ನೇಹಾ ಹತ್ಯೆ ಪ್ರಕರಣ | ಕೆಎಫ್‍ಡಿ, ಪಿಎಫ್‍ಐ ಸಂಘಟನೆ ಜೊತೆ ಆರೋಪಿ ಸಂಪರ್ಕ ಇತ್ತೇ ಎಂಬುದು ತನಿಖೆಯಾಗಲಿ: ಆರ್.ಅಶೋಕ್

Date:

ನೇಹಾ ಹತ್ಯೆ ಪ್ರಕರಣವನ್ನು ಜನರು ಮೂರೋ ಆರೋ ತಿಂಗಳ ನಂತರ ಮರೆತ ಬಳಿಕ ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಕಾಲೇಜ್ ಕ್ಯಾಂಪಸ್ ನಲ್ಲಿ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ನೇಹಾ ಹಿರೇಮಠ ಅವರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ, ನಿರಂಜನ ಹಿರೇಮಠ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, “ಸಮರ್ಥ ಸಾಕ್ಷಿ ಬೇಕು. ದಾಖಲೆಗಳನ್ನು ಸರಿಯಾಗಿ ಸಂಗ್ರಹ ಮಾಡಬೇಕಿತ್ತು. ಕಳೆದ ಹತ್ತಾರು ದಿನಗಳಿಂದ ಆತನ ಜೊತೆ ಸಂಪರ್ಕದಲ್ಲಿದ್ದವರ ಫೋನ್ ಕರೆಗಳ ವಿವರ ಯಾಕೆ ಸಂಗ್ರಹಿಸಿಲ್ಲ? ಯಾಕೆ ಇದನ್ನು ಮಾಡಿಲ್ಲ? ಅವನು ಮಾದಕ ದ್ರವ್ಯ ಸೇವನೆ ಮಾಡಿದ್ದನೇ? ಬೇರೆ ಏನಾದರೂ ಲಿಂಕ್ ಇತ್ತೇ? ಕೆಎಫ್‍ಡಿ, ಪಿಎಫ್‍ಐನಂಥ ಸಮಾಜವಿರೋಧಿ ಸಂಘಟನೆ ಜೊತೆ ಸಂಪರ್ಕ ಇತ್ತೇ? ಎಂದು ಮಾಹಿತಿ ಪಡೆಯಬೇಕಿತ್ತು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗೃಹ ಸಚಿವರು, ಪೊಲೀಸ್ ಇಲಾಖೆಗೆ ಸಾಮಾನ್ಯ ಜ್ಞಾನ ಇರಬೇಕು. ಇಂಥ ಕೊಲೆ ಆದಾಗ ಡಬಲ್ ಅಲರ್ಟ್ ಇರಬೇಕು. ತನಿಖೆ ಮಾಡುವವರು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಕೇಳಬೇಕಿತ್ತಲ್ಲವೇ? ಸಾಕ್ಷ್ಯಗಳನ್ನು ಸಂಗ್ರಹಿಸಬೇಕಿತ್ತಲ್ಲವೇ? ಕಾನೂನಿನಡಿ ಇರುವ ಕ್ರಮವನ್ನು ಯಾಕೆ ಕೈಗೊಂಡಿಲ್ಲ? ಆರೋಪಿಯನ್ನು ಜೈಲಿಗೆ (ಜುಡಿಷಿಯಲ್ ಕಸ್ಟಡಿ) ಕಳಿಸಿದ ಬಳಿಕ ಯಾರ್ಯಾರು ಭೇಟಿ ಮಾಡಿದ್ದರು? ಬಚಾವ್ ಮಾಡಲು ಸಲಹೆ ಕೊಟ್ಟಿರುವ ಸಾಧ್ಯತೆ ಇರಬಹುದಲ್ಲವೇ?” ಎಂದು ಕೇಳಿದರು.

“ಇದೊಂದು ವಿಶೇಷ ಪ್ರಕರಣವಾಗಿದ್ದರೂ ಲವ್ ಜಿಹಾದ್ ಎಂದರೆ ತಮಗೆ ಕೆಟ್ಟ ಹೆಸರು ಬರಬಹುದೆಂದು, ಅದನ್ನು ತಪ್ಪಿಸಲು ಸರಕಾರವು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಿಲ್ಲ. ಹಾಗೂ ಆರೋಪಿಯನ್ನು ಕಸ್ಟಡಿಗೆ ಪಡೆದಿಲ್ಲ ಎಂದು ಆರೋಪಿಸಿದರು. ಸರಕಾರವು ನೊಂದ ಕುಟುಂಬವು ಸಿಬಿಐಗೆ ಕೊಡಿ ಎಂದರೆ ಕೊಡಬೇಕು. ಸಿಐಡಿಗೆ ಅಥವಾ ಎಸ್‍ಐಟಿಗೆ ಕೊಡಿ ಎಂದರೂ ಕೊಡಬೇಕಿತ್ತು. ಇದು ಸಾಮಾನ್ಯ ಜ್ಞಾನ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...