ಬೆಂಗಳೂರಿನಲ್ಲಿ ನಿರ್ಮಲಾ ಸೀತಾರಾಮನ್: ’ಬಹಿರಂಗ ಚರ್ಚೆ’ಗೆ ಬರ್ತಾರಾ? ಬೆನ್ನು ತಿರುಗಿಸಿ ಓಡ್ತಾರಾ?

Date:

ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯವಾಗುತ್ತಿದೆಯೆಂಬ ಕೂಗಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉತ್ತರಿಸಬೇಕೆಂದು ಹಮ್ಮಿಕೊಳ್ಳಲಾಗಿರುವ ಬಹಿರಂಗ ಚರ್ಚೆಗೆ ನಿರ್ಮಲಾ ಅವರು ಬರುತ್ತಾರಾ ಅಥವಾ ಬೆನ್ನು ತಿರುಗಿಸಿ ಹೋ‌ಗುತ್ತಾರಾ ಎಂಬ ಕುತೂಹಲ ಹುಟ್ಟಿದೆ.

ರಾಜ್ಯದ ಜನರ ಪರವಾಗಿ ಜಾಗೃತ ಕರ್ನಾಟಕ ಸಂಘಟನೆ ಆಯೋಜಿಸಿರುವ ಚರ್ಚೆಗೆ ರಾಜ್ಯ ಸರ್ಕಾರದ ಭಾಗವಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಪಾಲ್ಗೊಳ್ಳುವುದಾಗಿ ಘೋಷಿಸಿದ್ದಾರೆ. ಕೇಂದ್ರದ ಪ್ರತಿನಿಧಿಯಾಗಿ ನಿರ್ಮಲಾ ಸೀತಾರಾಮನ್‌ ಅವರು ಬರಬೇಕೆಂದು ಆಗ್ರಹಿಸಲಾಗುತ್ತಿದೆ. ಶನಿವಾರ (ಇಂದು) ಸಂಜೆ 5.30ಕ್ಕೆ ಚರ್ಚೆಯನ್ನು ಏರ್ಪಡಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಅನೇಕರು ಈಗಾಗಲೇ ನಿರ್ಮಲಾ ಸೀತಾರಾಮನ್ ಅವರನ್ನು ಟ್ಯಾಗ್‌ ಮಾಡಿ ಒತ್ತಾಯಿಸಿದ್ದಾರೆ. ಇಂದು ಬೆಂಗಳೂರಿನಲ್ಲಿಯೇ ಹಣಕಾಸು ಸಚಿವರು ಇರುವುದು ಭರವಸೆಯನ್ನು ಹುಟ್ಟು ಹಾಕಿದೆ ಎಂದು ಕಾರ್ಯಕ್ರಮ ಸಂಘಟಕರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಯ ಮಾಧ್ಯಮ ಸಂಚಾಲಕ‌ ಕರುಣಾಕರ ಖಾಸಲೆಯವರು ಎಲ್ಲಾ ಮಾಧ್ಯಮದವರಿಗೆ ಕಳಿಸಿರುವ ಆಹ್ವಾನದಂತೆ – ಇಂದು (ಶನಿವಾರ) ಮಧ್ಯಾಹ್ನ 3.15ಕ್ಕೆ ಬೆಂಗಳೂರಿನ ಜಿ.ಎಂ.ರಿಜಾಯ್ಜ್ ಹೋಟೆಲಿನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಅವರು ಸಂಜೆಯ ಗಾಂಧಿಭವನದ ಮುಖಾಮುಖಿ ಚರ್ಚೆಗೆ ಬರುತ್ತಾರೋ ಇಲ್ಲವೋ ಗೊತ್ತಿಲ್ಲ. ಈಗಾಗಲೇ ಸಾಕಷ್ಟು ಏಕಮುಖಿ ಚರ್ಚೆ ಆಗಿದೆ. ಮುಖಾಮುಖಿ ಚರ್ಚೆಗೂ ಅವರು ಇಂದು ಸಂಜೆ ಬರುತ್ತಾರೆಂದು ಆಶಿಸುತ್ತೇವೆ” ಎಂದು ಸಂಘಟಕರು ತಿಳಿಸಿದ್ದಾರೆ.

ಬರ ಪರಿಹಾರ, ತೆರಿಗೆ ಪಾಲು ಕೊಡುವಲ್ಲಿ ಭಾರೀ ವಂಚನೆ ಸೇರಿದಂತೆ ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೂ ಇಳಿದಿದೆ. “ಉಚಿತ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ಖರ್ಚು ಮಾಡಿ, ನಮ್ಮ ಬಳಿ ಕೇಳುತ್ತಿದೆ. ಕೇಂದ್ರದಿಂದ ಬಿಡಿಗಾಸು ಕೂಡ ಬಾಕಿ ಇಲ್ಲ” ಎಂದು ನಿರ್ಮಲಾ ಸೀತಾರಾಮನ್ ಅವರು ವಾದ ಮಾಡುತ್ತಾ ಬಂದಿದ್ದಾರೆ.

ಆದರೆ ರಾಜ್ಯ ಸರ್ಕಾರವು ಕೇಂದ್ರದ ವಾದವನ್ನು ತಳ್ಳಿ ಹಾಕಿದೆ. “ನಮ್ಮ ಕಲ್ಯಾಣ ಕಾರ್ಯಕ್ರಮಗಳಿಗೆ ಕೇಂದ್ರದಿಂದ ಯಾವುದೇ ಹಣ ಬೇಡ. ಆದರೆ ನಮಗೆ ಬರಬೇಕಿರುವ ಬರ ಪರಿಹಾರವನ್ನು ಮತ್ತು ತೆರಿಗೆ  ಪಾಲನ್ನು ಪಾವತಿ ಮಾಡಲಿ” ಎಂದು ದಾಖಲೆಗಳನ್ನು ಇಟ್ಟು ಮಾತನಾಡುತ್ತಿರುವ ಕಂದಾಯ ಸಚಿವರು ಸಂವಾದಕ್ಕೂ ಸೈ ಎಂದಿದ್ದಾರೆ. ಸದ್ಯ ಕೇಂದ್ರದ ವಿತ್ತ ಸಚಿವರು, ಚರ್ಚೆಗೆ ಬರುತ್ತಾರಾ ಅಥವಾ ಹಿಟ್ ಅಂಡ್ ರನ್‌ ಮಾಡುತ್ತಾರಾ- ಎಂಬ ಕುತೂಹಲ ಕನ್ನಡಿಗರಲ್ಲಿ ಮೂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...