‘ಇಂಡಿಯಾ’ ಒಕ್ಕೂಟದಿಂದ ನಿತೀಶ್ ಕುಮಾರ್‌ಗೆ ಪ್ರಧಾನಿ ಸ್ಥಾನದ ಆಫರ್ ಬಂದಿತ್ತು: ಜೆಡಿಯು ಮುಖಂಡ ಆರೋಪ

Date:

“2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದಂತೆಯೇ ಇಂಡಿಯಾ ಮೈತ್ರಿಕೂಟದ ಹಲವು ಮಂದಿ ಮುಖಂಡರು ನಿತೀಶ್ ಕುಮಾರ್ ಅವರನ್ನು ಸಂಪರ್ಕ ಮಾಡಿ ಪ್ರಧಾನಿ ಹುದ್ದೆಯ ಆಫರ್ ನೀಡಿದ್ದರು. ಆದರೆ ನಾವು ತಿರಸ್ಕರಿಸಿದೆವು” ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ ಸಿ ತ್ಯಾಗಿ ಗಂಭೀರ ಆರೋಪ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, “ಲೋಕಸಭಾ ಚುನಾವಣೆಯ ಫಲಿತಾಂಶದ ಸಮಯದಲ್ಲಿ ಎನ್‌ಡಿಎ ತೊರೆದು ಇಂಡಿಯಾ ಒಕ್ಕೂಟ ಸೇರಿದರೆ ನಿತೀಶ್ ಕುಮಾರ್ ಅವರನ್ನೇ ಪ್ರಧಾನಿ ಮಾಡುವುದಾಗಿ ಆಫರ್ ನೀಡಿದ್ದರು. ಇದನ್ನು ದೃಢೀಕರಿಸುವ ಫೋನ್ ದಾಖಲೆಗಳು ನಮ್ಮ ಬಳಿ ಇವೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಸಭಾ ಚುನಾವಣೆಗೂ ಮುನ್ನ ಇಂಡಿಯಾ ಮೈತ್ರಿಕೂಟವನ್ನು ನಿತೀಶ್ ಕುಮಾರ್ ಅವರು ತೊರೆಯಲು ಕಾರಣ ಏನು ಎಂಬ ಬಗ್ಗೆ ಕೇಳಿದ್ದಕ್ಕೆ ಉತ್ತರಿಸಿದ ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ ಸಿ ತ್ಯಾಗಿ, “ಇಂಡಿಯಾ ಮೈತ್ರಿಕೂಟದ ಮೊದಲ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪ್ರಾದೇಶಿಕ ಪಕ್ಷಗಳ ಮುಖಂಡರು ನಿತೀಶ್ ಕುಮಾರ್ ಅವರನ್ನೇ ಸಂಚಾಲಕರನ್ನಾಗಿ ಮಾಡುವ ಆಸಕ್ತಿ ಹೊಂದಿದ್ದರು. ಆದರೆ ಅರವಿಂದ್ ಕೇಜ್ರಿವಾಲ್ ಮತ್ತು ಮಮತಾ ಬ್ಯಾನರ್ಜಿ ಅವರು ಪಿತೂರಿ ಮಾಡಿದ್ದರಿಂದ ಅವರಿಗೆ ಆ ಸ್ಥಾನ ಲಭಿಸಿಲ್ಲ. ಆ ಬಳಿಕ ಪ್ರಧಾನಿ ಹುದ್ದೆಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಕೂಡ ಶಿಫಾರಸು ಮಾಡಿದರು” ಎಂದು ತಿಳಿಸಿದ್ದಾರೆ.

“ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗುವುದಕ್ಕೆ ವಿರೋಧ ವ್ಯಕ್ತಪಡಿಸಿ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಪ್ರಶ್ನೆಗಳನ್ನು ಎತ್ತಿದರು. ಎಲ್ಲರನ್ನೂ ಒಟ್ಟುಗೂಡಿಸಲು ಆಗ ಶ್ರಮಿಸಿದ್ದು ನಿತೀಶ್ ಕುಮಾರ್. ಆದರೆ, ಅವರನ್ನು ಸಂಚಾಲಕರನ್ನಾಗಿ ಮಾಡುವುದರಿಂದ ತಪ್ಪಿಸಿದರು. ಇಂತಹ ಅವಮಾನವನ್ನು ಎದುರಿಸುವುದು ನಮಗೆ ಸ್ವೀಕರಿಸಲು ಆಗಿಲ್ಲ. ನಾವು ಅವರ ಒಳಗಿನ ಉದ್ದೇಶವನ್ನು ಅರ್ಥಮಾಡಿಕೊಂಡೆವು. ಹಾಗಾಗಿಯೇ, ಜೆಡಿಯು ಇಂಡಿಯಾ ಮೈತ್ರಿಕೂಟದೊಂದಿಗಿನ ಸಂಬಂಧವನ್ನು ಮುರಿದುಕೊಂಡು ಎನ್‌ಡಿಎ ಸೇರಿದೆ” ಎಂದು ಹೇಳಿಕೆ ನೀಡಿದ್ದಾರೆ.

“ಚುನಾವಣೆಗೂ ಮೊದಲು ನಿತೀಶ್ ಕುಮಾರ್ ಅವರು ಸಂಚಾಲಕರಾಗುವುದನ್ನು ಇಷ್ಟಪಡದ ಇಂಡಿಯಾ ಮೈತ್ರಿಕೂಟದ ನಾಯಕರು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದಂತೆಯೇ ಪ್ರಧಾನಿ ಹುದ್ದೆಯನ್ನು ಆಫರ್ ನೀಡಿದರು. ನಾವು ಅದನ್ನು ತಿರಸ್ಕರಿಸಿ ಎನ್‌ಡಿಎ ಜೊತೆಗೆ ಮೈತ್ರಿ ಮುಂದುವರಿಸಿದ್ದೇವೆ. ನರೇಂದ್ರ ಮೋದಿಯವರನ್ನು ಎನ್‌ಡಿಎ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪಿದ್ದೇವೆ” ಎಂದು ಜೆಡಿಯು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ತ್ಯಾಗಿ ತಿಳಿಸಿದ್ದಾರೆ.

‘ನಮಗೆ ಈವರೆಗೆ ಅಂತಹ ಯಾವುದೇ ಮಾಹಿತಿ ಇಲ್ಲ’ ಎಂದ ಜೆಡಿಯು ಮುಖಂಡ!

ಕೆ ಸಿ ತ್ಯಾಗಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಇನ್ನೋರ್ವ ಜೆಡಿಯು ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ಕುಮಾರ್ ಝಾ, “ನಿತೀಶ್ ಕುಮಾರ್‌ ಅವರಿಗೆ ಇಂಡಿಯಾ ಒಕ್ಕೂಟದಿಂದ ಪ್ರಧಾನಿ ಆಫರ್ ಬಂದ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ” ಎಂದು ವ್ಯತಿರಿಕ್ತವಾದ ಹೇಳಿಕೆ ನೀಡಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆಗೆ ಮಾತನಾಡಿರುವ ಅವರು, “ನಮ್ಮ ಮುಖ್ಯಮಂತ್ರಿಯವರಿಗೋ ಅಥವಾ ನಮ್ಮ ಪಕ್ಷಕ್ಕೋ ಈ ಬಗ್ಗೆ ತಿಳಿದಿಲ್ಲ. ನಿನ್ನೆ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ, ನಿತೀಶ್ ಕುಮಾರ್ ಅವರು ನಾವು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದೆವು. ಅದನ್ನು ಮುಂದುವರಿಸುತ್ತೇವೆ ಎಂದಷ್ಟೇ ಹೇಳಿದ್ದಾರೆ. ಎನ್‌ಡಿಎ ಒಕ್ಕೂಟದಿಂದ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಬಯಸುತ್ತೇವೆ ಎಂದು ನಿತೀಶ್ ಅವರೇ ಹೇಳಿದ್ದಾರೆ. ನಿತೀಶ್ ಕುಮಾರ್‌ ಅವರಿಗೆ ಪ್ರಧಾನಿ ಹುದ್ದೆಯ ಆಫರ್ ಬಂದಿರುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ” ಎಂದು ಹೇಳುವ ಮೂಲಕ ಜೆಡಿಯು ಮುಖಂಡ ಕೆ ಸಿ ತ್ಯಾಗಿ ನೀಡಿದ್ದ ಹೇಳಿಕೆಗೆ ಸಂಜಯ್ ಕುಮಾರ್ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...