ಬಿಜೆಪಿ ಜೊತೆ ನಿತೀಶ್ ಮರು ಹೊಂದಾಣಿಕೆ; ಜೆಡಿಯು ಪ್ರಧಾನ ಕಾರ್ಯದರ್ಶಿ ರಾಜೀನಾಮೆ

Date:

ಬಿಹಾರದ ಜೆಡಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅಲಿ ಅಶ್ರಫ್ ಫಾತ್ಮಿ ಅವರು ಜೆಡಿಯುಗೆ ರಾಜೀನಾಮೆ ನೀಡಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ಜೊತೆ ಇತ್ತೀಚೆಗೆ ಮರು ಹೊಂದಾಣಿಕೆ ಮಾಡಿಕೊಂಡಿದ್ದರಿಂದ ‘ಆಘಾತ’ಕ್ಕೆ ಒಳಗಾಗಿದ್ದೇನೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ, ಆರ್‌ಜೆಡಿಯಲ್ಲಿದ್ದ ಫಾತ್ಮಿ ಅವರು ಮತ್ತೆ ಆರ್‌ಜೆಡಿಗೆ ಮರಳುವ ಸಾಧ್ಯತೆಗಳಿವೆ. ಆದರೆ, ಅವರು ಈ ಲೋಕಸಭಾ ಚುನಾವಣೆಯಲ್ಲಿ ತಮ್ಮ ಆಯ್ಕೆಯ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿರುವುದಾಗಿ ಹೇಳಿದ್ದಾರೆ.

“1980ರ ದಶಕದಲ್ಲಿ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್, ನಿತೀಶ್ ಕುಮಾರ್ ಮತ್ತು ನಾನು ಒಟ್ಟಿಗೆ ಇದ್ದಾಗ ನಾನು ನನ್ನ ರಾಜಕೀಯ ಜೀವನ ಪ್ರಾರಂಭಿಸಿದ್ದೆ. ಈ ನಡುವೆ, ಯಾದವ್ ಮತ್ತು ನನ್ನ ನಡುವೆ ಭಿನ್ನಾಭಿಪ್ರಾಯಗಳು ಕಾಣಿಸಿಕೊಂಡಿದ್ದವು. ಆದರೂ ತೇಜಸ್ವಿ ಯಾದವ್ ಅವರನ್ನು ಆರ್‌ಜೆಡಿ ಅಧ್ಯಕ್ಷನಾಗಿ ನೇಮಿಸಿದ್ದು, ನನಗೆ ಸಂತೋಷವಾಗಿತ್ತು” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಹಾರದಲ್ಲಿ ಜೆಡಿಯು ಮತ್ತು ಆರ್‌ಜೆಡಿ ಸಮ್ಮಿಶ್ರ ಸರ್ಕಾರ ಉತ್ತಮವಾಗಿ ನಡೆಯುತ್ತಿತ್ತು. ನಿತೀಶ್ ಕುಮಾರ್ ಅವರು ಬಿಜೆಪಿಯ ಪ್ರಾಬಲ್ಯವನ್ನು ವಿರೋಧಿಸುವ ‘ಇಂಡಿಯಾ’ ನಾಯಕಯಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ಆದರೆ, ಅವರು ಜನವರಿಯಲ್ಲಿ ಮತ್ತೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದರಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ಅವರು ತಮ್ಮ ಈ ನಡೆಯ ಬಗ್ಗೆ ಸೂಕ್ತ ಕಾರಣವನ್ನೂ ನೀಡಲಿಲ್ಲ” ಎಂದು ಆರೋಪಿಸಿದ್ದಾರೆ.

“ಅಂದಿನಿಂದ ನಾನು ಮಾನಸಿಕ ಅಶಾಂತಿ ಅನುಭವಿಸುತ್ತಿದ್ದೆ. ನನ್ನ ಸ್ವಂತ ನೈತಿಕ ಮೌಲ್ಯಗಳಿಗೆ ನ್ಯಾಯ ಸಲ್ಲಿಸಲು, ನಾನು ಪಕ್ಷದ ಹುದ್ದೆ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದೇ ಇದ್ದಾಗ ಆರ್‌ಜೆಡಿ ತೊರೆದಿದ್ದೆ, ನಾನು ಈ ಬಾರಿ ಸ್ಪರ್ಧಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ನಾಲ್ಕು ಬಾರಿ ದರ್ಭಾಂಗಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿರುವ ಮಾಜಿ ಕೇಂದ್ರ ಸಚಿವರ ಫಾತ್ಮಿ ಅವರು ಈ ಬಾರಿ ಉತ್ತರ ಬಿಹಾರದ ಮಧುಬನಿಯಿಂದ ಸ್ಪರ್ಧಿಸಲು ಉದ್ದೇಶಿಸಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, “ಜೆಡಿಯು ತೊರೆದ ನಂತರ ನಾನು ಲಾಲು ಅವರೊಂದಿಗೆ ಮಾತನಾಡಿಲ್ಲ. ಆದರೆ, ನಾನು ಅವರ ಪಕ್ಷದಲ್ಲಿ ಇಲ್ಲದಿದ್ದಾಗಲೂ ಅವರ ಆರೋಗ್ಯ ವಿಚಾರಿಸಲು ಭೇಟಿಯಾಗುತ್ತಿದ್ದೆ. ನಾವು ಮುಂದಿನ ದಿನಗಳಲ್ಲಿ ಭೇಟಿಯಾಗಬಹುದು. ಎಲ್ಲವನ್ನೂ ಸಾರ್ವಜನಿಕಗೊಳಿಸಲಾಗುವುದು” ಎಂದಿದ್ದಾರೆ.

ಫಾತ್ಮಿ ಅವರು ಪಕ್ಷ ತೊರೆದಿದ್ದನ್ನು ಜೆಡಿಯು “ದ್ರೋಹ’ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...