ನೇಹಾ ಕೊಲೆಗೂ ರಾಜಕೀಯಕ್ಕೂ ಸಂಬಂಧವಿಲ್ಲ: ಸಚಿವ ಡಾ. ಜಿ ಪರಮೇಶ್ವರ್‌ ಸ್ಪಷ್ಟನೆ

Date:

ಹುಬ್ಬಳ್ಳಿಯ ಬಿವಿಬಿ ಇಂಜಿನಿಯರ್​​ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಸ್ಪಷ್ಟಪಡಿಸಿದರು.

ತುಮಕೂರಿನಲ್ಲಿ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, “ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್​ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್​​ ಕೊಲೆ ಮಾಡಿದ್ದಾನೆ” ಎಂದು ಹೇಳಿದರು.

“ಘಟನೆ ನಡೆದ ವೇಳೆ ಮಗಳ ಜೊತೆ ಇದ್ದ, ತಾಯಿ ಮೇಲೂ ಹಲ್ಲೆ ಮಾಡಲಾಗಿದೆ, ಆದರೆ ನೇಹಾ ತಾಯಿಯನ್ನು ರಕ್ಷಣೆ ಮಾಡಲಾಗಿದೆ. ಇದರಲ್ಲಿ ಲವ್ ಜಿಹಾದ್ ಕಂಡು ಬಂದಿಲ್ಲ. ನನ್ನನ್ನು ಬಿಟ್ಟು ಬೇರೆಯವನ್ನು ಮದುವೆ ಮಾಡಿಕೊಳ್ಳುತ್ತೀಯಾ ಅಂತ ಕೂಪದಲ್ಲಿ ಕೊಲೆ ಮಾಡಿದ್ದಾನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂಥಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ” ಎಂದು ಪರಮೇಶ್ವರ್‌ ತಿಳಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಇಂಥಹ ಘಟನೆ ಮರುಕಳಿಸುತ್ತದೆ ಎಂಬ ಬಿಜೆಪಿ ಆರೋಪ ವಿಚಾರವಾಗಿ ಮಾತನಾಡಿ, “ಬಿಜೆಪಿ ಸರ್ಕಾರ ಇದ್ದಾಗಲೂ ಹಲವು ಘಟನೆಗಳು ನಡೆದ ಬಗ್ಗೆ ಮಾಹಿತಿ ಇದೆ. ಆರ್​. ಅಶೋಕ್ ಮತ್ತು ಆರಗ ಜ್ಞಾನೇಂದ್ರ, ಬಸವರಾಜ್​ ಬೊಮ್ಮಾಯಿ ಅವರು ಗೃಹಮಂತ್ರಿ ಇದ್ದಾಗ ಇಂಥಹ ಘಟನೆಗಳು ನಡೆದಿವೆ” ಎಂದು ತಿರುಗೇಟು ನೀಡಿದರು.

“ಜೈ ಶ್ರೀರಾಮ್​ ಎಂದು ಕೂಗಿದ್ದಕ್ಕೆ ಯುವಕರ ಮೇಲೆ ಹಲ್ಲೆ ಮಾಡಿದ್ದು ದುರದೃಷ್ಟಕರ. ಕಾನೂನಿನ ವಿರುದ್ಧವಾಗಿ ನಡೆದುಕೊಂಡರೆ ಯಾರನ್ನೂ ರಕ್ಷಣೆ ಮಾಡಲ್ಲ. ರಾಮನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗುವುದು ಸಹಜ. ಅದಕ್ಕೆ ಇನ್ನೊಬ್ಬರು ಬೇರೆ ಘೋಷಣೆ ಕೂಗಿದ್ದಾರೆ. ಯಾರನ್ನೂ ರಕ್ಷಣೆ ಮಾಡುವುದಾಗಲಿ, ಓಲೈಸುವುದಾಗಲಿ ಮಾಡಲ್ಲ. ಯಾವುದೇ ಮುಲಾಜಿಲ್ಲದೆ ಕಾನೂನಡಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...