75 ವರ್ಷವಾದಾಗ ನಿವೃತ್ತಿ | ನಾನೂ ಇಲ್ಲ ಬೇರೆಯವರೂ ಇಲ್ಲ: ಮೋಹನ್ ಭಾಗವತ್

Date:

75 ವರ್ಷ ತುಂಬಿದ ನಂತರ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರ ನಿವೃತ್ತಿಯ ಕುರಿತಾದ ಸುದ್ದಿಯಾಗುತ್ತಿರುವ ನಡುವೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆ ಹೊರಬಿದ್ದಿದೆ. “ನಾನು ನಿವೃತ್ತಿ ಹೊಂದುತ್ತಿದ್ದೇನೆ ಎಂದು ಎಂದಿಗೂ ಹೇಳಿಲ್ಲ ಅಥವಾ ಯಾರಾದರೂ ನಿವೃತ್ತರಾಗಬೇಕೆಂದು ಸೂಚಿಸಿಲ್ಲ” ಎಂದು ಭಾಗವತ್ ಹೇಳಿಕೊಂಡಿದ್ದಾರೆ.

ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ದೆಹಲಿಯಲ್ಲಿ ನಡೆದ ಮೂರು ದಿನಗಳ ಉಪನ್ಯಾಸ ಸರಣಿಯ ಕೊನೆಯಲ್ಲಿ ಈ ಬಗ್ಗೆ ಮಾತನಾಡಿದ ಭಾಗವತ್, “ಆರ್‌ಎಸ್‌ಎಸ್ ನಿಲ್ಲಿಸಲು ಹೇಳುವವರೆಗೂ ನಾವು ಕೆಲಸ ಮಾಡಲು ಸಿದ್ಧರಿದ್ದೇವೆ” ಎಂದರು.

ಇದನ್ನು ಓದಿದ್ದೀರಾ? ಭಾಗವತ್, ಆರ್‌ಎಸ್‌ಎಸ್‌ ಜೊತೆ ಮೋದಿ ಇರುಸು-ಮುರುಸು: ಬಿಕ್ಕಟ್ಟಿನ ನಡುವೆ ಧನಕರ್ ರಾಜೀನಾಮೆ, ನಡೆದಿರುವುದೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾಗವತ್ ಮತ್ತು ಪ್ರಧಾನಿ ನರೇಂದ್ರ ಮೋದಿ ಇಬ್ಬರಿಗೂ ಮುಂದಿನ ತಿಂಗಳು 75 ವರ್ಷವಾಗಲಿದೆ. 2014ರ ಲೋಕಸಭೆ ಚುನಾವಣೆಗೂ ಮುನ್ನವೇ ಬಿಜೆಪಿ ಗೆಲುವಿನ ನಂತರ ಇಬ್ಬರು ಮಾಜಿ ಬಿಜೆಪಿ ಅಧ್ಯಕ್ಷರಾದ ಎಲ್ ಕೆ ಅಡ್ವಾಣಿ ಮತ್ತು ಎಂ ಎಂ ಜೋಶಿ ಅವರಿಗೆ 75 ವರ್ಷ ಕಳೆದ ಕಾರಣ ನಿವೃತ್ತಿ ನೀಡಲಾಗಿತ್ತು. ಇಬ್ಬರನ್ನೂ ಬದಿಗೊತ್ತಲಾಗಿದೆ. ಇದೀಗ ಮೋದಿ, ಭಾಗವತ್‌ಗೆ 75 ವರ್ಷವಾಗಲಿರುವ ಕಾರಣ ಅವರೂ ನಿವೃತ್ತಿ ಹೊಂದಬೇಕು ಎಂಬ ಆಗ್ರಹ ಕೇಳಿಬಂದಿದೆ. ಮೋದಿ ನಿವೃತ್ತಿ ಹೊಂದಬೇಕೆಂದು ಪರೋಕ್ಷವಾಗಿ ಭಾಗವತ್ ಕೂಡಾ ಹೇಳಿದ್ದರು.

“ನಾನು 50 ವರ್ಷಗಳಿಂದ ಶಾಖೆ ನಡೆಸುತ್ತಿದ್ದೇನೆ, ಆದ್ದರಿಂದ ಯಾರಾದರೂ ನನಗೆ ಅದರ ಬಗ್ಗೆ ಸಲಹೆ ನೀಡಿದರೆ, ನಾನು ಅಲ್ಲಿ ಪರಿಣಿತ. ರಾಜ್ಯವನ್ನು ನಡೆಸುವ ವಿಷಯಕ್ಕೆ ಬಂದಾಗ, ಅವರು ಅದನ್ನು ಬಹಳ ಸಮಯದಿಂದ ಮಾಡುತ್ತಿದ್ದಾರೆ. ಆದ್ದರಿಂದ ಅವರು ತಜ್ಞರು. ನಮಗೆ ಪರಸ್ಪರರ ಪರಿಣತಿ ತಿಳಿದಿದೆ. ಸಲಹೆಗಳನ್ನು ನೀಡಬಹುದು. ಆದರೆ ಅವರ ಕ್ಷೇತ್ರದಲ್ಲಿ ನಿರ್ಧಾರ ಅವರದು, ಮತ್ತು ನಮ್ಮ ಕ್ಷೇತ್ರದಲ್ಲಿ ನಮ್ಮದು” ಎಂದೂ ಬಿಜೆಪಿ ನಾಯಕತ್ವವನ್ನು ಉದ್ದೇಶಿಸಿ ಭಾಗವತ್ ಹೇಳಿದರು.

ಆರ್‌ಎಸ್‌ಎಸ್ ಸಿದ್ಧಾಂತವಾದಿ ಮೊರೊಪಂತ್ ಪಿಂಗಲೆ 75ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾತನಾಡಿದ್ದ ಮೋಹನ್ ಭಾಗವತ್ 75ನೇ ವಯಸ್ಸಿನಲ್ಲಿ ನಾಯಕರು ಹಿಂದೆ ಸರಿಯಬೇಕು ಎಂದು ಹೇಳಿದ್ದರು. “ನಿಮಗೆ 75 ವರ್ಷವಾದಾಗ ಶಾಲನ್ನು ಹೊದಿಸಿದರೆ ನೀವು ಒಂದು ಪಕ್ಕಕ್ಕೆ ಸರಿದು ಇತರರು ಕೆಲಸ ಮಾಡಲು ಬಿಡಬೇಕು ಎಂದು ಅರ್ಥ ಎಂದು ಪಿಂಗಲೆ ಹೇಳಿದ್ದರು” ಎಂದು ಭಾಗವತ್ ತಿಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...