್ರಿಯನ್ನು ಅರ್ಧ ಹೆಸರಿನಲ್ಲಿ ಉಲ್ಲೇಖಿಸಿದ್ದನ್ನು ಕಾರ್ಯಕ್ರಮದಲ್ಲೇ ವಿರೋಧಿಸಿದ ಕಾಂಗ್ರೆಸ್‌ ವಕ್ತಾರೆ ಭವ್ಯಾ ನರಸಿಂಹಮೂರ್ತಿ, ಎನ್‌ಡಿಟಿವಿಯ ನಿರೂಪಕಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಒಂದು ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಯನ್ನು ಅರ್ಧ ಹೆಸರಿನಲ್ಲಿ ಉಲ್ಲೇಖಿಸುವುದು, ಸಂಬೋಧಿಸುವುದು ಸರಿಯಾದ ನಡೆಯಲ್ಲ” ಎಂದು ಎನ್‌ಡಿಟಿವಿ ವಿರುದ್ಧ ಭವ್ಯಾ ಕಿಡಿಕಾರಿದ್ದಾರೆ. ಭವ್ಯಾ ಅವರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆಯೇ ಸಿದ್ದರಾಮಯ್ಯ ಅವರನ್ನು ಎನ್‌ಡಿಟಿವಿ ಪೂರ್ಣ ಹೆಸರಿನಲ್ಲಿ ಉಲ್ಲೇಖಿಸಿದೆ. ಮಾತ್ರವಲ್ಲದೆ, ನಿರೂಪಕಿ ಕಾರ್ಯಕ್ರಮದಲ್ಲೇ ಕ್ಷಮೆ ಕೇಳಿದ್ದಾರೆ.

ಚರ್ಚಾ ಕಾರ್ಯಕ್ರಮದಲ್ಲಿ ಎನ್‌ಡಿಟಿವಿಯನ್ನು ತರಾಟೆಗೆ ತೆಗೆದುಕೊಂಡಿದ್ದ ವಿಡಿಯೋ ತುಣುಕನ್ನು ಸ್ವತಃ ಭವ್ಯಾ ನರಸಿಂಹಮೂರ್ತಿ ಅವರೇ ‘ಎಕ್ಸ್‌‘ನಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋದಲ್ಲಿ, “ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಯನ್ನು ‘ಸಿದ್ದ’ ಎಂದು ಉಲ್ಲೇಖಿಸಿದ್ದೀರಿ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹೀಗೆ ಉಲ್ಲೇಖಿಸುವುದು ಗೌರವಾರ್ಥವಲ್ಲ. ನಾವು ಪ್ರಧಾನಿ ಮೋದಿ ಅವರನ್ನು ‘ನರೇಂದ್ರ’ ಅಥವಾ ‘ನರೇನ್’ ಎಂದು ಬಳಸುವುದಿಲ್ಲ. ನರೇಂದ್ರ ಮೋದಿ ಅವರು ಕೊನೆಯ ಹೆಸರನ್ನು (ಮೋದಿ) ಹೊಂದಿದ್ದಾರೆ. ಆದರೆ, ಸಿದ್ದರಾಮಯ್ಯ ಕೊನೆಯ ಹೆಸರನ್ನು ಹೊಂದಿಲ್ಲ” ಎಂದಿದ್ದಾರೆ.

“ಸಿದ್ದರಾಮಯ್ಯ ಕರ್ನಾಟಕದ ಪ್ರಮುಖ ನಾಯಕರು. ಸಿದ್ದರಾಮಯ್ಯ ಅವರ ಹೆಸರನ್ನು ಪೂರ್ಣವಾಗಿ ಉಲ್ಲೇಖಿಸಿ, ಗೌರವ ಕೊಡಬೇಕು. ಅವರಿಗೆ ಅವರ ಸಾಂವಿಧಾನಿಕ ಉನ್ನತ ಹುದ್ದೆಯೊಂದಿಗೆ ಹೆಚ್ಚು ಗೌರವವನ್ನು ನೀಡಬೇಕು” ಎಂದು ಚರ್ಚಾ ಕಾರ್ಯಕ್ರಮದಲ್ಲೇ ಒತ್ತಾಯಿಸಿದ್ದಾರೆ. ಈ ವೇಳೆ ನಿರೂಪಕಿ ಕ್ಷಮೆ ಕೇಳಿದ್ದಲ್ಲದೇ, ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...