ನೀನೊಬ್ಬ ಬಚ್ಚಾ, ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್‌: ವಿಜಯೇಂದ್ರ ವಿರುದ್ಧ ರಮೇಶ್‌ ಜಾರಕಿಹೊಳಿ ಕಿಡಿ

Date:

ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್‌, ಇಂದಿಗೂ ಯಡಿಯೂರಪ್ಪ ನಮ್ಮ ನಾಯಕ ಅದರಲ್ಲಿ ಎರಡು ಮಾತಿಲ್ಲ. ಇಂದಿಗೂ ನಾನು ಯಡಿಯೂರಪ್ಪ ಮೇಲೆ ಅಗೌರವದಿಂದ ಮಾತಾಡಿಲ್ಲ. ಇಂದಿಗೂ ಅವರ ಮೇಲೆ ಗೌರವ ಇದೆ. ಆದ್ರೆ ನೀನು ಸುಳ್ಳು ಹೇಳುವುದು ಬಿಡು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ನೇರವಾಗಿಯೇ ಸ್ವಪಕ್ಷದ ನಾಯಕ ರಮೇಶ್‌ ಜಾರಕಿಹೊಳಿ ಗುಡುಗಿದ್ದಾರೆ

ಗೋಕಾಕ್‌ನಲ್ಲಿ ಶನಿವಾರ ಮಾತನಾಡಿದ ಅವರು, “ನಮ್ಮಲ್ಲಿ ಜಗಳ ಇರೋದು ಅಧ್ಯಕ್ಷರ ಬದಲಾವಣೆಗೆ ಅಷ್ಟೇ, ಅಧ್ಯಕ್ಷ ಚೇಂಜ್ ಆದ್ರೆ ಓಕೆ ಇಲ್ಲವಾದ್ರೆ ಪಕ್ಷ ಸಂಘಟನೆ ಮಾಡ್ತೀವಿ. ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎನ್ನುವ ಮಾತು ನಿನ್ನ ಹತ್ರವೇ ಇರಲಿ” ಎಂದರು.

“ಪಕ್ಷಕ್ಕೆ ಬಂದು ಮೂರು ವರ್ಷ ಆಯ್ತು ಅಂತೀಯಾ, ನಾನು ಬಂದಿದ್ದು ನಿಮ್ಮ ಅಪ್ಪನ ಸಿಎಂ ಮಾಡಲು. ಈಗ ಅದೇ ಹರಾಮಿ ದುಡ್ಡಲ್ಲಿ ನೀನು ಓಡಾಡುತ್ತಿದ್ದೀಯಾ. ನೀನು ಇನ್ನು ಬಚ್ಚಾ ಇದೀಯಾ ವಿಜಯೇಂದ್ರ. ಒಬ್ಬ ಬಹುಸಂಖ್ಯಾತ ಯತ್ನಾಳ್ ಇದಾರೆ ಅದಕ್ಕಾಗಿ ಅವರನ್ನು ಒಪ್ಪಿಕೊಂಡಿದ್ದೇವೆ. ಲಿಂಗಾಯತರಲ್ಲಿ ಇನ್ನೂ ಸಾಕಷ್ಟು ನಾಯಕರಿದ್ದಾರೆ. ವಿಜಯೇಂದ್ರ ನೀನು ಸಣ್ಣ ಹುಡುಗಾ, ನಿನಗೆ ಅಧ್ಯಕ್ಷ ಸ್ಥಾನ ನೀಡುವದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೈಕಮಾಂಡ್ ವಿಜಯೇಂದ್ರನನ್ನು ಮುಂದುವರೆಸಿದ್ರೆ ಆಗಲಿ. ಪಕ್ಷದ ನಿರ್ಣಯ ನಾನು ಸ್ವಾಗತ ಮಾಡುತ್ತೇನೆ. ನೀನು ಅಧ್ಯಕ್ಷ ಸ್ಥಾನ ಬಿಟ್ಟು ಬೇರೆಯವರಿಗೆ ಅವಕಾಶ ಕೊಡು, ಸಣ್ಣ ಹುಡುಗ ಇದ್ದಿ ನಿನಗೆ ಏನು ಮಾತಾಡಬೇಕು ಗೊತ್ತಾಗಲ್ಲ. ಗೂಂಡಾಗಿರಿ ರೀತಿ ಮಾತಾಡುವುದನ್ನು ಬಿಡು. ನಮ್ಮ ಮುಂದೆ ಡ್ಯಾಶ್ ಡ್ಯಾಶ್ ಅಂತವರನ್ನು ತಂದು ಯುದ್ದಕ್ಕೆ ನಿಲ್ಲಿಸಿದ್ದಾರೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ‘ವಿಜಯೇಂದ್ರ ಕಲೆಕ್ಷನ್ ಮಾಸ್ಟರ್’

“ನಾನು ಶಿಕಾರಿಪುರಕ್ಕೆ ಬರ್ತೇನಿ, ವಿಜಯೇಂದ್ರ ಮನೆ ಮುಂದಿನಿಂದ ಪ್ರವಾಸ ಶುರು ಮಾಡ್ತೀನಿ. ನಿನ್ನ ಸವಾಲು ಸ್ವೀಕಾರ ಮಾಡಿದ್ದೇನೆ ನೀನು ದಿನಾಂಕ ನಿಗದಿ ಮಾಡು, ಬೆಂಬಲಿಗರು ಬರಲ್ಲಾ, ಗನ್ ಮ್ಯಾನ್ ಬರಲ್ಲ ನಾನು ಒಬ್ಬನೇ ಬರ್ತೇನಿ. ಅಲ್ಲಿಂದ ಪ್ರವಾಸ ಆರಂಭ ಮಾಡುತ್ತೇನೆ ಸಾಧ್ಯವಾದರೆ ತಡಿ ನೋಡೋಣ” ಎಂದು ಸವಾಲ್ ಹಾಕಿದರು.

“ನಿನ್ನನ್ನು ಬೇಕಾದ್ರೆ ರಾಜ್ಯದ ಮೂಲೆ ಮೂಲೆಯಲ್ಲಿ ಓಡಾಡಲು ಬಿಡದ ಶಕ್ತಿ ನನಗಿದೆ, ನಿನ್ನಷ್ಟು ಕೀಳು ಮಟ್ಟದ ರಾಜಕಾರಣಿ ನಾನು ಅಲ್ಲಾ. ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಗೌರವ ಇದೆ. ಆದರೆ ವಿಜಯೇಂದ್ರ ಬಗ್ಗೆ ನನಗೆ ಗೌರವ ಇಲ್ಲ, ವಿಜಯೇಂದ್ರ ಬೆನ್ನು ಹತ್ರಿದ್ರೆ ಯಡಿಯೂರಪ್ಪ ನವರೇ ಹಾಳಾಗ್ತಿರಿ. ಅವರನ್ನು ಬದಲಿಸಿ ಹೊಸಬರಿಗೆ ಅವಕಾಶ ಕೊಡಿ. ಇನ್ನೇನಿದ್ದರೂ ಯಡಿಯೂರಪ್ಪ ಅವರೇ ನೀವು ಮುಖ್ಯಮಂತ್ರಿ ಆಗಲ್ಲ. ಪದೇ ಪದೇ ಸೈಕಲ್ ಮೇಲೆ ಓಡಾಡಿದ್ದೀನಿ ಅಂತಾ ಹೇಳಬೇಡಿ. ಅವಮಾನ ಆಗುತ್ತೆ. ಅದರ ಎರಡು ಪಟ್ಟು ನೀವು ಲಾಭ ಪಡೆದುಕೊಂಡಿದ್ದೀರಿ” ಎಂದು ಕಿಚಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...