ಅಪರಾಧಗಳನ್ನು ನಿಯಂತ್ರಿಸಲಾಗದಿದ್ದರೆ, ನಿತೀಶ್ ಪುತ್ರ ನಿಶಾಂತ್‌ಗೆ ಜವಾಬ್ದಾರಿ ಹಸ್ತಾಂತರಿಸಲಿ: ಮಾಜಿ ಸಿಎಂ ರಾಬ್ರಿ ದೇವಿ

Date:

ಬಿಹಾರದಲ್ಲಿ ನಡೆಯುವ ಅಪರಾಧಗಳನ್ನು ನಿಯಂತ್ರಿಸಲಾಗದಿದ್ದರೆ ನಿತೀಶ್ ಕುಮಾರ್ ಸರ್ಕಾರವು ಅವರ ಪುತ್ರ ನಿಶಾಂತ್‌ ಕುಮಾರ್ ಅವರಿಗೆ ಹಸ್ತಾಂತರಿಸಲಿ ಎಂದು ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಸೋಮವಾರ ಹೇಳಿದ್ದಾರೆ. ಇನ್ನು ಒಂದು ದಿನದ ಹಿಂದೆಯಷ್ಟೇ ರಾಷ್ಟ್ರೀಯ ಲೋಕ ಮೋರ್ಚಾ(ಆರ್‌ಎಲ್‌ಎಂ) ಮುಖ್ಯಸ್ಥ ಉಪೇಂದ್ರ ಕುಶ್ವಾಹ ಇದೇ ಹೇಳಿಕೆಯನ್ನು ನೀಡಿದ್ದರು.

ಬಿಹಾರ ವಿಧಾನಸಭೆಯ ಮುಂಗಾರು ಅಧಿವೇಶನದ ಮೊದಲ ದಿನದಂದು ವಿಧಾನಸಭೆ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಬ್ರಿ ಅವರು, “ಬಿಹಾರದಲ್ಲಿ ಹೆಚ್ಚುತ್ತಿರುವ ಅಪರಾಧ ಘಟನೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಿತೀಶ್ ಅವರು ಸರ್ಕಾರವನ್ನು ನಡೆಸಲು ಅಸಮರ್ಥರಾಗಿದ್ದರೆ, ಜನರ ಹಿತದೃಷ್ಟಿಯಿಂದ ತಮ್ಮ ಮಗನಿಗೆ ಜವಾಬ್ದಾರಿಯನ್ನು ಹಸ್ತಾಂತರಿಸಬೇಕು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಆಧ್ಯಾತ್ಮಿಕತೆಯತ್ತ ಸಾಗುತ್ತಿದ್ದೇನೆ: ರಾಜಕೀಯ ಪ್ರವೇಶ ವದಂತಿಗೆ ತೆರೆ ಎಳೆದ ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರ ಅಪರಾಧಗಳನ್ನು ತಡೆಯಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿವೆ. ನಿತೀಶ್ ಗೃಹ ಖಾತೆಯನ್ನೂ ಹೊಂದಿದ್ದಾರೆ. ಅವರು ಹುದ್ದೆಗೆ ರಾಜೀನಾಮೆ ನೀಡಲು ಸಿದ್ಧರಿಲ್ಲದ ಕಾರಣ, ಅವರು ಕನಿಷ್ಠ ತಮ್ಮ ಮಗನಿಗೆ ಜವಾಬ್ದಾರಿಯನ್ನು ಹಸ್ತಾಂತರಿಸಬೇಕು, ಅವನು ಚಿಕ್ಕವನಾಗಿದ್ದು ಜವಾಬ್ದಾರಿ ಹೊಂದಿರುತ್ತಾನೆ” ಎಂದು ಅಭಿಪ್ರಾಯಿಸಿದ್ದಾರೆ.

ಅಕ್ಟೋಬರ್‌-ನವೆಂಬರ್‌ ನಡುವೆ ವಿಧಾನಸಭೆ ಚುನಾವಣೆಯನ್ನು ಎದುರಿಸಲಿರುವ ಬಿಹಾರದಲ್ಲಿ ಇದು ಅಧಿವೇಶನ ನಡೆಯುತ್ತಿದ್ದು ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ವಿಪಕ್ಷಗಳು ಎತ್ತಿವೆ. ಶುಕ್ರವಾರದವರೆಗೆ ಅಧಿವೇಶನ ನಡೆಯಲಿದ್ದು, ಪೂರಕ ಬಜೆಟ್ ಅನ್ನು ಅಂಗೀಕರಿಸಲಾಗುತ್ತದೆ.

ಇದನ್ನು ಓದಿದ್ದೀರಾ? ಬಿಹಾರ ಮತದಾರರ ಪಟ್ಟಿಯಲ್ಲಿ ಬಾಂಗ್ಲಾ, ಮ್ಯಾನ್ಮಾರ್, ನೇಪಾಳದವರ ಹೆಸರುಗಳು ಪತ್ತೆ; ಚುನಾವಣಾ ಆಯೋಗ

ಈ ನಡುವೆ ಮಾಜಿ ಕೇಂದ್ರ ಸಚಿವ ಮತ್ತು ಆರ್‌ಎಲ್‌ಎಂ ಮುಖ್ಯಸ್ಥ ಕುಶ್ವಾಹ ನಿತೀಶ್ ಅವರ ಬಳಿ ಜೆಡಿ(ಯು) ನಾಯಕತ್ವವನ್ನು ನಿಶಾಂತ್‌ಗೆ ಹಸ್ತಾಂತರಿಸುವಂತೆ ವಿನಂತಿಸಿದ್ದಾರೆ. ಆದರೆ ತಾನು ರಾಜಕೀಯದಿಂದ ದೂರು ಉಳಿಯುವುದಾಗಿ ಈ ಹಿಂದೆಯೇ ನಿಶಾಂತ್ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ತಾನು ಆಧ್ಯಾತ್ಮಿಕತೆಯತ್ತ ಸಾಗುತ್ತಿರುವುದಾಗಿ ಹೇಳಿದ್ದಾರೆ.

ಕಳೆದ ವರ್ಷ ಜುಲೈನಲ್ಲಿಯೂ ನಿಶಾಂತ್ ರಾಜಕೀಯ ಸೇರುವ ಬಗ್ಗೆ ವದಂತಿಗಳು ಹರಡಿದ್ದವು ಈ ಬಗ್ಗೆ ಪಟನಾ ಮಾರುಕಟ್ಟೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದ ನಿಶಾಂತ್, “ನಾನು ಆಧ್ಯಾತ್ಮಿಕತೆಯತ್ತ ಸಾಗುತ್ತಿದ್ದೇನೆ. ಹರೇ ರಾಮ ಹರೇ ಕೃಷ್ಣ ಭಜನೆಯನ್ನು ಕೇಳಲು ಸ್ಪೀಕರ್ ಖರೀದಿಸಲು ನಾನು ಇಲ್ಲಿಗೆ ಬಂದಿದ್ದೇನೆ. ನಾನು ಪ್ರತಿದಿನ ಬೆಳಿಗ್ಗೆ ನನ್ನ ಫೋನ್‌ನಲ್ಲಿ ಈ ಭಜನೆಯನ್ನು ಕೇಳುತ್ತೇನೆ. ಹೊಸ ಸಾಧನದೊಂದಿಗೆ, ನಾನು ಭಜನೆಯನ್ನು ಇನ್ನಷ್ಟು ಸುಲಭವಾಗಿ ಕೇಳಲು ಈ ಸ್ಪೀಕರ್ ನನಗೆ ಸಹಾಯ ಮಾಡುತ್ತದೆ” ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...