ಯುಎಪಿಎ ಪ್ರಕರಣ: ಬಂಧಿತ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್, ಅಮಿತ್ ಚಕ್ರವರ್ತಿ ಏಳು ದಿನ ಪೊಲೀಸ್ ಕಸ್ಟಡಿಗೆ

Date:

ಚೀನಾ ಪರ ಪ್ರಚಾರಕ್ಕಾಗಿ ತಮ್ಮ ನ್ಯೂಸ್ ವೆಬ್‌ಸೈಟ್‌ಗೆ ಹಣ ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಸಂಸ್ಥೆಯ ಎಚ್‌ ಆರ್ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಚೀನಾ ಪರ ಪ್ರಚಾರ ನಡೆಸಲು ಅಮೆರಿಕದ ಉದ್ಯಮಿ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ ನ್ಯೂಸ್‌ಕ್ಲಿಕ್‌ ಹಣ ಪಡೆಯುತ್ತಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್’ ಲೇಖನಗಳ ಮೂಲಕ ಆರೋಪ ಹೊರಿಸಿತ್ತು. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಆಗಸ್ಟ್ 17ರಂದು ಎಫ್ಐಆರ್ ದಾಖಲಿಸಿದ್ದರು.

ಆಗಸ್ಟ್ 17ರಂದು ದಾಖಲಿಸಿದ್ದ ಎಫ್‌ಐಆರ್ ಹಿನ್ನೆಲೆಯಲ್ಲಿ ಅ.3ರ ಮಂಗಳವಾರ ಬೆಳಗ್ಗೆ ನ್ಯೂಸ್‌ಕ್ಲಿಕ್ ಮತ್ತು ಅದರ ಪತ್ರಕರ್ತರಿಗೆ ಸಂಬಂಧಿಸಿದ 30 ಸ್ಥಳಗಳಲ್ಲಿ ಏಕಕಾಲಕಕ್ಕೆ ದಾಳಿ ನಡೆಸಿ, ಶೋಧ ನಡೆಸಿತ್ತು. ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಪತ್ರಕರ್ತರನ್ನು ಬಿಡುಗಡೆ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಸಂಸ್ಥೆಯ ಎಚ್‌ ಆರ್ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಿರುವುದಾಗಿ ಮಂಗಳವಾರ ಸಂಜೆ ಮಾಹಿತಿ ನೀಡಿದ್ದರು.

“ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ವಿನಂತಿಸಿದ್ದೆವು. ಹಾಗಾಗಿ, ನ್ಯಾಯಾಲಯವು ಏಳು ದಿನ ಕಸ್ಟಡಿಗೆ ನೀಡಿದೆ” ಎಂದು ದೆಹಲಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚೀನಾ ಪರ ಪ್ರಚಾರಕ್ಕಾಗಿ ನ್ಯೂಸ್ ಪೋರ್ಟಲ್ ಹಣವನ್ನು ಪಡೆದಿರುವ ಆರೋಪದ ಮೇಲೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆಯ ನಂತರ ನ್ಯೂಸ್‌ಕ್ಲಿಕ್ ಕಚೇರಿಯನ್ನು ದೆಹಲಿ ಪೊಲೀಸರು ಮಂಗಳವಾರ ಸಂಜೆ ಜಪ್ತಿ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...