ನೇಹಾ ಕೊಲೆ ಪ್ರಕರಣ | ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ನೀಚತನ: ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕಿಡಿ

Date:

ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ವಿವಿಧ ಮಠಾಧೀಶರು ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ರಕ್ಷಣೆ ಸಿಗಬೇಕಿದೆ. ಇಂತಹ ಹೀನ ಕೃತ್ಯ ಎಸಗುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸ್ವಾಮೀಜಿಗಳು ಒಕ್ಕೊರಲಿನಿಂದ ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಮಾತನಾಡಿ, “‘ಬಿಜೆಪಿ ಈ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ನೀಚತನದ ಪರಮಾವಧಿ. ಮಾನವೀಯತೆ ತಲೆ ತಗ್ಗಿಸುವಂಥ ಕೆಲಸವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಹುಸಂಖ್ಯಾತ ರಾಜಕಾರಣಿಗಳು ನೇಹಾ ಕೊಲೆಯನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇದರ ಹಿಂದೆ ಯಾರೆಲ್ಲ ಇದ್ದಾರೆ ಎಂದು ತನಿಖೆಯಾಗಬೇಕು. ಯಾವುದೇ ಸರ್ಕಾರ ಇಂಥ ಪ್ರಕರಣಗಳನ್ನು ಹಗುರವಾಗಿ ತೆಗೆದುಕೊಳ್ಳಬಾರದು” ಎಂದು ಹೇಳಿದರು.

“ಜವಾಬ್ದಾರಿಯಿಂದ ಸರ್ಕಾರ ವರ್ತಿಸಬೇಕು. ಒಂದು ಪಕ್ಷ ಲವ್ ಜಿಹಾದ್ ಎಂದರೆ, ಮತ್ತೊಂದು ಪಕ್ಷ ವೈಯಕ್ತಿಕ ಎನ್ನುತ್ತಿದೆ. ನೀವು ನೈತಿಕವಾಗಿ ನಿಮ್ಮ ನಿಮ್ಮ ಸ್ಥಾನದಲ್ಲಿ ಇರಲು ಯೋಗ್ಯರೇ” ಎಂದು ಪರೋಕ್ಷವಾಗಿ ಜೋಶಿ ವಿರುದ್ಧ ಕುಟುಕಿದರು.

“ಇಂತಹ ಪ್ರಕರಣಗಳನ್ನು ಯಾರಾದರೂ ಚುನಾವಣೆ ಅಸ್ತ್ರವಾಗಿ ಬಳಸಿಕೊಂಡರೆ, ಅವರ ದಿಕ್ಕು ಬದಲಿಸಬೇಕಾಗುತ್ತದೆ. ಹೇಳಿಕೆ ನೀಡುವ ನಾಯಕರ ಮನೆಯ ಮಗಳಾಗಿದ್ದರೆ ಏನಾಗುತ್ತಿತ್ತು? ವಿದ್ಯಾರ್ಥಿನಿಯ ನಡತೆ ಸರಿ ಇಲ್ಲ ಎನ್ನುವ ಮಾತುಗಳನ್ನು ಕೆಲವರು ಆಡುತ್ತಿದ್ದಾರೆ. ಇದು ಅಕ್ಷಮ್ಯ” ಎಂದು ಗುಡುಗಿದರು.

ಸವಣೂರಿನ ಚನ್ನಬಸವ ಸ್ವಾಮೀಜಿ ಮಾತನಾಡಿ, “ನೇಹಾ ಕೊಲೆ ರಾಜಕೀಯ ಪಕ್ಷಗಳು ತಮ್ಮ‌ ಲಾಭಕ್ಕೆ ಬಳಸಿಕೊಳ್ಳಬಾರದು. ಕಾನೂನು ವ್ಯಾಪ್ತಿಗೆ ಬಿಟ್ಟು ಬಿಡಬೇಕು. ಯಾವುದೇ ವ್ಯಕ್ತಿ ಸ್ವಪ್ರತಿಷ್ಠೆಗೆ ಬಳಸಿಕೊಳ್ಳಬಾರದು. ಆರೋಪಿಗೆ ಶೀಘ್ರ ಶಿಕ್ಷೆ ವಿಧಿಸಬೇಕು” ಎಂದರು.

“ಕಾನೂನಿನ ಎಲ್ಲ ಅಂಶಗಳನ್ನು ಉಪಯೋಗಿಸಿ ಆರೋಪಿಗೆ ಉಗ್ರ ಶಿಕ್ಷೆ ವಿಧಿಸಬೇಕು. ಅಪರಾಧಿಯ ಶಿಕ್ಷೆಗೋಸ್ಕರ ಬಳಸಬೇಕೇ ಹೊರತ, ರಾಜಕೀಯಕ್ಕೆ ಬಳಸಬಾರದು. ಯಾವ ಧರ್ಮದಲ್ಲಿದ್ದರೂ ಅಪರಾಧಿ ಅಪರಾಧಿಯೇ! ಮಾನವೀಯತೆ, ಬಸವ ಸಂಸ್ಕೃತಿ‌ ಎತ್ತಿ ಹಿಡಿಯಲು ನಾವೆಲ್ಲರೂ ಹೋರಾಡಬೇಕು.‌ ರಾಜಕೀಯ ಬಣ್ಣ ಬಳಿಯಬಾರದು” ಎಂದು ವಕೀಲ ಕೋರೆಶೆಟ್ಟರ್ ವಿನಂತಿಸಿದರು.

ಸಿಗ್ಗಾವಿಯ ಸಂಗನ ಬಸವ, ಧಾರವಾಡದ ಮುರುಘಾಮಠದ ಸ್ವಾಮೀಜಿ, ಕುಂದಗೋಳದ ಬಸವಣ್ಣಜ್ಜ ಹಾಗೂ ಹಾವೇರಿ, ಗದಗ, ಧಾರವಾಡ ಭಾಗದ ವಿವಿಧ ಮಠಾಧೀಶರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...