ನಿತೀಶ್ ಕುಮಾರ್ ಮುಂದಿನ ಪ್ರಧಾನಿ? ಬಿಹಾರ ಸಿಎಂ ಕಿಂಗ್‌ಮೇಕರ್ ಎಂದ ನೆಟ್ಟಿಗರು

Date:

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ‘ಅಬ್‌ ಕಿ ಬಾರ್ 400 ಪಾರ್’ ಎಂಬ ಹೇಳಿಕೆ ಈಗಾಗಲೇ ಹುಸಿಯಾಗುವ ಎಲ್ಲ ಸಾಧ್ಯತೆಗಳಿರುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಂದಿನ ಪ್ರಧಾನಿಯಾಗಲಿದ್ದಾರಾ? ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಹಾಗೆಯೇ ನಿತೀಶ್ ಕಿಂಗ್‌ಮೇಕರ್ ಆಗಲಿದ್ದಾರೆ ಎಂದಿದ್ದಾರೆ.

ಪ್ರಮುಖ ಕ್ಷಣಗಳಲ್ಲಿ ಪಕ್ಷದಿಂದ ಪಕ್ಷಕ್ಕೆ ಜಿಗಿಯುವ ಇತಿಹಾಸವನ್ನು ಹೊಂದಿರುವ ನಿತೀಶ್ ಕುಮಾರ್ ಈಗ ಕಿಂಗ್‌ಮೇಕರ್ ಆಗುವ ಸಾಧ್ಯತೆಯಿದೆ. ಇಂಡಿಯಾ ಒಕ್ಕೂಟವು 230ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು ಮ್ಯಾಜಿಕ್ ಫಿಗರ್ 272ರಿಂದ ದೂರವಿದೆ. ಬಿಜೆಪಿಗೆ 272ಕ್ಕೂ ಅಧಿಕ ಸ್ಥಾನ ಬಂದರೂ ಕೂಡಾ ನಿತೀಶ್ ಕುಮಾರ್ ಇಂಡಿಯಾ ಕೂಟ ಸೇರಿದರೆ ಫಲಿತಾಂಶವೇ ಬದಲಾಗುವ ಸಾಧ್ಯತೆಯಿದೆ ಎನ್ನುತ್ತಾರೆ ನೆಟ್ಟಿಗರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 4,000ಕ್ಕಿಂತ ಹೆಚ್ಚು ಸ್ಥಾನ: ಟ್ರೋಲ್ ಆದ ಬಿಹಾರ ಸಿಎಂ ನಿತೀಶ್ ಕುಮಾರ್

ಸಾಮಾಜಿಕ ಮಾಧ್ಯಮದಲ್ಲಿ ನಿತೀಶ್ ಕುಮಾರ್ ಬಗ್ಗೆ ಸಾಕಷ್ಟು ಮೀಮ್ಸ್‌ಗಳು ಹರಿದಾಡುತ್ತಿದೆ. ಜನತಾ ದಳ ಯುನೈಟೆಡ್ (ಜೆಡಿಯು) ನಾಯಕ ಮತ್ತೆ ಪಕ್ಷ ಬದಲಾಯಿಸಬಹುದು. ರಾಹುಲ್ ಗಾಂಧಿಯ ಕಾಂಗ್ರೆಸ್‌ ಕೈ ಹಿಡಿಯಬಹುದು, ಹೀಗಾದರೆ ನಿತೀಶ್ ಕುಮಾರ್‌ಗೆ ಪ್ರಧಾನಿ ಹುದ್ದೆ ನೀಡಲಾಗುವುದು ಎಂದು ನೆಟ್ಟಿಗರು ಊಹಿಸಿದ್ದಾರೆ.

“ಬಿಜೆಪಿ ಏಕಾಂಗಿಯಾಗಿ 272 ದಾಟದಿದ್ದರೆ ಎನ್‌ಡಿಎ ಸರ್ಕಾರ ಅಸ್ಥಿರವಾಗಲಿದೆ. ನಿತೀಶ್, ನಾಯ್ಡು ಅವರಂತಹವರನ್ನು ನಂಬಲು ಸಾಧ್ಯವಿಲ್ಲ. ಆದ್ದರಿಂದ ಇಂಡಿಯಾ ಒಕ್ಕೂಟವು ‘ನಿತೀಶ್‌ ಜೀ ಬನ್ನಿ ನಿಮ್ಮನ್ನು ನಾವು ಪಿಎಂ ಮಾಡುತ್ತೇವೆ’ ಎಂದು ಹೇಳಬೇಕಾಗುತ್ತದೆ. ಆಗ ನಿತೀಶ್ ಹಿಂದಿರುಗಿ ನೋಡದೆ ಇಂಡಿಯಾ ಒಕ್ಕೂಟ ಸೇರುತ್ತಾರೆ. ಬಹುಶಃ ಈಗಾಗಲೇ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಸಭೆ ಸೇರಿರಬಹುದು” ಎಂದು ಬಳಕೆದಾರರೊಬ್ಬರು ಹೇಳಿದ್ದಾರೆ.

“ಎನ್‌ಡಿಎ ಸಂಖ್ಯೆಗಳು ಅರ್ಥಹೀನವಾದುದ್ದು, ಬಿಜೆಪಿಗೆ 272 ಬರದಿದ್ದರೆ, ನಿತೀಶ್ ಕುಮಾರ್, ಅಜಿತ್ ಪವಾರ್, ಚಂದ್ರಬಾಬು ನಾಯ್ಡು, ಕುಮಾರಸ್ವಾಮಿ ಅವರಂತಹವರು ಪಕ್ಷವನ್ನು ಬದಲಾಯಿಸುವುದಿಲ್ಲ ಎಂದು ನೀವು ಭಾವಿಸುತ್ತೀರಾ” ಎಂದು ಮತ್ತೊಬ್ಬ ನೆಟ್ಟಿಗರು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...