ಬಿಜೆಪಿಗೆ ಮರಳಿ ಹೋಗುವ ಬಗ್ಗೆ ಕನಸು ಮನಸಿನಲ್ಲೂ ಯೋಚಿಸಿಲ್ಲ: ಗಾಲಿ ಜನಾರ್ದನ ರೆಡ್ಡಿ

Date:

  • ಬಿಜೆಪಿ ನನ್ನ ಪಾಲಿಗೆ ನೂರಕ್ಕೆ ನೂರರಷ್ಟು ಮುಗಿದ ಅಧ್ಯಾಯ
  • ಸ್ವತಂತ್ರವಾಗಿಯೇ ಮುಂದೆ ಹೋಗುತ್ತೇನೆ: ಗಾಲಿ ಜನಾರ್ದನ ರೆಡ್ಡಿ 

ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ. ಈಗ ಅದು ನನ್ನ ಪಾಲಿಗೆ ನೂರಕ್ಕೆ ನೂರರಷ್ಟು ಮುಗಿದ ಅಧ್ಯಾಯ ಎಂದು ಗಂಗಾವತಿ ಕ್ಷೇತ್ರದ ಕೆಆರ್​ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದರು.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಯೋಚನೆಯೇ ಮಾಡಿಲ್ಲ. ಕೆಆರ್​ಪಿಪಿ ಪಕ್ಷದ ಸ್ಥಾಪಿಸಿದಾಗ ಯಾರೆಲ್ಲಾ ಎಷ್ಟೇ ಪ್ರಯತ್ನಿಸಿದರೂ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಕೊಳ್ಳಲಿಲ್ಲ. ಸ್ವತಂತ್ರವಾಗಿಯೇ ನಾನು ಮುಂದೆ ಹೋಗುತ್ತೇನೆ” ಎಂದರು.

“ಕಲ್ಯಾಣ ಕರ್ನಾಟಕ ಭಾಗದಲ್ಲಿ ನನ್ನ ಸಹಾಯ ಕೇಳುವ ಪರಿಸ್ಥಿತಿಯಲ್ಲಿ ಬಿಜೆಪಿ ಇಲ್ಲ. ಯಡಿಯೂರಪ್ಪ ಅವರನ್ನು ತಂದೆಯ ಸ್ಥಾನದಲ್ಲಿ ಗೌರವಿಸಿದರೆ, ಶ್ರೀರಾಮುಲು ಅವರನ್ನು ಮಗು ರೂಪದಲ್ಲಿ ನೋಡುತ್ತೇನೆ. ಅವರು ಆಯಾ ಪಕ್ಷದಲ್ಲಿ ಚೆನ್ನಾಗಿರಲಿ ಎಂದು ಬಯಸುವೆ ಹೊರತು ಅವರನ್ನು ಆಹ್ವಾನ ಮಾಡಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಆರನೇ ವರದಿ ಸರ್ಕಾರಕ್ಕೆ ಸಲ್ಲಿಕೆ

ರಾಜಕೀಯಕ್ಕಾಗಿ ಕೌಟುಂಬಿಕ ಸಂಬಂಧ ಕಡಿದುಕೊಂಡ ವಿಚಾರವಾಗಿ ಪ್ರತಿಕ್ರಿಯಿಸಿ, “ರಾಜಕೀಯ, ಸಿದ್ಧಾಂತ ಇಟ್ಟುಕೊಂಡು ನಾನು ಹೋಗುವಾಗ ಯಾವ ಸ್ನೇಹ, ಸಂಬಂಧದ ಪ್ರಶ್ನೆ ಬರುವುದೇ ಇಲ್ಲ. ನನ್ನ ಯೋಚನೆ, ಯೋಜನೆಗಳೇ ಪ್ರತ್ಯೇಕವಾಗಿರುವಾಗ ನನ್ನ ಹಾದಿಯಲ್ಲೇ ನಾನು ಹೋಗುತ್ತೇನೆ” ಎಂದು ಹೇಳಿದರು.

“ಲೋಕಸಭಾ ಚುನಾವಣೆ ದೃಷ್ಟಿಯಿಂದ ಯಾರೂ ನನ್ನ ಸಂಪರ್ಕ ಮಾಡಿಲ್ಲ, ನಾನೂ ಯಾರನ್ನೂ ಸಂಪರ್ಕ ಮಾಡಿಲ್ಲ. ನಾನು ಲೋಕಸಭಾ ಚುನಾವಣೆಗೆ ಸ್ಫರ್ಧೆ ಮಾಡುವುದಿಲ್ಲ. ಆದರೆ, ಎಂಟು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೆಲಸ ಮಾಡುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...